ಕಲ್ಲಿದ್ದಲು ಹಗರಣ, ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ, ಆ.25 : ಕಲ್ಲಿದ್ದಲು ಹಂಚಿಕೆ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ಆದೇಶವೊಂದನ್ನು ನೀಡಿದೆ. ಯುಪಿಎ ಸರ್ಕಾರದ ಅವಧಿ ಸೇರಿದಂತೆ 1993ರಿಂದ ನಂತರ ಮಂಜೂರಾದ ಎಲ್ಲ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗಳನ್ನು ಕೋರ್ಟ್ ರದ್ದುಪಡಿಸಿದೆ.
ಅರ್ಜಿಯ ವಿಚಾರಣೆ ವೇಳೆ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಪಾದರ್ಶಕವಾಗಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಲಾಖೆಯ ಸ್ಕ್ರೀನಿಂಗ್ ಕಮಿಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 1993ರಿಂದ ಈಚೆಗೆ ಮಂಜೂರಾದ ಎಲ್ಲಾ ನಿಕ್ಷೇಪಗಳ ಹಂಚಿಕೆಯನ್ನು ರದ್ದುಗೊಳಿ ಆದೇಶ ಹೊರಡಿಸಿದೆ.

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮಾಡುವಾಗ ನಿಯಮಾವಳಿಗಳನ್ನು ಪಾಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, ಆದ್ದರಿಂದ ಹಂಚಿಕೆ ರದ್ದುಗೊಳಿಸಿರುವುದಾಗಿ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದರೆ, ತನ್ನ ಆದೇಶದಲ್ಲಿ ಕೋರ್ಟ್ ಅಲ್ಟ್ರಾ ಮೆಗಾ ಪವರ್ ಪ್ರಾಜೆಕ್ಟ್ಗಳಿಗೆ ಮಂಜೂರು ಮಾಡಲಾದ ಕಲ್ಲಿದ್ದಲು ಬ್ಲಾಕ್ಗಳ ಹಂಚಿಕೆಯನ್ನು ರದ್ದುಗೊಳಿಸಿಲ್ಲ. [ಕಲ್ಲಿದ್ದಲು ಹಗರಣ: ಜಿಂದಾಲ್ ಮೇಲೆ ಎಫ್ಐಆರ್]
1993 ರಿಂದ 2009ರವರೆಗಿನ ಸಮಯದಲ್ಲಿನ ಎಲ್ಲ 32 ಹಂಚಿಕೆಗಳು ಸುಪ್ರೀಂ ಆದೇಶದ ಹಿನ್ನಲೆಯಲ್ಲಿ ರದ್ದಾಗಲಿವೆ. ಕಲ್ಲಿದ್ದಲು ನಿಕ್ಷೇಪ ಪುನರ್ ಹಂಚಿಕೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ರಿಂದ ನಡೆಯುವ ವಿಚಾರಣೆಯಲ್ಲಿ ಈ ಕುರಿತ ವಾದಗಳನ್ನು ಆಲಿಸುವುದಾಗಿ ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಆರ್.ಎಂ.ಲೋಧಾ, ನ್ಯಾ.ಮದನ್ ಬಿ.ಲೋಕೂರ್ ಮತ್ತು ನ್ಯಾ.ಕುರಿಯನ್ ಜೋಸೆಫ್ ಅವರ ತ್ರೀ ಸದಸ್ಯಪೀಠ ಈ ಆದೇಶ ನೀಡಿದ್ದು, ಕಲ್ಲಿದ್ದಲು ಗಣಿಗಾರಿಕೆ ಪರವಾನಿಗೆ ನೀಡುವ ವಿಷಯದಲ್ಲಿ ಮುಂದಿನ ಹೆಜ್ಜೆ ಇಡಲು ಸಮಿತಿಯೊಂದನ್ನು ಸ್ಥಾಪಿಸಲು ಸೂಚನೆ ನೀಡಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications