School Holidays: ಶಾಲೆಗಳಿಗೆ ರಜೆ ಘೋಷಣೆ; ಎಲ್ಲೆಲ್ಲಿ ಎಷ್ಟು ದಿನ ತಿಳಿಯಿರಿ
School Holidays: ಪರೀಕ್ಷೆಗಳು ಮುಕ್ತಾಯದ ಬಳಿಕ, ಹಬ್ಬಗಳ ಸಂದರ್ಭಗಳಲ್ಲಿ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ, ಇದೀಗ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದರೆ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ದಿನ ರಜೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಡಿಸೆಂಬರ್ ಕೊನೆಯ ವಾರದಲ್ಲಿ ಉತ್ತರ ಭಾರತದಲ್ಲಿ ದಟ್ಟ ಮಂಜಿನ ಜೊತೆ ಚಳಿ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹಲವು ರಾಜ್ಯಗಳಲ್ಲಿ ಶಾಳೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈವರೆಗೆ ಮಧ್ಯಪ್ರದೇಶ, ಛತ್ತೀಸ್ಗಢ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ಭಾಗಗಳಲ್ಲಿ ಶಾಲೆಗಳಿಗೆ ಚಳಿಗಾಲದ ರಜೆಯನ್ನು ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಮಾಲಿನ್ಯ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್ನಲ್ಲಿ 5ನೇ ತರಗತಿಯವರೆಗಿನ ತಗರಗತಿಗಳನ್ನು ಮುಚ್ಚಲಾಗಿದೆ. ಇನ್ನು 5ನೇ ತರಗತಿ ಮೇಲ್ಪಟ್ಟ ಎಲ್ಲಾ ತರಗತಿಗಳಿಗೂ ಗ್ರೇಟರ್ ನೋಯ್ಡಾದಲ್ಲಿ ಶಾಲೆಗಳು ನಡೆಯುತ್ತವೆ.
ಮಧ್ಯಪ್ರದೇಶದಲ್ಲಿ ಡಿಸೆಂಬರ್ 31ರಿಂದ ಜನವರಿ 4, 2025ರ ವರೆಗೆ ಚಳಿಗಾಲ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 5ರಂದು ಭಾನುವಾರ ಆಗಿರುವುದರಿಂದ ಶಾಲೆಗಳು ಜನವರಿ 6, 2025ರಂದು ಪುನರಾರಂಭಗೊಳ್ಳುತ್ತವೆ. ಪಂಜಾಬ್ನಲ್ಲಿ 2024ರ ಡಿಸೆಂಬರ್ 24ರಿಂದ 31ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಲ್ಲಿನ ಶಾಲೆಗಳು 1 ಜನವರಿ 2025ರಂದು ಪುನರಾರಂಭಗೊಳ್ಳಲಿವೆ.
ಛತ್ತೀಸ್ಗಢದಲ್ಲಿ ಸರ್ಕಾರಿ ಶಾಲೆಗಳಿಗೆ ಡಿಸೆಂಬರ್ 23ರಿಂದ 28ರ ವರೆಗೆ 6 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 29 ಭಾನುವಾರ ಆಗಿರುವುದರಿಂದ ಡಿಸೆಂಬರ್ 30ಕ್ಕೆ ಶಾಲೆ ಪುನಾರಂಭ ಆಗಲಿವೆ. ರಾಯ್ಪುರ ವಿಭಾಗದ ಕೇಂದ್ರೀಯ ವಿದ್ಯಾಲಯಗಳನ್ನು ಡಿಸೆಂಬರ್ 24ರಿಂದ 2025ರ ಜನವರಿ 2ರ ವರೆಗೆ ಮುಚ್ಚಲಾಗುತ್ತದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 5ನೇ ತರಗತಿಯವರೆಗಿನ ಶಾಲೆಗಳನ್ನು ಡಿಸೆಂಬರ್ 10 ರಿಂದ 2025ರ ಫೆಬ್ರವರಿ 28ರ ವರೆಗೆ ಮುಚ್ಚಲಾಗುವುದು. 6 ರಿಂದ 12ನೇ ತರಗತಿಯ ಶಾಲೆಗಳನ್ನು ಡಿಸೆಂಬರ್ 16ರಿಂದ 2025ರ ಫೆಬ್ರವರಿ 28ರ ವರೆಗೆ ಮುಚ್ಚಲಾಗುತ್ತದೆ ಎಂದು ತಿಳಿಸಿದೆ.
ನವದೆಹಲಿಯಲ್ಲಿ ಸರ್ಕಾರಿ ಶಾಲೆಗಳಿಗೆ ಇನ್ನೂ ರಜೆ ಘೋಷಣೆ ಮಾಡಿಲ್ಲ. ಆದ್ದರಿಂದ ಇಲ್ಲಿನ ಚಳಿಗಾಲದ ರಜಾ ದಿನಗಳು ಜನವರಿ ಮೊದಲ ವಾರದಿಂದ 15ರ ವರೆಗೆ ಇರಬಹುದೆಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಹೆಚ್ಚು ಚಳಿ ಇರುವಂತಹ ಹರಿಯಾಣ, ರಾಜಸ್ಥಾನ ಮತ್ತು ಬಿಹಾರದಲ್ಲಿ ಶಾಲೆಗಳಿಗೆ ಇನ್ನೂ ಅಧಿಕೃತವಾಗಿ ರಜೆ ಘೋಷಣೆ ಮಾಡಿಲ್ಲ.
This is an AI generated image through WISE
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications