ಶಾಲೆ, ಸೈನಿಕ ಶಿಬಿರ ಮೇಲೆ ಉಗ್ರರ ದಾಳಿ ಸಂಭವ
ನವದೆಹಲಿ, ಜ. 15: ಈ ಬಾರಿಯ ಗಣರಾಜ್ಯೋತ್ಸವ ಭಾರತಕ್ಕೆ ಹಲವು ಕಾರಣಗಳಿಂದ ಅತ್ಯಂತ ಮಹತ್ವದ್ದೆನಿಸಿದೆ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಪ್ರಮುಖ ಕಾರಣ. ಇದೇ ಕಾರಣಕ್ಕಾಗಿ ಉಗ್ರರು ಭಾರತದಲ್ಲಿ ರಕ್ತಪಾತ ನಡೆಸಲು ಸಂಚು ರೂಪಿಸಿದ್ದಾರೆ.
ಕರ್ನಾಟಕದ ಭಟ್ಕಳದಲ್ಲಿ ಈಚೆಗಷ್ಟೇ ಬಂಧಿಸಲ್ಪಟ್ಟಿರುವ ಕೆಲವು ಶಂಕಿತರು ಕೂಡ ಒಬಾಮಾ ಬರುವ ಮೊದಲು ಕರ್ನಾಟಕದಲ್ಲಿ ರಕ್ತಪಾತ ನಡೆಸಲು ಉದ್ದೇಶಿಸಿದ್ದರು ಎಂಬುದು ಬಯಲಾಗಿದೆ.
ಮಹಾರಾಷ್ಟ್ರದಲ್ಲಿ ಇಬ್ಬರ ಬಂಧನ : ಬಾಂದ್ರಾದಲ್ಲಿರುವ ಅಮೆರಿಕ ಶಾಲೆ ಮೇಲೆ ದಾಳಿ ನಡೆಸಲು ಉದ್ದೇಶಿಸಿದ್ದ ಐಎಸ್ಐಎಸ್ ಬೆಂಬಲಿಗರಾದ ಅನೀಸ್ ಅನ್ಸಾರಿ ಹಾಗೂ ಒಮರ್ ಎಲ್ಹಾಜಿ ಎಂಬಿಬ್ಬರನ್ನು ಮಹಾರಾಷ್ಟ್ರ ಎಟಿಎಸ್ ಬಂಧಿಸಿದೆ. [ಐಎಸ್ಐಎಸ್ ನೇಮಕಾತಿಯ ಕೊಂಡಿ ಸುಲ್ತಾನ್]

ಈ ಪ್ರಕರಣಗಳು ಹಾಗೂ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಗಣರಾಜ್ಯೋತ್ಸವದಂದು ದೇಶಾದ್ಯಂತ ಶಾಲೆ ಹಾಗೂ ಸೈನಿಕ ಶಿಬಿರದ ಮೇಲೆ ಉಗ್ರರು ದಾಳಿ ನಡೆಸುವ ಶಂಕೆಯಿದೆ ಎಂದು ಲೆ. ಜನರಲ್ ಕೆ.ಎಚ್. ಸಿಂಗ್ ಎಚ್ಚರಿಕೆ ನೀಡಿದ್ದಾರೆ. [ಮೆಹದಿ ಬಂಧನ : ಟಾಪ್ 10 ಬೆಳವಣಿಗೆ]
ಮಹಾರಾಷ್ಟ್ರದಲ್ಲಿ ಬಂಧಿತ ಉಗ್ರರು ಪೇಶಾವರದ ಸೈನಿಕ ಶಾಲೆ ಮೇಲೆ ನಡೆದ ದಾಳಿಯಂತೆಯೇ ಭಾರತದಲ್ಲೂ ದಾಳಿ ನಡೆಸಲು ಯೋಜಿಸಿದ್ದರು ಎನ್ನಲಾಗಿದೆ. ಆದ್ದರಿಂದ ಶಾಲೆ ಹಾಗೂ ಸೇನಾ ಶಿಬಿರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲು ನಿರ್ಧರಿಸಲಾಗಿದೆ. ಶಾಲೆಗಳು ಅನುಸರಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಲಾಗಿದೆ. [ಜಾಣ ಮೆಹದಿ ಗುಪ್ತದಳದ ಕಣ್ಣು ತಪ್ಪಿಸಿದ್ದು ಹೇಗೆ]
ಟಾರ್ಗೆಟ್ ಅಮೆರಿಕ : ಮಹಾರಾಷ್ಟ್ರ ಎಟಿಎಸ್ ಬಂಧಿಸಿರುವ ಅನ್ಸಾರಿ ಇಂಡಿಯನ್ ಮುಜಾಹಿದೀನ್ ಸಂಸ್ಥಾಪಕರಲ್ಲೊಬ್ಬರಾದ ರಿಯಾಜ್ ಭಟ್ಕಳ್ಗೆ ಹತ್ತಿರದ ವ್ಯಕ್ತಿಯಾಗಿದ್ದ. ಐಎಸ್ಐಎಸ್ ಸಂಘಟನೆಗೆ ಜನರನ್ನು ಸೇರಿಸುತ್ತಿದ್ದ ಒಮರ್ ಎಲ್ಹಾಜಿ ಭಾರತೀಯ ಯುವಕರನ್ನು ವೆಬ್ ಸೈಟ್ ಮೂಲಕ ಸಂಪರ್ಕಿಸಿ ಸೆಳೆಯುತ್ತಿದ್ದ. ಅವರ ಮೂಲಕ ಭಾರತದಲ್ಲಿ ಅಮೆರಿಕ ನಡೆಸುತ್ತಿರುವ ಚಟುವಟಿಕೆ ಮೇಲೆ ದಾಳಿ ನಡೆಸುವುದು ಎಲ್ಹಾಜಿ ಉದ್ದೇಶವಾಗಿತ್ತು.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ










Click it and Unblock the Notifications