ಕಲ್ಲಿದ್ದಲು ಹಗರಣ, ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ, ಆ.25 : ಕಲ್ಲಿದ್ದಲು ಹಂಚಿಕೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ಆದೇಶವೊಂದನ್ನು ನೀಡಿದೆ. ಯುಪಿಎ ಸರ್ಕಾರದ ಅವಧಿ ಸೇರಿದಂತೆ 1993ರಿಂದ ನಂತರ ಮಂಜೂರಾದ ಎಲ್ಲ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗಳನ್ನು ಕೋರ್ಟ್ ರದ್ದುಪಡಿಸಿದೆ.
ಅರ್ಜಿಯ ವಿಚಾರಣೆ ವೇಳೆ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಾದರ್ಶಕವಾಗಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಲಾಖೆಯ ಸ್ಕ್ರೀನಿಂಗ್ ಕಮಿಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 1993ರಿಂದ ಈಚೆಗೆ ಮಂಜೂರಾದ ಎಲ್ಲಾ ನಿಕ್ಷೇಪಗಳ ಹಂಚಿಕೆಯನ್ನು ರದ್ದುಗೊಳಿ ಆದೇಶ ಹೊರಡಿಸಿದೆ.

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮಾಡುವಾಗ ನಿಯಮಾವಳಿಗಳನ್ನು ಪಾಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, ಆದ್ದರಿಂದ ಹಂಚಿಕೆ ರದ್ದುಗೊಳಿಸಿರುವುದಾಗಿ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದರೆ, ತನ್ನ ಆದೇಶದಲ್ಲಿ ಕೋರ್ಟ್ ಅಲ್ಟ್ರಾ ಮೆಗಾ ಪವರ್ ಪ್ರಾಜೆಕ್ಟ್ಗಳಿಗೆ ಮಂಜೂರು ಮಾಡಲಾದ ಕಲ್ಲಿದ್ದಲು ಬ್ಲಾಕ್ಗಳ ಹಂಚಿಕೆಯನ್ನು ರದ್ದುಗೊಳಿಸಿಲ್ಲ. [ಕಲ್ಲಿದ್ದಲು ಹಗರಣ: ಜಿಂದಾಲ್ ಮೇಲೆ ಎಫ್ಐಆರ್]
1993 ರಿಂದ 2009ರವರೆಗಿನ ಸಮಯದಲ್ಲಿನ ಎಲ್ಲ 32 ಹಂಚಿಕೆಗಳು ಸುಪ್ರೀಂ ಆದೇಶದ ಹಿನ್ನಲೆಯಲ್ಲಿ ರದ್ದಾಗಲಿವೆ. ಕಲ್ಲಿದ್ದಲು ನಿಕ್ಷೇಪ ಪುನರ್ ಹಂಚಿಕೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ರಿಂದ ನಡೆಯುವ ವಿಚಾರಣೆಯಲ್ಲಿ ಈ ಕುರಿತ ವಾದಗಳನ್ನು ಆಲಿಸುವುದಾಗಿ ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಆರ್.ಎಂ.ಲೋಧಾ, ನ್ಯಾ.ಮದನ್ ಬಿ.ಲೋಕೂರ್ ಮತ್ತು ನ್ಯಾ.ಕುರಿಯನ್ ಜೋಸೆಫ್ ಅವರ ತ್ರೀ ಸದಸ್ಯಪೀಠ ಈ ಆದೇಶ ನೀಡಿದ್ದು, ಕಲ್ಲಿದ್ದಲು ಗಣಿಗಾರಿಕೆ ಪರವಾನಿಗೆ ನೀಡುವ ವಿಷಯದಲ್ಲಿ ಮುಂದಿನ ಹೆಜ್ಜೆ ಇಡಲು ಸಮಿತಿಯೊಂದನ್ನು ಸ್ಥಾಪಿಸಲು ಸೂಚನೆ ನೀಡಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications