ಕುರಾನ್ನ 26 ಪದ್ಯಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿ ವಜಾ, 50 ಸಾವಿರ ರೂ ದಂಡ
ನವದೆಹಲಿ, ಏಪ್ರಿಲ್ 12: ಕುರಾನ್ ಧಾರ್ಮಿಕ ಗ್ರಂಥದ 26 ಉಕ್ತಿಗಳು ಧರ್ಮವನ್ನು ನಂಬದವರ ಮೇಲೆ ದಾಳಿ ನಡೆಸುವ ಇಸ್ಲಾಮಿಕ್ ಭಯೋತ್ಪಾದನಾ ಗುಂಪುಗಳನ್ನು ಸಮರ್ಥಿಸಿಕೊಳ್ಳುವಂತೆ ಇರುವುದರಿಂದ ಅವುಗಳನ್ನು ತೆಗೆದುಹಾಕಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಸಯ್ಯದ್ ವಾಸೀಂ ರಿಜ್ವಿ ಅವರಿಗೆ ಸುಪ್ರೀಂಕೋರ್ಟ್ 50,000 ರೂ. ದಂಡ ವಿಧಿಸಿದೆ.
'ಇದು ಸಂಪೂರ್ಣ ನಿಷ್ಪ್ರಯೋಜಕ ಅರ್ಜಿ' ಎಂದು ನ್ಯಾಯಮೂರ್ತಿ ರೊಹಿಂಗ್ಟನ್ ಎಫ್ ನಾರಿಮನ್ ನೇತೃತ್ವದ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿತು.
ಕುರಾನ್ನಲ್ಲಿರುವ 26 ಪದ್ಯಗಳು ಈ ಮಣ್ಣಿನ ಕಾನೂನನ್ನು ಉಲ್ಲಂಘಿಸಿವೆ. ಉಗ್ರವಾದ ಮತ್ತು ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಮತ್ತು ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯೊಡ್ಡುತ್ತಿದೆ. ಈ ಉಕ್ತಿಗಳು ಅಸಾಂವಿಧಾನಿಕ, ಪರಿಣಾಮರಹಿತ ಮತ್ತು ಕಾರ್ಯರಹಿತವಾಗಿವೆ ಎಂದು ಘೋಷಣೆ ಮಾಡುವಂತೆ ರಿಜ್ವಿ ನ್ಯಾಯಾಲಯವನ್ನು ಕೋರಿದ್ದರು.

ಅರ್ಜಿಯ ವಿಚಾರದ ಕುರಿತು ಅಭಿಪ್ರಾಯ ಸಂಗ್ರಹಿಸಲು ಧಾರ್ಮಿಕ ಪರಿಣತರ ಸಮಿತಿಯನ್ನು ರಚಿಸಬೇಕು. ಜತೆಗೆ ಈ ಬಗ್ಗೆ ಕೇಂದ್ರ ಸರ್ಕಾರವು ಶ್ವೇತಪತ್ರ ಹೊರಡಿಸಬೇಕು ಅಥವಾ ಸೂಕ್ತ ಮಸೂದೆ ಅಂಗೀಕರಿಸಬೇಕು ಎಂದು ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದರು.
ಕಳೆದ ತಿಂಗಳು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು (ಎನ್ಸಿಎಂ) ಕುರಾನ್ ಕುರಿತಾದ ರಿಜ್ವಿ ಹೇಳಿಕೆಯನ್ನು ಹಿಂದಕ್ಕೆ ಪಡೆಯುವಂತೆ ನೋಟಿಸ್ ಜಾರಿ ಮಾಡಿತ್ತು. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸಭೆ ನಡೆಸುವುದಾಗಿ ತಿಳಿಸಿತ್ತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications