School Holiday: ಮಾರ್ಚ್ 21ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
School Holiday: ವರ್ಷದ ಆರಂಭದಿಂದಲೂ ಇಲ್ಲಿವರೆಗೆ ಕಲವೆಡೆ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಇದೀಗ ಮತ್ತೆ ಮಾರ್ಚ್ 21ರಂದು ಈ ಭಾಗದ ಶಾಲಾ-ಕಾಲೇಜು, ಬ್ಯಾಂಕ್ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಕರ್ನಾಟಕದಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಪ್ರತಿಭಟನೆ ಹಾಗೂ ವಿಶೇಷ ಕಾರ್ಯಕ್ರಮಗಳ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನ ಬಡಿಸಿದಂತಾಗಿದೆ. ಮತ್ತೊಂದೆಡೆ ರಾಜ್ಯದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಪರೀಕ್ಷೆ ಮುಗಿಯಲಿದ್ದು, ಬಳಿಕ ಬೇಸಿಗೆ ರಜೆ ಸಿಗಲಿದೆ. ಇನ್ನೂ ಕೆಲವು ರಾಜ್ಯಗಳಲ್ಲಿ ಕರ್ನಾಕಟಕಕ್ಕೆ ಹೋಲಿಕೆ ಮಾಡಿದ್ರೆ ವಿವಿಧ ಕಾರಣಗಳಿಂದಾಗಿ ಹೆಚ್ಚು ರಜೆಗಳನ್ನು ನೀಡಲಾಗಿದೆ.

ಶಾಲೆಗಳಿಗೆ ಬೇಸಿಗೆ ರಜೆಗಳ ಪಟ್ಟಿ ಈಗಾಗಲೇ ಬಂದಿದೆ. ಈ ನಡುವೆಯೂ ಈ ಭಾಗದಲ್ಲಿ ಮಾರ್ಚ್ 21ರಂದು ಶಾಲಾ-ಕಾಲೇಜುಗಳು ಹಾಗೂ ಬ್ಯಾಂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಾಸ್ತವವಾಗಿ, ಶಾಲೆಗಳಿಗೆ ಕೇವಲ ಒಂದು ದಿನ ರಜೆ ಇರುತ್ತದೆ. ಆದರೆ, ಶನಿವಾರ ಅರ್ಧ ದಿನ ಹಾಗೂ ಮಾರನೇ ದಿನ ಭಾನುವಾರ ಆದ್ದರಿಂದ ಸತತ ಮೂರು ದಿನಗಳ ಕಾಲ ವಿದ್ಯಾರ್ಥಿಗಳಿಗೆ ರಜೆ ಸಿಕ್ಕಾಂತಾಗಲದೆ.
ಸೀತಾಳ ಅಷ್ಟಮಿ ಹಿನ್ನೆಲೆ ಮಾರ್ಚ್ 21ರಂದು ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇನ್ನು ಮಾರ್ಚ್ 22 ರ ಶನಿವಾರ ಮತ್ತು ಮಾರ್ಚ್ 23ರ ಭಾನುವಾರ ಸೇರಿ ಶಾಲೆಗಳಿಗೆ ಸತತ ಮೂರು ದಿನಗಳ ರಜೆ ಇರುತ್ತದೆ. ಶೀತಲ್ ಅಷ್ಟಮಿಯ ಸಂದರ್ಭದಲ್ಲಿ ಜೈಪುರ ಕಲೆಕ್ಟರ್ ರಜೆ ಘೋಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ..
ಕಳೆದ ವರ್ಷ ಜೈಪುರ ಕಲೆಕ್ಟರ್ ಆಗಿದ್ದ ಜಿತೇಂದ್ರ ಸೋನಿ ನವೆಂಬರ್ 27ರಂದು ಈ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಸೀತಾಳ ಅಷ್ಟಮಿಯ ದಿನವಾದ ಮಾರ್ಚ್ 21ರಂದು ಶಾಲೆಗಳಿಗೆ ರಜೆ ನೀಡಲಾಯಿತು. ಶೀತಲ್ ಅಷ್ಟಮಿಯನ್ನು ಮುಖ್ಯವಾಗಿ ಚಕ್ಸು ಮತ್ತು ಜೈಪುರ ಪ್ರದೇಶಗಳಲ್ಲಿ ವೈಭವದಿಂದ ಆಚರಣೆ ಮಾಡಲಾಗುತ್ತದೆ.
ಮತ್ತೊಂದೆಡೆ ತೀಜ್ ಹಬ್ಬ ಹಿನ್ನೆಲೆ ಮಾರ್ಚ್ 19ರಂದು ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳು, ಬ್ಯಾಂಕ್ಗಳು ಮತ್ತು ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹೋಳಿ ರಜೆಯ ನಂತರ, ಮಧ್ಯಪ್ರದೇಶ ಸರ್ಕಾರವು ಮಾರ್ಚ್ 19ರಂದು ರಜೆಯನ್ನು ಘೋಷಿಸಿತ್ತು.
ಅಲ್ಲದೆ, ಈ ದಿನ ರಾಜ್ಯಾದ್ಯಂತ ರಂಗಪಂಚಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು ಮಧ್ಯಪ್ರದೇಶದ ರಾಜಧಾನಿ ಭೋಪಾಲ್, ಆರ್ಥಿಕ ರಾಜಧಾನಿ ಇಂದೋರ್ ಮತ್ತು ಉಜ್ಜಯಿನಿಯಲ್ಲಿ ಆಚರಣೆ ಮಾಡಲಾಗುತ್ತದೆ.
ಇಂದೋರ್ನಲ್ಲಿ ರಂಗಪಂಚಮಿ ಹಬ್ಬವನ್ನು ಗೆರ್ ಹೆಸರಿನಲ್ಲಿ ಆಚರಿಸಲಾಗುತ್ತದೆ. ಇಲ್ಲಿನ ಜನರು ತಮ್ಮ ಮನೆಗಳಿಂದ ಹೊರಬಂದು ಬೀದಿಗಳಲ್ಲಿ ಹೋಳಿ ಆಡುತ್ತಾರೆ. ಆದ್ದರಿಂದ ಈ ದಿನ ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಲಾಗಿದೆ. ಇದೇ ವೇಳೆ ಉಜ್ಜಯಿನಿಯಲ್ಲಿಯೂ ಜನರು ತಮ್ಮ ಮನೆಗಳಲ್ಲಿ ಹೋಳಿ ಆಡುತ್ತಾರೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications