ವಾಟ್ಸಾಪ್, ಟೆಲಿಗ್ರಾಮ್ ಗಳೂ ಸೇಫ್ ಅಲ್ಲ: ಸಮೀಕ್ಷೆ
ವ್ಯಾಟ್ಸಾಪ್ ಅಥವಾ ಟೆಲಿಗ್ರಾಂ ಆ್ಯಪ್ ಗಳು ಎಂಡ್-ಟು-ಎಂಡ್ ಎನ್ ಕ್ರಿಪ್ಷನ್ ಎಂಬ ತಂತ್ರಜ್ಞಾನವನ್ನು ಭದ್ರತೆಗಾಗಿ ಅಳವಡಿಸಿಕೊಂಡಿದ್ದರೂ ಅದರಲ್ಲಿನ ಲೋಪ ದೋಷಗಳು ಹ್ಯಾಕರ್ ಗಳಿಗೆ ನೆರವಾಗಲಿವೆ ಎನ್ನಲಾಗಿದೆ.
ನವದೆಹಲಿ, ಮಾರ್ಚ್ 16: ಸ್ಮಾರ್ಟ್ ಫೋನ್ ಗಳೊಂದಿಗಿನ ನಮ್ಮ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಅಭಿಭಾಜ್ಯ ಅಂಗವಾಗಿರುವ ವ್ಯಾಟ್ಸಾಪ್ ಹಾಗೂ ಟೆಲಿಗ್ರಾಮ್ ಆ್ಯಪ್ ಗಳು ಸುರಕ್ಷಿತವಾಗಿಲ್ಲ. ಅವುಗಳಲ್ಲಿ ನಾವು ಏನಾದರೂ ಗುರುತವಾದ ಮಾಹಿತಿಯನ್ನು ಹಂಚಿಕೊಂಡರೆ, ಅವನ್ನು ಹ್ಯಾಕರ್ ಕದಿಯುವ ಸಾಧ್ಯತೆಗಳಿವೆ ಎಂದು ಆ್ಯಪ್ ಗಳ ಸಂಶೋಧನಾ ಸಂಸ್ಥೆಯೊಂದು ಹೇಳಿದೆ.
ಚೆಕ್ ಪಾಯಿಂಟ್ ಸಾಫ್ಟ್ ವೇರ್ ಟೆಕ್ನಾಲಜೀಸ್ ಎಂಬ ಸಂಸ್ಥೆಯು ಈ ವಿಚಾರವನ್ನು ಬಹಿರಂಗಗೊಳಿಸಿದೆ. ಸಾಮಾನ್ಯವಾಗಿ ವ್ಯಾಟ್ಸಾಪ್ ಹಾಗೂ ಟೆಲಿಗ್ರಾಂ ಆ್ಯಪ್ ಗಳು ಎಂಡ್-ಟು-ಎಂಡ್ ಎನ್ ಕ್ರಿಪ್ಷನ್ ತಂತ್ರಜ್ಞಾನದಿಂದ ಸುರಕ್ಷಿತವಾಗಿವೆ ಎಂದು ಆಯಾ ಕಂಪನಿಗಳು ಹೇಳಿಕೊಂಡಿದ್ದರೂ, ಈ ತಂತ್ರಜ್ಞಾನದಲ್ಲಿ ಕೆಲವಾರು ಲೋಪ ದೋಷಗಳನ್ನು ತಾನು ಪತ್ತೆ ಹಚ್ಚಿರುವುದಾಗಿ ಸಂಸ್ಥೆ ಹೇಳಿಕೊಂಡಿದೆ.[ಮತ್ತೆ ಮುಂದುವರಿಯುತ್ತೆ ರಿಲಾಯನ್ಸ್ ಜಿಯೋ ಉಚಿತ ಕೊಡುಗೆ!]

ಇದರಿಂದ, ಹ್ಯಾಕರ್ ಗಳು ಈ ಆ್ಯಪ್ ಗಳಲ್ಲಿನ ಗ್ರಾಹಕರ ಅಕೌಂಟ್ ಗೆ ಕನ್ನ ಹಾಕಿ, ಅವರ ಅಥವಾ ಅವರು ನಂಟು ಹೊಂದಿರುವ ಇತರೆ ವ್ಯಾಟ್ಸಾಪ್ ಗ್ರಾಹಕರು ಅಥವಾ ಟೆಲಿಗ್ರಾಂ ಗ್ರಾಹಕರ ಅಕೌಂಟ್ ಗಳವರೆಗೆ ಸಾಗಿ ತಮಗೆ ಬೇಕಾದ ಮಾಹಿತಿಗಳನ್ನು ಕದಿಯಬಹುದಾಗಿದೆ ಎಂದೂ ಸಂಸ್ಥೆ ಹೇಳಿದೆ.
ಅದು ಸಾಧ್ಯವಾದರೆ, ಕೋಟಿಗಟ್ಟಲೆ ಗ್ರಾಹಕರ ಮಾಹಿತಿಯನ್ನು ಕೆಲವೇ ನಿಮಿಷಗಳಲ್ಲಿ ದೋಚಬಹುದಾಗಿದೆ ಎಂದೂ ಕಂಪನಿ ಎಚ್ಚರಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications