School Holiday: ನಾಳೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
School Holiday: ದೇಶದ ಹಲವೆಡೆ ಇಲ್ಲಿವರೆಗೂ ಶಾಲೆಗಳಿಗೆ ಕಾರಣಾಂತರಗಳಿಂದ ಸಾಲು ರಜೆಗಳೇ ಸಿಕ್ಕಿವೆ. ಹಾಗೆಯೇ ನಾಳೆ ಅಂದ್ರೆ ಆಗಸ್ಟ್ 18ರ ಸೋಮವಾರ ಎಲ್ಲಾ ಶಾಲೆಗಳು ಮುಚ್ಚಲ್ಪಡಲಿವೆ ಎಂದು ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಲವೆಡೆ ಇಲ್ಲಿವರೆಗೂ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ವಿಶೇಷ ಕಾರ್ಯಗಳು, ಭಾರೀ ಮಳೆಯಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆಗಳನ್ನು ಘೋಷಣೆ ಮಾಡಲಾಗಿದೆ. ಹಾಗೆಯೇ ಇದೀಗ ಆಗಸ್ಟ್ 18ರಂದು ಈ ಭಾಗದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆಗಸ್ಟ್ 18ರ ಸೋಮವಾರ ಚಂಡೀಗಢದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳ ಶಾಲೆಗಳು ಮುಚ್ಚಲ್ಪಡುತ್ತವೆ ಎಂದು ಪಂಜಾಬ್ ರಾಜ್ಯಪಾಲ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ ಘೋಷಣೆ ಮಾಡಿದ್ದಾರೆ.
ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಜ್ಯಪಾಲ ಕಟಾರಿಯಾ ಅವರು ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿದರು. ಈ ನಿರ್ಧಾರವು ನಗರದಾದ್ಯಂತ ಎಲ್ಲಾ ವಿದ್ಯಾರ್ಥಿಗಳು ಮತ್ತು ಬೋಧನಾ ಸಿಬ್ಬಂದಿಗೆ ಅನ್ವಯ ಆಗಲಿದೆ ಅಂತಲೂ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಶಾಲೆಗಳ ಅನುಕೂಲಕ್ಕಾಗಿ ಈ ರಜೆಯನ್ನು ಘೋಷಣೆ ಮಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಆದರೆ, ಈ ರಜೆ ಘೋಷಣೆಗೆ ಯಾವುದೇ ನಿರ್ದಿಷ್ಟ ಕಾರಣವನ್ನು ವಿವರವಾಗಿ ಉಲ್ಲೇಖಿಸಿಲ್ಲ. ಆದರೂ, ಚಂಡೀಗಢದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಹಬ್ಬದೂಟವೇ ಬಡಿಸಿದಂತಾಗಿದೆ.
79ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಜ್ಯಪಾಲ ಕಟಾರಿಯಾ ರಾಷ್ಟ್ರಧ್ವಜಾರೋಹಣ ಮಾಡಿ ಏಕತೆ, ದೇಶಭಕ್ತಿ ಮತ್ತು ಪ್ರಗತಿ ಮೌಲ್ಯಗಳ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳು ಮತ್ತು ಶಾಲಾ ಮಕ್ಕಳಿಂದ ಭಾರತದ ಪರಂಪರೆ ಮತ್ತು ಇತಿಹಾಸವನ್ನು ಪ್ರತಿಬಿಂಬಿಸುವ ಪ್ರದರ್ಶನಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಶಾಲಾ ರಜೆಯಿಂದಾಗಿ ಆಗಸ್ಟ್ 18ರಂದು ಎಲ್ಲಾ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳು ಸ್ಥಗಿತಗೊಂಡಿರುತ್ತವೆ. ಇನ್ನು ಆಗಸ್ಟ್ 19, ಮಂಗಳವಾರದಿಂದ ಎಂದಿನಂತೆ ಶಾಲೆಗಳು ಆರಂಭವಾಗಲಿದ್ದು, ಕಾರ್ಯಚಟುವಟಿಕೆಗಳು ಪುನರಾರಂಭ ಆಗುತ್ತವೆ ಅಂತಲೂ ಮಾಹಿತಿ ನೀಡಿದ್ದಾರೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಸಾಲು ರಜೆಗಳನ್ನು ಘೋಷಣೆ ಮಾಡಲಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ.
ಅದರಲ್ಲೂ, ಭಾರೀ ಮಳೆಯಿಂದ ಜಲಪ್ರಳಯ ಹಿನ್ನೆಲೆ ಕೆಲ ರಾಜ್ಯಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಇನ್ನೂ ಕೆಲವೆಡೆ ಆಯಾ ಜಿಲ್ಲಾಡಳಿತಗಳು ವಿಶೇಷ ಕಾರ್ಯಕ್ರಮಗಳು, ಪ್ರತಿಭಟನೆಯಂತಹ ಸಂದರ್ಭಗಳಲ್ಲಿ ರಜೆ ಘೋಷಣೆ ಮಾಡಿವೆ. ಕರ್ನಾಟಕದ ಕೆಲ ರಾಜ್ಯಗಳಲ್ಲಿ ಮಾತ್ರ ಭಾರೀ ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿದ್ದರೂ ಸಹ ಆ ರಜೆಗಳನ್ನು ಸರಿದೂಗಿಸಲು ಶನಿವಾರ ಪೂರ್ತಿ ತರಗತಿಗಳನ್ನು ನಡೆಸುವ ಕಾರ್ಯಗಳು ನಡೆದಿವೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications