ಶಾಲೆ, ಸೈನಿಕ ಶಿಬಿರ ಮೇಲೆ ಉಗ್ರರ ದಾಳಿ ಸಂಭವ
ನವದೆಹಲಿ, ಜ. 15: ಈ ಬಾರಿಯ ಗಣರಾಜ್ಯೋತ್ಸವ ಭಾರತಕ್ಕೆ ಹಲವು ಕಾರಣಗಳಿಂದ ಅತ್ಯಂತ ಮಹತ್ವದ್ದೆನಿಸಿದೆ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಪ್ರಮುಖ ಕಾರಣ. ಇದೇ ಕಾರಣಕ್ಕಾಗಿ ಉಗ್ರರು ಭಾರತದಲ್ಲಿ ರಕ್ತಪಾತ ನಡೆಸಲು ಸಂಚು ರೂಪಿಸಿದ್ದಾರೆ.
ಕರ್ನಾಟಕದ ಭಟ್ಕಳದಲ್ಲಿ ಈಚೆಗಷ್ಟೇ ಬಂಧಿಸಲ್ಪಟ್ಟಿರುವ ಕೆಲವು ಶಂಕಿತರು ಕೂಡ ಒಬಾಮಾ ಬರುವ ಮೊದಲು ಕರ್ನಾಟಕದಲ್ಲಿ ರಕ್ತಪಾತ ನಡೆಸಲು ಉದ್ದೇಶಿಸಿದ್ದರು ಎಂಬುದು ಬಯಲಾಗಿದೆ.
ಮಹಾರಾಷ್ಟ್ರದಲ್ಲಿ ಇಬ್ಬರ ಬಂಧನ : ಬಾಂದ್ರಾದಲ್ಲಿರುವ ಅಮೆರಿಕ ಶಾಲೆ ಮೇಲೆ ದಾಳಿ ನಡೆಸಲು ಉದ್ದೇಶಿಸಿದ್ದ ಐಎಸ್ಐಎಸ್ ಬೆಂಬಲಿಗರಾದ ಅನೀಸ್ ಅನ್ಸಾರಿ ಹಾಗೂ ಒಮರ್ ಎಲ್ಹಾಜಿ ಎಂಬಿಬ್ಬರನ್ನು ಮಹಾರಾಷ್ಟ್ರ ಎಟಿಎಸ್ ಬಂಧಿಸಿದೆ. [ಐಎಸ್ಐಎಸ್ ನೇಮಕಾತಿಯ ಕೊಂಡಿ ಸುಲ್ತಾನ್]

ಈ ಪ್ರಕರಣಗಳು ಹಾಗೂ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಗಣರಾಜ್ಯೋತ್ಸವದಂದು ದೇಶಾದ್ಯಂತ ಶಾಲೆ ಹಾಗೂ ಸೈನಿಕ ಶಿಬಿರದ ಮೇಲೆ ಉಗ್ರರು ದಾಳಿ ನಡೆಸುವ ಶಂಕೆಯಿದೆ ಎಂದು ಲೆ. ಜನರಲ್ ಕೆ.ಎಚ್. ಸಿಂಗ್ ಎಚ್ಚರಿಕೆ ನೀಡಿದ್ದಾರೆ. [ಮೆಹದಿ ಬಂಧನ : ಟಾಪ್ 10 ಬೆಳವಣಿಗೆ]
ಮಹಾರಾಷ್ಟ್ರದಲ್ಲಿ ಬಂಧಿತ ಉಗ್ರರು ಪೇಶಾವರದ ಸೈನಿಕ ಶಾಲೆ ಮೇಲೆ ನಡೆದ ದಾಳಿಯಂತೆಯೇ ಭಾರತದಲ್ಲೂ ದಾಳಿ ನಡೆಸಲು ಯೋಜಿಸಿದ್ದರು ಎನ್ನಲಾಗಿದೆ. ಆದ್ದರಿಂದ ಶಾಲೆ ಹಾಗೂ ಸೇನಾ ಶಿಬಿರಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲು ನಿರ್ಧರಿಸಲಾಗಿದೆ. ಶಾಲೆಗಳು ಅನುಸರಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ತಿಳಿಸಲಾಗಿದೆ. [ಜಾಣ ಮೆಹದಿ ಗುಪ್ತದಳದ ಕಣ್ಣು ತಪ್ಪಿಸಿದ್ದು ಹೇಗೆ]
ಟಾರ್ಗೆಟ್ ಅಮೆರಿಕ : ಮಹಾರಾಷ್ಟ್ರ ಎಟಿಎಸ್ ಬಂಧಿಸಿರುವ ಅನ್ಸಾರಿ ಇಂಡಿಯನ್ ಮುಜಾಹಿದೀನ್ ಸಂಸ್ಥಾಪಕರಲ್ಲೊಬ್ಬರಾದ ರಿಯಾಜ್ ಭಟ್ಕಳ್ಗೆ ಹತ್ತಿರದ ವ್ಯಕ್ತಿಯಾಗಿದ್ದ. ಐಎಸ್ಐಎಸ್ ಸಂಘಟನೆಗೆ ಜನರನ್ನು ಸೇರಿಸುತ್ತಿದ್ದ ಒಮರ್ ಎಲ್ಹಾಜಿ ಭಾರತೀಯ ಯುವಕರನ್ನು ವೆಬ್ ಸೈಟ್ ಮೂಲಕ ಸಂಪರ್ಕಿಸಿ ಸೆಳೆಯುತ್ತಿದ್ದ. ಅವರ ಮೂಲಕ ಭಾರತದಲ್ಲಿ ಅಮೆರಿಕ ನಡೆಸುತ್ತಿರುವ ಚಟುವಟಿಕೆ ಮೇಲೆ ದಾಳಿ ನಡೆಸುವುದು ಎಲ್ಹಾಜಿ ಉದ್ದೇಶವಾಗಿತ್ತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications