Holiday: ಜುಲೈ 7 ಸೋಮವಾರ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜು, ಬ್ಯಾಂಕ್, ಸರ್ಕಾರಿ ಕಚೇರಿಗಳಿಗೆ ರಜೆ..
ದೇಶದಲ್ಲಿ ಈಗಾಗಲೇ ಹಲವೆಡೆ ಶಾಲಾ-ಕಾಲೇಜು, ಬ್ಯಾಂಕ್ ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ಕಾರಣಾಂತರಗಳಿಂದ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಜುಲೈ 7ರ ಸೋಮವಾರ ದೇಶಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಜುಲೈ 7 ಸೋಮವಾರ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜು, ಬ್ಯಾಂಕ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿತ್ತು. ಇದೀಗ ಮತ್ತೆ ಮುಂಬರಲಿರುವ ಸೋಮವಾರದಂದು ರಜೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ.

ಮತ್ತೊಂದೆಡೆ ಕರ್ನಾಟಕದಲ್ಲಿ ಬೇಸಿಗೆ ರಜೆ ಮುಕ್ತಾಯ ಆಗಿದ್ದು, ಶಾಲೆಗಳು ಕೂಡ ಆರಂಭವಾಗಿ ತರಗತಿಗಳು ನಡೆಯುತ್ತಿವೆ. ಈ ನಡುವೆಯೇ ಈಗಾಗಲೇ ಭಾರೀ ಮಳೆ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಇದೀಗ ಮತ್ತೆ ಮೊಹರಂ ದಿನ ಹಿನ್ನೆಲೆ ಜುಲೈ 7ರಂದು ಎಲ್ಲಾ ಕಡೆಗಳಲ್ಲೂ ರಜೆ ನೀಡಲಾಗಿದೆ.
ಇಸ್ಲಾಮಿಕ್ ಹೊಸ ವರ್ಷದ ಆರಂಭದ ಸಂಕೇತ ಆಗಿರುವ ಮೊಹರಂ ಅನ್ನು ದೇಶದಲ್ಲಿ ಜುಲೈ 6 ಅಥವಾ 7ರಂದು ಆಚರಣೆ ಮಾಡಲಾಗುತ್ತದೆ. ಮೊಹರಂ ಚಂದ್ರನ ದರ್ಶನದ ಮೇಳೆ ನಿರ್ಧಾರ ಆಗಿರುತ್ತದೆ. ಜುಲೈ 6ರಂದು ಮೊಹರಂ ಎಂದು ಹೇಳಲಾಗುತ್ತಿದೆ. ಆದರೆ, ಅಂದು ಚಂದ್ರ ದರ್ಶನ ಆಗದಿದ್ದರೆ, ರಜಾದಿನವು ಜುಲೈ 7ಕ್ಕೆ ಮುಂದೂಡಿಕೆ ಆಗಲಿದೆ. ಮೊಹರಂ ಆಚರಣೆಯ ದಿನ ದೇಶಾದ್ಯಂತ ಎಲ್ಲಾ ಶಾಲಾ-ಕಾಲೇಜು, ಬ್ಯಾಂಕ್ಗಳು, ಸರ್ಕಾರಿ ಕಚೇರಿಗಳು ಮತ್ತು ಷೇರು ಮಾರುಕಟ್ಟೆಗಳು ಮುಚ್ಚಲ್ಪಡುತ್ತವೆ.
ಮೊಹರಂ ಹಬ್ಬ ಹಿನ್ನೆಲೆ ದೇಶಾದ್ಯಂತ ಶಾಲಾ-ಕಾಲೇಜು, ಬ್ಯಾಂಕುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಆದ್ದರಿಂದ ಈ ಬರಿ ಮೊಹರಂ ಜುಲೈ 6ರ ಬದಲು 7ರಂದು ಬಂದ್ರೆ, ಆ ದಿನವನ್ನು ಸಾರ್ವಜನಿಕ ರಜೆ ಎಂದು ಘೋಷಣೆ ಮಾಡಲಾಗುತ್ತದೆ.
ಇನ್ನು ಮೊಹರಂ ಹಬ್ಬದ ದಿನದಂದು ಷೇರು ಮಾರುಕಟ್ಟೆಗಳು ಮುಚ್ಚಲ್ಪಡುತ್ತವೆ. ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಮತ್ತು ಬಾಂಬೆ ಷೇರು ವಿನಿಮಯ ಕೇಂದ್ರ ಮುಚ್ಚಲಿವೆ. ಇದರಲ್ಲಿ ಷೇರು, ಷೇರು ಉತ್ಪನ್ನಗಳು, ಎಸ್ಎಲ್ಬಿ ಮತ್ತು ಕರೆನ್ಸಿ ಉತ್ಪನ್ನಗಳು ಮತ್ತು ಬಡ್ಡಿದರ ಉತ್ಪನ್ನಗಳ ವ್ಯಾಪಾರಗಳು ಕೂಡ ಸೇರಿವೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications