ನೋಟು ರದ್ದು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಕೇಂದ್ರದಿಂದ ಕೇವಿಯಟ್
ನವ ದೆಹಲಿ, ನವೆಂಬರ್ 10: 500, 1000 ರುಪಾಯಿಯ ನೋಟು ರದ್ದು ಪ್ರಶ್ನಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿದೆ. ಈ ವಿಚಾರವಾಗಿ ಕೇಂದ್ರ ಸರಕಾರ ಕೇವಿಯಟ್ ಸಲ್ಲಿಸಿದೆ. ಆದ್ದರಿಂದ ಕೇಂದ್ರದ ವಾದವನ್ನು ಕೇಳದೆ ಮಧ್ಯಂತರ ಆದೇಶ ಹೊರಡಿಸಲು ಸಾಧ್ಯವಿಲ್ಲ.
ವಕೀಲರೊಬ್ಬರು ಬುಧವಾರ 500, 1000 ರುಪಾಯಿಯ ನೋಟು ರದ್ದು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಸರಕಾರದ ಕ್ರಮದ ವಿರುದ್ಧ ಸಂಗಮ್ ಲಾಲ್ ಪಾಂಡೆ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಹಾಕಿದ್ದಾರೆ. ಈ ತೀರ್ಮಾನದಿಂದ ಸಾರ್ವಜನಿಕರಿಗೆ ತುಂಬ ತೊಂದರೆ ಆಗಿದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.[FAQ: 500, 1000 ನೋಟು ಬದಲಾವಣೆ ಬ್ಯಾಂಕ್ ನಿಯಮಗಳು]

ಈ ವಿಚಾರ ತುರ್ತಾಗಿದ್ದು, ಶೀಘ್ರದಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಅರ್ಜಿದಾರರು ಗುರುವಾರ ಮನವಿ ಮಾಡಲಿದ್ದಾರೆ. ಇದೇ ರೀತಿಯ ಅರ್ಜಿಯೊಂದನ್ನು ಬಾಂಬೆ ಹೈಕೋರ್ಟ್ ನಲ್ಲೂ ಹಾಕಲಾಗಿದೆ. ಮಂಗಳವಾರ ರಾತ್ರಿ, ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಸರಕಾರವು ತಕ್ಷಣದಿಂದಲೇ ಚಾಲ್ತಿಯಲ್ಲಿರುವ 500, 1000 ಮುಖಬೆಲೆ ನೋಟುಗಳನ್ನು ರದ್ದು ಪಡಿಸುತ್ತಿದೆ ಎಂದಿದ್ದರು.[ನೋಟ್ ಬ್ಯಾನ್ ಬೆನ್ನಲ್ಲೇ ಕೇಂದ್ರದ ಮತ್ತೊಂದು ಮಹತ್ವದ ಆದೇಶ]
ಕಪ್ಪುಹಣದ ನಿಯಂತ್ರಣಕ್ಕೆ, ಭ್ರಷ್ಟಾಚಾರ ದಮನಕ್ಕೆ ಹಾಗೂ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ದೊರೆಯದಂತೆ ತಡೆಯಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications