Get Updates
Get notified of breaking news, exclusive insights, and must-see stories!

ಕಾವೇರಿ ಸ್ಕೀಂ: ಕರ್ನಾಟಕದ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಮೇ 16: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ಕಾವೇರಿ ನಿರ್ವಹಣಾ ಸ್ಕೀಂ ಕರಡನ್ನು ಅಂತಿಮಗೊಳಿಸುವ ಕಾರ್ಯವನ್ನು ತಡೆಹಿಡಿಯಬೇಕು ಎಂಬ ಕರ್ನಾಟಕದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ತಿರಸ್ಕರಿಸಿದೆ.

ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೆರಿಗಳ ನಡುವೆ ಕಾಲಕಾಲಕ್ಕೆ ನೀರು ಹಂಚಿಕೆ ಸಂಬಂಧ ಸೂಚನೆಗಳನ್ನು ನೀಡಲು ಕೇಂದ್ರ ಸರ್ಕಾರವೇ ಅಧಿಕಾರ ಹೊಂದುವಂತೆ ಕಾವೇರಿ ನಿರ್ವಹಣಾ ಸ್ಕೀಂನ ಕರಡಿನ ನಿಯಮದಲ್ಲಿ ಬದಲಾವಣೆ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಸ್ಕೀಂನಲ್ಲಿ ಬದಲಾವಣೆ ಮಾಡಿ ಅದನ್ನು ಗುರುವಾರ ಸಲ್ಲಿಕೆ ಮಾಡುವಂತೆ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರಿಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ನಿರ್ದೇಶಿಸಿದೆ.

SC rejects karnatakas plea to hold finalisation of draft cauvery scheme

ಮುಂದೂಡಲು ನಕಾರ
ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿರುವುದರಿಂದ ಕಾವೇರಿ ಸ್ಕೀಂನ ಕರಡನ್ನು ಅಂತಿಮಗೊಳಿಸುವುದನ್ನು ಜುಲೈ ಮೊದಲ ವಾರದವರೆಗೂ ತಡೆಹಿಡಿಯಬೇಕು ಎಂಬ ಕರ್ನಾಟಕದ ಪರ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರ ಮನವಿಯನ್ನು ಪೀಠ ಒಪ್ಪಿಕೊಳ್ಳಲಿಲ್ಲ.

ಕರಡು ಸ್ಕೀಂ ಸಲ್ಲಿಕೆ ಕುರಿತು ಎಲ್ಲ ರಾಜ್ಯಗಳೂ ಕಾಳಜಿ ಹೊಂದಿವೆ. ಆದರೆ, ಕರ್ನಾಟಕ ಸರ್ಕಾರದ ಸಚಿವರ ನೆರವು ಮತ್ತು ನಿರ್ದೇಶನಗಳಿಲ್ಲದ ಕಾರಣ ಜುಲೈ ಮೊದಲ ವಾರದವರೆಗೂ ವಿಚಾರಣೆಯನ್ನು ಮುಂದೂಡಬೇಕು ಎಂದು ದಿವಾನ್ ಮನವಿ ಮಾಡಿದರು.

SC rejects karnatakas plea to hold finalisation of draft cauvery scheme

ಆದರೆ, ಕರಡು ಸ್ಕೀಂ ಸಿದ್ಧಪಡಿಸಬೇಕಿರುವುದು ಕೇಂದ್ರ ಸರ್ಕಾರ ಎಂದು ಖಾರವಾಗಿ ನುಡಿದ ಪೀಠ ಮನವಿಯನ್ನು ತಳ್ಳಿಹಾಕಿತು.

ಕರಡು ಸ್ಕೀಂನಲ್ಲಿ ಮಾಡಲಾದ ಬದಲಾವಣೆಗಳನ್ನು ಪರಿಗಣಿಸುವ ಸಂಬಂಧದ ವಿಚಾರಣೆಯನ್ನು ನ್ಯಾಯಪೀಠ ಗುರುವಾರಕ್ಕೆ ನಿಗದಿಪಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+