ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಶಿಷ್ಟ ಪಂಗಡಕ್ಕೆ ಸಿದ್ದಿ, ತಳವಾರ, ಪರಿವಾರ ಸೇರ್ಪಡೆ: ದಶಕಗಳ ಬೇಡಿಕೆ ಕೊನೆಗೂ ಸಾಕಾರ

|
Google Oneindia Kannada News

ನವದೆಹಲಿ, ಡಿಸೆಂಬರ್ 13: ರಾಜ್ಯದ 'ತಳವಾರ', 'ಪರಿವಾರ', ಮತ್ತು 'ಸಿದ್ದಿ' ಸಮುದಾಯಗಳ ಜನರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಸುದೀರ್ಘ ಸಮಯದಿಂದ ನನೆಗುದಿಗೆ ಬಿದ್ದಿದ್ದ ಬೇಡಿಕೆ ಕೊನೆಗೂ ಈಡೇರಿದೆ. ಈ ಸಮುದಾಯಗಳು ಅಧಿಕೃತವಾಗಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಂಡಿವೆ.

ರಾಜ್ಯದ ವಿವಿಧ ಭಾಗಗಳಲ್ಲಿ ನೆಲೆಸಿರುವ ಈ ಮೂರು ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂವಿಧಾನದ (ಪರಿಶಿಷ್ಟ ಪಂಗಡ) ಆದೇಶ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಗುರುವಾರ ಅನುಮೋದನೆ ದೊರಕಿದೆ.

ಪರಿಶಿಷ್ಟ ಪಂಗಡಕ್ಕೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪಪರಿಶಿಷ್ಟ ಪಂಗಡಕ್ಕೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬುಡಕಟ್ಟು ವ್ಯವಹಾರಗಳ ಖಾತೆ ರಾಜ್ಯ ಸಚಿವೆ ರೇಣುಕಾ ಸಿಂಗ್ ಸರುತಾ ಈ ಮಸೂದೆಯನ್ನು ಮಂಡಿಸಿದರು. ಇದನ್ನು ಆಡಳಿತ ಪಕ್ಷದವರಲ್ಲದೆ ವಿರೋಧಪಕ್ಷದ ಸದಸ್ಯರೂ ಸ್ವಾಗತಿಸಿದರು. ರಾಜ್ಯದ ಧಾರವಾಡ ಮತ್ತು ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿದ್ದಿ ಸಮುದಾಯದ ಜನರಿದ್ದಾರೆ. ಗುಜರಾತ್, ಹೈದರಾಬಾದ್, ಲಕ್ನೋ, ದೆಹಲಿ ಮತ್ತು ಕೋಲ್ಕತಾದಲ್ಲಿ ಕೂಡ ನೆಲೆಸಿದ್ದಾರೆ. ನಾಯಕ ಸಮುದಾಯದ 'ತಳವಾರ' ಮತ್ತು 'ಪರಿವಾರ' ಪಂಗಡಗಳ ಜನರು ರಾಜ್ಯದ ಹಲವೆಡೆ ಇದ್ದಾರೆ. ಈ ಸಮುದಾಯಗಳ ಜನರಿಗೆ ಪರಿಶಿಷ್ಟ ಪಂಗಡಕ್ಕೆ ದೊರಕುವ ಸೌಲಭ್ಯಗಳು ಇನ್ನು ಲಭ್ಯವಾಗಲಿವೆ.

ಲೋಕಸಭೆಯ ಅನುಮೋದನೆ ಅಗತ್ಯ

ಲೋಕಸಭೆಯ ಅನುಮೋದನೆ ಅಗತ್ಯ

ಈ ಮೂರೂ ಸಮುದಾಯಗಳ ಜನರಿಗೆ ಪರಿಶಿಷ್ಟ ಪಂಗಡದ ಸೌಲಭ್ಯ, ಸವಲತ್ತುಗಳು ಸಿಗಲು ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ಸಿಗುವುದು ಅಗತ್ಯವಾಗಿದೆ. ಆದರೆ, ಸಂಸತ್‌ನ ಚಳಿಗಾಲದ ಅಧಿವೇಶನ ಶುಕ್ರವಾರ ಅಂತ್ಯಗೊಳ್ಳಲಿದೆ. ಹೀಗಾಗಿ ಈ ಮಸೂದೆ ಮುಂದಿನ ಬಜೆಟ್ ಅಧಿವೇಶನದ ವೇಳೆಯೇ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಹೆಚ್ಚಿದೆ.

ಮೂರು ದಶಕಗಳ ಹೋರಾಟ

ಮೂರು ದಶಕಗಳ ಹೋರಾಟ

ನಾಯಕ ಸಮುದಾಯದ ತಳವಾರ ಮತ್ತು ಪರಿವಾರ ಪಂಗಡಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ವರ್ಷದ ಆರಂಭದಲ್ಲಿಯೇ ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮತಿ ನೀಡಿತ್ತು. ಈ ಎರಡೂ ಪಂಗಡಗಳನ್ನು ಎಸ್‌ಟಿಗೆ ಸೇರಿಸುವಂತೆ 1984ರಿಂದಲೂ ಕೇಂದ್ರ ಸರ್ಕಾರಗಳಿಗೆ ನಿರಂತರ ಬೇಡಿಕೆಗಳನ್ನು ಸಲ್ಲಿಸಲಾಗುತ್ತಿತ್ತು. ಅದೀಗ ಕೊನೆಗೂ ಈಡೇರುತ್ತಿದೆ.

ಎಸ್‌ಸಿ, ಎಸ್‌ಟಿ ವರ್ಗಗಳ ಕಲ್ಯಾಣದ ಕುರಿತು ಮುಖ್ಯಮಂತ್ರಿಗಳ ಸಭೆಎಸ್‌ಸಿ, ಎಸ್‌ಟಿ ವರ್ಗಗಳ ಕಲ್ಯಾಣದ ಕುರಿತು ಮುಖ್ಯಮಂತ್ರಿಗಳ ಸಭೆ

ಮತ್ತಷ್ಟು ಸಮುದಾಯಗಳ ಸೇರ್ಪಡೆಗೆ ಮನವಿ

ಮತ್ತಷ್ಟು ಸಮುದಾಯಗಳ ಸೇರ್ಪಡೆಗೆ ಮನವಿ

ರಾಜ್ಯದ ಕೊಡಗಿನ ಕೊಡವ ಸಮುದಾಯ, ಉತ್ತರ ಕರ್ನಾಟಕದಲ್ಲಿರುವ ಹಲಬರ, ಗೋಂದಳಿ, ಗೊಲ್ಲ ಸಮುದಾಯಗಳನ್ನು ಕೂಡ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಬಿಜೆಪಿಯ ಪ್ರಭಾಕರ ಕೋರೆ ಮತ್ತು ಜೆಡಿಎಸ್ ಸದಸ್ಯ ಕುಪೇಂದ್ರ ರೆಡ್ಡಿ ಮನವಿ ಮಾಡಿದರು. ಮಸೂದೆ ಮಂಡನೆಯಾದ ಬಳಿಕ ಅದನ್ನು ಬಿಜೆಪಿಯ ಕೆ.ಸಿ. ರಾಮಮೂರ್ತಿ ಮತ್ತು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದರು. ಒಡಿಶಾ, ತಮಿಳುನಾಡು, ತೆಲಂಗಾಣ, ಬಿಹಾರ ಮತ್ತು ಉತ್ತರ ಪ್ರದೇಶದ ಸದಸ್ಯರು ಕೂಡ ತಮ್ಮ ರಾಜ್ಯಗಳಲ್ಲಿನ ವಿವಿಧ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಮನವಿ ಮಾಡಿದರು.

1991ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ

1991ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ

ನಾಯಕ, ವಾಲ್ಮೀಕಿ, ಬೇಡ ಮುಂತಾದ ಹೆಸರುಗಳಿಂದ ಗುರುತಿಸಿಕೊಂಡ ಸಮುದಾಯವನ್ನು 1991ರಲ್ಲಿ ಆಗಿನ ಪ್ರಧಾನಿ ಚಂದ್ರಶೇಖರ್ ನೇತೃತ್ವದ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿತ್ತು. ಕಾಶ್ಮೀರದ ಗುಜ್ಜಾರ್ ಸಮುದಾಯದೊಂದಿಗೆ ಆಗ ನಾಯಕ ಸಮುದಾಯದ ಐದು ಪರ್ಯಾಯ ಪಂಗಡಗಳನ್ನು ಸೇರಿಸಲಾಗಿತ್ತು.

ಎಸ್‌ಸಿ ಎಸ್‌ಟಿ ಮೀಸಲಾತಿ ವಿಸ್ತರಣೆ: ಮಸೂದೆ ಅಂಗೀಕಾರಎಸ್‌ಸಿ ಎಸ್‌ಟಿ ಮೀಸಲಾತಿ ವಿಸ್ತರಣೆ: ಮಸೂದೆ ಅಂಗೀಕಾರ

English summary
Rajya Sabha on Thursday has passed the Scheduled Tribes Amendment Bill which helps to inclusion of Siddi, Talawara and Parivara communities of Nayaka in the list of ST.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X