ಅಗ್ನಿಪಥ ಯೋಜನೆ ರದ್ದುಗೊಳಿಸಿ, ನಿಯಮಿತ ನೇಮಕಾತಿ ಆರಂಭಿಸಿ: ಸಿಪಿಐ(ಎಂ)
ನವದೆಹಲಿ, ಜೂನ್ 16: ಭಾರತದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅಪಚಾರ ಮಾಡುವ 'ಅಗ್ನಿಪಥ್' ಯೋಜನೆಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ)ನ ಪೊಲಿಟ್ ಬ್ಯೂರೋ ಬಲವಾದ ಅಸಮ್ಮತಿ ವ್ಯಕ್ತಪಡಿಸಿದೆ.
ನಾಲ್ಕು ವರ್ಷಗಳ ಅವಧಿಗೆ 'ಒಪ್ಪಂದದ ಮೇರೆಯ ಸೈನಿಕ'ರನ್ನು ನೇಮಕ ಮಾಡುವ ಮೂಲಕ ವೃತ್ತಿಪರ ಸಶಸ್ತ್ರ ಪಡೆಗಳನ್ನು ಕಟ್ಟಲಾಗುವುದಿಲ್ಲ. ಈ ಯೋಜನೆಯು ಪಿಂಚಣಿ ಹಣವನ್ನು ಉಳಿಸಲು, ನಮ್ಮ ವೃತ್ತಿಪರ ಸಶಸ್ತ್ರ ಪಡೆಗಳ ಗುಣಮಟ್ಟ ಮತ್ತು ದಕ್ಷತೆಯನ್ನು ತೀವ್ರವಾಗಿ ಇಳಿಸುತ್ತದೆ ಎಂದು ಸಿಪಿಐ(ಎಂ) ಹೇಳಿದೆ.
ಕಳೆದ ಎರಡು ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಯಾವುದೇ ನೇಮಕಾತಿ ನಡೆದಿಲ್ಲ. ಈ ಯೋಜನೆಯು ಸಶಸ್ತ್ರ ಪಡೆಗಳಿಗೆ ನಿಯಮಿತ ಸೈನಿಕರನ್ನು ನೇಮಿಸುವುದಿಲ್ಲ. ಅದರ ಬದಲಿಗೆ ಅಂಥ ಗುತ್ತಿಗೆ ಸೈನಿಕರಿಗೆ ನಾಲ್ಕು ವರ್ಷಗಳ ನಂತರ ಉದ್ಯೋಗದ ಇತರ ಯಾವುದೇ ನಿರೀಕ್ಷೆಗಳು ಇಲ್ಲದಂತೆ ಅವರನ್ನು ಬಿಟ್ಟುಬಿಡುತ್ತದೆ.
ಇದು ಅವರು ಖಾಸಗಿ ಸಶಸ್ತ್ರ ಪಡೆಗಳಿಗೆ ಸೇವೆ ಸಲ್ಲಿಸುವ ಅಪಾಯಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತದೆ. ಈಗಾಗಲೇ ತೀವ್ರ ಒತ್ತಡದಲ್ಲಿರುವ ನಮ್ಮ ಸಾಮಾಜಿಕ ಹಂದರಕ್ಕೆ ಅನಾಹುತಕಾರಿ ಪರಿಣಾಮ ಉಂಟು ಮಾಡುತ್ತದೆ.

ಈ ಯೋಜನೆಯ ವಿರುದ್ಧ ಆಕ್ರೋಶ
ಉದ್ಯೋಗ ಭದ್ರತೆಯ ಕನಿಷ್ಠ ರಕ್ಷಣೆಯಿಲ್ಲದೆ ನಮ್ಮ ಯುವಕರು ಪರಮ ತ್ಯಾಗಕ್ಕೆ ಸಿದ್ಧರಾಗಬೇಕೆಂದು ಕರೆ ನೀಡುವುದು ಅಪರಾಧವಾಗುತ್ತದೆ. ದೇಶದ ವಿವಿಧ ಭಾಗಗಳಲ್ಲಿ ಸ್ವಯಂಪ್ರೇರಿತ ಪ್ರತಿಭಟನೆಗಳು ಈ ಯೋಜನೆಯ ವಿರುದ್ಧ ಆಕ್ರೋಶವನ್ನು ಪ್ರತಿಬಿಂಬಿಸುತ್ತವೆ.
ಈ ‘ಅಗ್ನಿಪಥ್' ಯೋಜನೆಯನ್ನು ತಕ್ಷಣವೇ ರದ್ದುಪಡಿಸಬೇಕು ಮತ್ತು ಸಶಸ್ತ್ರ ಪಡೆಗಳಿಗೆ ನಿಯಮಿತ ನೇಮಕಾತಿಯನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಆಗ್ರಹಿಸಿದೆ.

ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ
ಅಗ್ನಿಪಥ್ ಯೋಜನೆ ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರ, ರಾಜಸ್ಥಾನದಲ್ಲಿ ಈ ಯೋಜನೆಯ ವಿರುದ್ಧ ಜನರು ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ಜೊತೆಗೆ ಉದ್ಯೋಗ ಭದ್ರತೆ ಮತ್ತು ಪಿಂಚಣಿಗೆ ಒತ್ತಾಯಿಸುತ್ತಿದ್ದಾರೆ. ಛಾಪ್ರಾದಲ್ಲಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಎರಡು ವರ್ಷಗಳ ನಂತರ ಸೇನೆಗೆ ನೇಮಕಾತಿ
ಅಗ್ನಿಪಥ ಯೋಜನೆಯಡಿ ನೇಮಕಗೊಳ್ಳುವ ಜನರಲ್ಲಿ ಶೇಕಡಾ 75 ರಷ್ಟು ಜನರಿಗೆ ಸೇವಾ ವಿಸ್ತರಣೆಯನ್ನು ನೀಡಲಾಗುವುದಿಲ್ಲ ಅಥವಾ ಯಾವುದೇ ರೀತಿಯ ಪಿಂಚಣಿ ಪ್ರಯೋಜನವನ್ನು ಪಡೆಯುವುದಿಲ್ಲ. ಎರಡು ವರ್ಷಗಳ ನಂತರ ಸೇನೆಗೆ ನೇಮಕಾತಿ ಆರಂಭವಾಗಿದ್ದು, ನಂತರವೂ ಭವಿಷ್ಯದ ಬಗ್ಗೆ ಖಚಿತತೆ ಇಲ್ಲ ಎನ್ನುತ್ತಾರೆ ಪ್ರತಿಭಟನಾಕಾರರು. 4 ವರ್ಷಗಳ ನಂತರ ಸೇವೆ ವಿಸ್ತರಣೆಯಾಗದಿದ್ದರೆ ನಾವು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ ಈ ಯೋಜನೆಗೆ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಅಗ್ನಿಪಥ್ ನೇಮಕಾತಿ ಯೋಜನೆ
ಅಗ್ನಿಪಥ್ ಅಥವಾ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೂನ್ 14ಕ್ಕೆ ಚಾಲನೆ ನೀಡಿದರು. ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಯೋಜನೆಯಾಗಿದ್ದು, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗೆ 46,000 ಸೈನಿಕರನ್ನು ಸೇರಿಸಿಕೊಳ್ಳುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ.

ವೈದ್ಯಕೀಯ ಮತ್ತು ವಿಮೆ ಪ್ರಯೋಜನ
ಹೊಸ ಯೋಜನೆಯಡಿಯಲ್ಲಿ, 17.5 ವರ್ಷದಿಂದ 21 ವರ್ಷದೊಳಗಿನ ಸುಮಾರು 45,000 ಜನರನ್ನು ಸೇವೆಗಳಿಗೆ ಸೇರಿಸಿಕೊಳ್ಳಲಾಗುವುದು ಮತ್ತು ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಾರೆ. ಈ ನಾಲ್ಕು ವರ್ಷಗಳ ಅಧಿಕಾರಾವಧಿಯು ಆರು ತಿಂಗಳ ತರಬೇತಿಯನ್ನು ಒಳಗೊಂಡಿರುತ್ತದೆ. ಈ ಅವಧಿಯಲ್ಲಿ ಅವರಿಗೆ 30,000 ರು ನಿಂದ 40,000 ರು ಮತ್ತು ಭತ್ಯೆಗಳ ನಡುವೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಅವರು ವೈದ್ಯಕೀಯ ಮತ್ತು ವಿಮೆ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ.
ನಾಲ್ಕು ವರ್ಷಗಳ ನಂತರ, ಈ ಸೈನಿಕರಲ್ಲಿ ಕೇವಲ ಶೇ 25 ರಷ್ಟು ಮಾತ್ರ ಸೇವೆಯಲ್ಲಿ ಉಳಿಯಲಿದ್ದಾರೆ ಹಾಗೂ ಅವರನ್ನು ಸಾಮಾನ್ಯ ಕೇಡರ್ಗೆ ಸೇರಿಸಲಾಗುತ್ತದೆ. ಜೊತೆಗೆ ಪೂರ್ಣ 15 ವರ್ಷಗಳ ಕಾಲ ಅಧಿಕಾರಿಯೇತರ ಶ್ರೇಣಿಯಲ್ಲಿ ಸೇವೆ ಸಲ್ಲಿಸಬಹುದಾಗಿದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications