2ನೇ ದಿನ ಪ್ಯಾಸೆಂಜರ್ ರೈಲಿಗೆ 1,69,039 ಪ್ರಯಾಣಿಕರಿಂದ ಬುಕ್ಕಿಂಗ್!
ನವದೆಹಲಿ, ಮೇ.12: ಭಾರತ ಸಂಪರ್ಕ ಕೊಂಡಿ ಎನಿಸಿರುವ ರೈಲುಗಳಲ್ಲಿ ಸೀಟ್ ರಿಸರ್ವೇಶನ್ ಗೆ ಪ್ರಯಾಣಿಕರು ಮುಗಿ ಬೀಳುತ್ತಿದ್ದಾರೆ. ಭಾರತ ಲಾಕ್ ಡೌನ್ ನಡುವೆ ಪ್ಯಾಸೆಂಜರ್ ರೈಲುಗಳಲ್ಲಿ ರಿಸರ್ವೇಶನ್ ಮಾಡುವುದಕ್ಕೆ ಭಾರತೀಯ ರೈಲ್ವೆ ಅನುಮತಿ ನೀಡಿದ ಹಿನ್ನೆಲೆ ಎರಡನೇ ದಿನ 1,69,039 ಪ್ರಯಾಣಿಕರು ಸೀಟ್ ರಿಸರ್ವ್ ಮಾಡಿದ್ದಾರೆ.
ಮಂಗಳವಾರದಿಂದ ಭಾರತದಲ್ಲಿ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಿದ್ದು, ಇದಕ್ಕೂ ಮುನ್ನ ದಿನ 54,000ಕ್ಕೂ ಅಧಿಕ ಪ್ರಯಾಣಿಕರು ಆನ್ ಲೈನ್ ನಲ್ಲಿಯೇ ಸೀಟ್ ರಿಸರ್ವ್ ಮಾಡಿದ್ದರು. 30,000ಕ್ಕೂ ಅಧಿಕ ಪ್ರಯಾಣಿಕರು ಪಿಎನ್ಆರ್ ಜನರೇಟ್ ಮಾಡಿಕೊಂಡಿದ್ದರು.
ಎರಡನೇ ದಿನವಾದ ಮಂಗಳವಾರ ದೇಶದಲ್ಲಿ 90,331 ಪ್ರಯಾಣಿಕರಿಗೆ ಪಿಎನ್ಆರ್ ಜನರೇಟ್ ಮಾಡಿಕೊಂಡಿದ್ದಾರೆ. ಒಂದೇ ದಿನದಲ್ಲಿ 30 ರೈಲುಗಳಿಗೆ ಬರೋಬ್ಬರಿ 1,69,039 ಪ್ರಯಾಣಿಕರು ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ.

ದೇಶದಲ್ಲಿ 30 ರೈಲುಗಳ ಸಂಚಾರಕ್ಕೆ ಅನುಮತಿ:
ಭಾರತ ಲಾಕ್ ಡೌನ್ ನಡುವೆಯೇ ದೇಶದ ಸಂಪರ್ಕ ಕೊಂಡಿ ರೈಲ್ವೆ ಸಂಚಾರಕ್ಕೆ ಮೇ.12ರಿಂದ ಅನುಮತಿ ನೀಡಲಾಗಿತ್ತು. ಪ್ಯಾಸೆಂಜರ್ ರೈಲುಗಳ ಸಂಚಾರಕ್ಕಾಗಿ ಆನ್ ಲೈನ್ ಗಳಲ್ಲಿ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗಿದ್ದು, ಬುಕ್ಕಿಂಗ್ ಆರಂಭಗೊಂಡು ಕೆಲಗಂಟೆಗಳಲ್ಲೇ ಎಲ್ಲ ಟಿಕೆಟ್ ಗಳು ಬುಕ್ ಆಗುತ್ತಿವೆ.
ರಾಷ್ಟ್ರ ರಾಜಧಾನಿ ನವದೆಹಲಿ, ದಿಬ್ರುಘರ್, ಅಗರ್ತಲಾ, ಹೌರಾ, ಪಾಟ್ನಾ, ಬಿಸಲ್ ಪುರ್, ರಾಂಚಿ, ಭುವನೇಶ್ವರ್, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾವ್, ಕೇಂದ್ರ ಮುಂಬೈ, ಅಹ್ಮದಾಬಾದ್ ಹಾಗೂ ಜಮ್ಮುವಿನಲ್ಲಿ ರೈಲ್ವೆ ಸೇವೆ ಆರಂಭವಾಗಲಿದೆ.
-
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications