ಅಮೆರಿಕದಿಂದ 119 ಅಕ್ರಮ ಭಾರತೀಯ ವಲಸಿಗರು ಇಂದು ವಾಪಸ್
ಚಂಡೀಗಢ, ಫೆಬ್ರವರಿ 15: ಅಮೆರಿಕ ಅಧ್ಯಕ್ಷರಾಗಿ 2ನೇ ಬಾರಿಗೆ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಕೇವಲ ಮೂರು ದಿನಗಳಲ್ಲಿ ಅಧಿಕಾರಿಗಳು ಅತಿದೊಡ್ಡ ಗಡಿಪಾರು ಕಾರ್ಯಾಚರಣೆ ಆರಂಭಿಸಿದ್ದಾರೆ. ಮೊದಲ ಹಂತದಲ್ಲಿ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ 104 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ಕಳಿಸಲಾಗಿತ್ತು. 2ನೇ ವಿಮಾನ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆಗಮಿಸಲಿದೆ.
ಮಾಹಿತಿಗಳ ಪ್ರಕಾರ 119 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಸೇನಾ ವಿಮಾನ ಭಾರತಕ್ಕೆ ಆಗಮಿಸಲಿದೆ. ಪಂಜಾಬ್ನ ಅಮೃತಸರದಲ್ಲಿರುವ ಶ್ರೀ ಗುರು ರಾಮದಾಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಲಿದೆ.

ಕಳೆದ ವಾರ 104 ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕದ ಸೇನಾ ವಿಮಾನದ ಮೂಲಕ ವಾಪಸ್ ಕಳಿಸಿತ್ತು. ಅಮೃತಸರದ ವಿಮಾನ ನಿಲ್ದಾಣಕ್ಕೆ ಈ ವಿಮಾಬ ಬಂದಿತ್ತು. ಹರ್ಯಾಣ, ಗುಜರಾತ್ನ ತಲಾ 33 ಮಂದಿ ಹಾಗೂ ಪಂಜಾಬ್ನ 30 ಜನರು ಈ ವಿಮಾನದಲ್ಲಿದ್ದರು.
ಕೈಕೋಳ ಹಾಕಲಾಗಿದೆ ಎಂಬ ವಿವಾದ: ಶನಿವಾರ ಲ್ಯಾಂಡ್ ಆಗಲಿರುವ ಸೇನಾ ವಿಮಾನದಲ್ಲಿ 119 ಭಾರತೀಯರು ಆಗಮಿಸಲಿದ್ದಾರೆ. ಇವರಲ್ಲಿ ಪಂಜಾಬ್ನ 67, ಹರ್ಯಾಣದ 33, ಗುಜರಾತ್ನ 8, ಉತ್ತರ ಪ್ರದೇಶದ 3, ಗೋವಾ, ಮಹಾರಾಷ್ಟ್ರ ಮತ್ತು ರಾಜಸ್ಥಾನದ ತಲಾ ಇಬ್ಬರು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದ ತಲಾ ಒಬ್ಬರು ಆಗಮಿಸಲಿದ್ದಾರೆ ಎಂಬ ಮಾಹಿತಿ ಇದೆ.
ಅಮೆರಿಕದಲ್ಲಿ ನೆಲೆಸಿರುವ ವಿವಿಧ ದೇಶಗಳ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು. ಈ ಕಾರ್ಯಾಚರಣೆಯ ಭಾಗವಾಗಿಯೇ ಭಾರತ ಸೇರಿದಂತೆ ವಿವಿಧ ದೇಶಗಳ ಅಕ್ರಮ ವಲಸಿಗರನ್ನು ಬಂಧಿಸಿ, ಅವರ ದೇಶದಕ್ಕೆ ಗಡಿಪಾರು ಮಾಡಲಾಗುತ್ತಿದೆ.
ಮೊದಲ ಹಂತದಲ್ಲಿ ಭಾರತಕ್ಕೆ ಬಂದ ಅಕ್ರಮ ವಲಸಿಗರಿಗೆ ಕೈ ಕೋಳ ಹಾಕಲಾಗಿತ್ತು ಎಂಬುದು ವಿವಾದಕ್ಕೆ ಕಾರಣವಾಗಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಪಕ್ಷಗಳು ಅಕ್ರೋಶ ವ್ಯಕ್ತಪಡಿಸಿದ್ದವು.
ಈಗ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬಳಿಕ 2ನೇ ತಂಡದಲ್ಲಿ ಅಕ್ರಮ ಭಾರತೀಯ ವಲಸಿಗರನ್ನು ದೇಶಕ್ಕೆ ಕಳಿಸಲಾಗುತ್ತಿದೆ. ಇವರಿಗೆ ಸಹ ಕೈ ಕೋಳ ಹಾಕಲಾಗಿದೆಯೇ? ಎಂಬುದು ಚರ್ಚೆಯ ವಿಚಾರವಾಗಿದೆ.
ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕ ವಾಪಸ್ ಕಳಿಸುವ ಕುರಿತು ಪ್ರತಿಕ್ರಿಯೆ ನೀಡಿದ್ದರು.
"ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಸ್ನೇಹಿತ. ನನ್ನ ಮಾತು ಕೇಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಹೇಳುತ್ತಾರೆ. ಆದರೆ ನಿಮ್ಮನ್ನು ಕೇಳದೆ ಅಕ್ರಮ ಭಾರತೀಯ ವಲಸಿಗರನ್ನು ಏಕೆ ದೇಶದಿಂದ ಹೊರ ಹಾಕುತ್ತಿದ್ದಾರೆ?" ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದರು.
"ದೇಶದ ಪ್ರಜೆಗಳ ಕೈಗಳಿಗೆ, ಕಾಳಿಗೆ ಬೇಡಿ ಹಾಕಿ ಕರೆತರಲಾಗುತ್ತಿದೆ. ಅಂದರೆ ನಿಮ್ಮ ಸ್ನೇಹಿತ ನಮ್ಮ ದೇಶದ ಪ್ರಜೆಗಳನ್ನು ಗುಲಾಮರಂತೆ ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮೋದಿ ಆಲೋಚಿಸಬೇಕು, ಮಾತನಾಡಬೇಕು" ಎಂದು ಖರ್ಗೆ ಒತ್ತಾಯಿಸಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications