School Holiday: ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
School Holiday: ಈಗಾಗಲೇ ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಶೀತಗಾಳಿ ಜೊತೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಲಿದೆ. ಪರಿಣಾಮ ಜನರು ತತ್ತರಿಸಿದ್ದಾರೆ. ಇನ್ನೂ ಈ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಲಾಗಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ ವರ್ಷವೂ ಸಹ ಚಳಿ ಪ್ರಮಾಣ ಹೆಚ್ಚಿದ ಹಿನ್ನೆಲೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಿಗೆ ತಿಂಗಳುಗಟ್ಟಲೇ ರಜೆ ನೀಡಲಾಗಿತ್ತು. ಮತ್ತೆ ಚಳಿ ಮುಂದುವರೆದ ಕಾರಣ ಹೆಚ್ಚುವರಿ ರಜೆಗಳನ್ನು ನೀಡಲಾಗಿದ್ದು, ಇವುಗಳನ್ನು ಸರಿದೂಗಿಸಲು ಆನ್ಲೈನ್ ತರಗತಿಗಳನ್ನು ನಡೆಸಲಾಗಿತ್ತು. ವಿದ್ಯಾರ್ಥಿಗಳ ವಿದ್ಯಾಭ್ಯಸಕ್ಕೆ ಯಾವುದೇ ಅಡಚಣೆ ಆಗಬಾರದು ಎನ್ನುವ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಇದೀಗ ಕಳೆದ ಬಾರಿಯಂತೆ ಚಳಿ ಹೆಚ್ಚಿದ ಕಾರಣ ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀಕರ ದಟ್ಟ ಮಂಜಿನ ಜೊತೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿದೆ. ಆದ್ದರಿಂದ ಈ ಭಾಗಗಳ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಇಂದು (ಡಿಸೆಂಬರ್18) ರಜೆ ಘೋಷಣೆ ಮಾಡಲಾಗಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನರ್ಸರಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಇತರ ವಿದ್ಯಾರ್ಥಿಗಳಿಗೂ ಮಾರ್ಗಸೂಚಿ ಹೊರಡಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯದ ಪರಿಣಾಮ ಜಿಆರ್ಎಪಿ 4 ಹಂತದ ನಿರ್ಬಂಧಗಳು ಜಾರಿ ಆಗಿದೆ. ಆದ್ದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗಿದೆ.
ಒಂದು ವೇಳೆ ಮಾಲಿನ್ಯದ ಪ್ರಮಾಣ ಕಡಿಮೆಯಾದ್ರೆ, ಮುಂದಿನ ದಿನಗಳಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ ಅಂತಲೂ ದೆಹಲಿ ಸರ್ಕಾರ ತಿಳಿಸಿದೆ ಎಂದು ವರದಿಯಾಗಿದೆ. ಅಲ್ಲದೆ, 6ರಿಂದ 11ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಹಾಗೂ ಒಂದಷ್ಟು ದಿನ ಶಾಲಾ ತರಗತಿ ಮೂಲಕ ಬೋಧನೆ ಮಾಡಬೇಕು. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಬೋರ್ಡ್ ಪರೀಕ್ಷೆ ಇರುವ ಹಿನ್ನೆಲೆ ಈ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ವಿದ್ಯಾರ್ಥಿಯಲ್ಲಿ ಅಸ್ವಸ್ಥತೆ, ಉಸಿರಾಟದ ಸಮಸ್ಯೆ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೋಷಕರಿಗೂ ಸಹ ಮಕ್ಕಳ ಆರೋಗ್ಯದ ಕಡೆಗೆ ಆದ್ಯತೆ ನೀಡುವಂತೆಯೂ ತಿಳಿಸಲಾಗಿದೆ. ಒಂದು ವೇಳೆ ಭೀಕರ ಚಳಿ ಜೊತೆ ಹೀಗೆ ವಾಯುಮಾಲಿನ್ಯ ಮುಂದುವರೆದರೆ, 5ನೇ ತರಗತಿವರೆಗಿನ ಶಾಲೆಗಳಿಗೆ ರಜೆ ವಿಸ್ತರಣೆ ಮಾಡುವ ಸಾಧ್ಯತೆಯಿದೆ.
ಮತ್ತೊಂದೆಡೆ ವಾಯುಮಾಲಿನ್ಯ ಹೆಚ್ಚಳ ಕಾರಣ ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳ ಪೈಕಿ ಶೇಕಡಾ 50ರಷ್ಟು ಮಂದಿಗೆ ಕಡ್ಡಾಯವಾಗಿ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಆದೇಶವನ್ನು ಖಾಸಗಿ ಹಾಗೂ ಸರ್ಕಾರಿ ಕಂಪನಿಗಳು ಆದೇಶ ಕಡ್ಡಾಯವಾಗಿ ಪಾಲನೆ ಮಾಡಲು ದೆಹಲಿ ಸರ್ಕಾರ ಸೂಚನೆ ನೀಡಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಣೆ ಮಾಡಿದಲ್ಲಿ ದಂಡ ವಿಧಿಸಲಾಗಿತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಒಟ್ಟಾರೆಯಾಗಿ ಹೇಳುವುದಾದರೆ, ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಲ್ಲಿನ ವಾಹನ ಸವಾರರು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇದೇ ದೃಷ್ಟಿಕೋನದಿಂದ ಇಲ್ಲಿನ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ ಎಂದು ಹೇಳಲಾಗುತ್ತಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications