Get Updates
Get notified of breaking news, exclusive insights, and must-see stories!

ಮಾಂಡೌಸ್ ಚಂಡಮಾರುತ: ಭಾರೀ ಮಳೆಯಿಂದಾಗಿ ತಮಿಳುನಾಡಿನ 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಸುರಿಯುತ್ತಿರುವ ಅಧಿಕ ಮಳೆಗೆ ತಮಿಳುನಾಡಿನ ಜನ ತತ್ತರಿಸಿ ಹೋಗಿದ್ದಾರೆ. ಎಡಬಿಡದೆ ಸುರಿಯುತ್ತಿರುವ ಮಳೆಯೊಂದಿಗೆ ಗಾಳಿ, ಚಳಿಗೆ ಜನ ಮನೆಬಿಟ್ಟು ಹೊರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲ ದಿನಗಳಿಂದ ತೀವ್ರಗೊಂಡ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು ನೂರಾರು ಮರಗಳು ಧರೆಗುರುಳಿದೆ. ಇದರಿಂದ ವಿದ್ಯುತ್ ವ್ಯತ್ಯಯ ಕೂಡ ಉಂಟಾಗಿದ್ದು ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಇನ್ನೂ ಇಂದು ಕೂಡ ಹೆಚ್ಚು ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಡಿಸೆಂಬರ್ 13ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಐಎಂಡಿ ಮುನ್ಸೂಚನೆಯ ಆಧಾರದ ಮೇಲೆ ಕಾಂಚೀಪುರಂ ಜಿಲ್ಲೆಯಲ್ಲದೆ ತಿರುವಳ್ಳೂರು ಮತ್ತು ಉತ್ತುಕೊಟ್ಟೈ ತಾಲೂಕುಗಳು ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಶಾಲೆಗಳು ಇಂದು ಮುಚ್ಚಲ್ಪಡುತ್ತವೆ. ಮಂಡೂಸ್ ಚಂಡಮಾರುತವು ಈಗಾಗಲೇ ರಾಜ್ಯದ ವಿವಿಧ ಪ್ರದೇಶಗಳ ಮೇಲೆ ಪರಿಣಾಮ ಬೀರಿದ್ದು, ಮಾಮಲ್ಲಪುರಂನಲ್ಲಿ ಕರಾವಳಿಯನ್ನು ದಾಟಿರುವುದರಿಂದ ಇಂದು ಕೂಡ ತಿರುವಳ್ಳೂರು ಮತ್ತು ಉತ್ತುಕೊಟ್ಟೈ ತಾಲೂಕುಗಳ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ.

ತಮಿಳುನಾಡಿನಲ್ಲಿ ಮಳೆ

ತಮಿಳುನಾಡಿನಲ್ಲಿ ಮಳೆ

ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಈ ಬೆಳವಣಿಗೆಯಾಗಿದೆ ಮತ್ತು ಹದಗೆಟ್ಟ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರವು ಶಾಲಾ ರಜೆಗಳನ್ನು ಘೋಷಿಸಿದೆ. "ಮಳೆ ಪ್ರಮಾಣ ಹೆಚ್ಚಳ ಮತ್ತು ನಿರಂತರ ಮಳೆಯ ಮುನ್ಸೂಚನೆಯಿಂದಾಗಿ ತಿರುವಳ್ಳೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು (ಡಿಸೆಂಬರ್ 13) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿರುವಳ್ಳೂರು ತಿಳಿಸಿದ್ದಾರೆ.

ಡಿಸೆಂಬರ್ 15 ರವರೆಗೆ ಹೆಚ್ಚು ಮಳೆ

ಡಿಸೆಂಬರ್ 15 ರವರೆಗೆ ಹೆಚ್ಚು ಮಳೆ

ಡಿಸೆಂಬರ್ 13ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಮತ್ತು ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿರುವುದರಿಂದ ಡಿಸೆಂಬರ್ 15 ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ತಮಿಳುನಾಡಿನ ಶಾಲೆಗಳನ್ನು ಡಿಸೆಂಬರ್ 15 ರವರೆಗೂ ಮುಚ್ಚಲ್ಪಡುತ್ತವೆ ಎಂದು ನಿರೀಕ್ಷಿಸಲಾಗಿದೆ.

ಚೆನ್ನೈನಲ್ಲಿ ಇಂದು ಶಾಲೆಗಳಿಗೆ ರಜೆ

ಚೆನ್ನೈನಲ್ಲಿ ಇಂದು ಶಾಲೆಗಳಿಗೆ ರಜೆ

ಇದಕ್ಕೂ ಮೊದಲು ಭಾರೀ ಮಳೆಯಿಂದಾಗಿ ಚೆನ್ನೈನಲ್ಲಿ ಡಿಸೆಂಬರ್ 9 ಮತ್ತು 10 ರಂದು ಶಾಲೆಗಳನ್ನು ಮುಚ್ಚಲಾಗಿದೆ. ಇತರ ಜಿಲ್ಲೆಗಳಾದ ಚೆಂಗಲ್ಪಟ್ಟು, ವೆಲ್ಲೂರು, ವಿಲ್ಲುಪುರಂ, ಕಾಂಚೀಪುರಂ, ತಿರುವಳ್ಳೂರು, ಪುದುಚೇರಿ, ಕಾರೈಕ್ಕಲ್ ಕೊಡೈಕೆನಾಲ್ ಮತ್ತು ಸಿರುಮಲೈಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ ಎಂದು ಘೋಷಿಸಲಾಯಿತು.

ಐಎಂಡಿ ಸೂಚನೆ

ಐಎಂಡಿ ಸೂಚನೆ

ಐಎಂಡಿ ಮುನ್ಸೂಚನೆಯ ಪ್ರಕಾರ, ಇಂದು ತಮಿಳುನಾಡಿನಲ್ಲಿ ಮತ್ತು ಕೇರಳದ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳಭಾಗದ ತಮಿಳುನಾಡು ಮತ್ತು ಪಕ್ಕದ ದಕ್ಷಿಣ ಒಳಭಾಗ ಕರ್ನಾಟಕ ಮತ್ತು ಉತ್ತರ ಕೇರಳದ ಮೇಲೆ ಚಂಡಮಾರುತದ ಪ್ರಭಾವದಿಂದಾಗಿ ಡಿಸೆಂಬರ್ 13 ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+