ಅಮೀರ್ ನಟನೆಯ ಲಾಲ್ ಸಿಂಗ್ ಚಡ್ಡಾ ನೋಡಿ ಹೃತಿಕ್ ರೋಷನ್ ಹೇಳಿದ್ದು ಹೀಗೆ!
ನವದೆಹಲಿ, ಆಗಸ್ಟ್ 14: ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಚಿತ್ರದ ಕುರಿತು ಪರ- ವಿರೋಧ ಚರ್ಚೆಗಳ ಬೆನ್ನಲ್ಲೇ ಚಿತ್ರವನ್ನು ವೀಕ್ಷಿಸಿರುವ ನಟ ಹೃತಿಕ್ ರೋಷನ್ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ಚಿತ್ರದ ಬಗ್ಗೆ ಕಿರು ಟಿಪ್ಪಣಿ ಬರೆದಿರುವ ನಟ, ಪ್ಲಸಸ್ ಮತ್ತು ಮೈನಸ್ ಅನ್ನು ಬದಿಗಿಟ್ಟು ಈ ಸುಂದರ ಚಿತ್ರವನ್ನು ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.
"ಲಾಲ್ ಸಿಂಗ್ ಚಡ್ಡಾವನ್ನು ಈಗಷ್ಟೇ ವೀಕ್ಷಿಸಿದ್ದೇನೆ. ಪ್ಲಸಸ್ ಮತ್ತು ಮೈನಸ್ಗಳನ್ನು ಬದಿಗಿಟ್ಟು, ಈ ಚಲನಚಿತ್ರವು ಅದ್ಭುತವಾಗಿದೆ. ಈ ರತ್ನವನ್ನು ಕಳೆದುಕೊಳ್ಳಬೇಡಿ! ಹೋಗಿ! ಈಗಲೇ ಹೋಗಿ. ಇದನ್ನು ವೀಕ್ಷಿಸಿ. ಇದು ಸುಂದರವಾಗಿದೆ. ತುಂಬ ಸುಂದರವಾಗಿದೆ" ಎಂದು ಬರೆದಿದ್ದಾರೆ.

ಲಾಲ್ ಸಿಂಗ್ ಚಡ್ಡಾ ಚಿತ್ರದಲ್ಲಿ ಅಮೀರ್ ಖಾನ್, ಕರೀನಾ ಕಪೂರ್, ಮೋನಾ ಸಿಂಗ್ ಮತ್ತು ನಾಗ ಚೈತನ್ಯ ಸೇರಿದಂತೆ ಹಲವರು ನಟಿಸಿದ್ದಾರೆ. ಕರೀನಾ ಕಪೂರ್ ಚಿತ್ರದ ಕುರಿತು ಹೃತಿಕ್ ಅವರ ಇನ್ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಅದ್ವೈತ್ ಚಂದನ್ ನಿರ್ದೇಶಿಸಿದ ಲಾಲ್ ಸಿಂಗ್ ಚಡ್ಡಾ ಚಲನಚಿತ್ರವು 1994 ರ ಅಕಾಡೆಮಿ ಪ್ರಶಸ್ತಿ ವಿಜೇತ ಚಲನಚಿತ್ರ, ಟಾಮ್ ಹ್ಯಾಂಕ್ಸ್ ನಟಿಸಿದ ಫಾರೆಸ್ಟ್ ಗಂಪ್ ನ ರೂಪಾಂತರವಾಗಿದೆ. ಚಿತ್ರವು ಆಗಸ್ಟ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರ ಬಿಡುಗಡೆಗೆ ಮುನ್ನವೇ ಸಿನಿಮಾ ಬಹಿಷ್ಕರಿಸಲು ಕರೆ ನೀಡಲಾಗಿತ್ತು.
2015ರಲ್ಲಿ ಅಮೀರ್ ಖಾನ್ ಸಂದರ್ಶನವೊಂದರ ವೇಳೆ ದೇಶ ತೊರೆಯುವ ಮಾತನಾಡಿದ್ದರು. ಅದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಸಂದರ್ಶನದ ವೇಳೆ ಮಾತನಾಡಿದ್ದ ಅಮೀರ್ ಖಾನ್, "ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯಿಂದಾಗಿ ನನ್ನ ಪತ್ನಿ ಕಿರಣ್ ರಾವ್ ದೇಶ ತೊರೆಯಲು ನನಗೆ ಹೇಳುತ್ತಿದ್ದಾರೆ" ಎಂದು ಹೇಳಿಕೆ ನೀಡಿದ್ದರು. ಸದ್ಯ ಅದೇ ವಿಡಿಯೋ ತುಣುಕಗಳನ್ನು ಪೋಸ್ಟ್ ಮಾಡುವ ಮೂಲಕ ಅಮೀರ್ ಖಾನ್ ಚಿತ್ರವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗುತ್ತಿದೆ. ಚಿತ್ರವನ್ನು ಬಹಿಷ್ಕಾರಿಸದಂತೆ ನಟ ಅಮೀರ್ ಖಾನ್ ಮನವಿ ಮಾಡಿದ್ದರು.

ಇನ್ನು, ಹೃತಿಕ್ ರೋಷನ್ ಅವರ ಪೋಸ್ಟ್ ಅನ್ನು ನಟಿ ಕರೀನಾ ಕಪೂರ್ ಹಂಚಿಕೊಂಡು ಧನ್ಯವಾದ ಹೇಳಿದ್ದಾರೆ. ಹೃತಿಕ್ ಕೈಯಲ್ಲಿ ಸಾಳು ಸಾಲು ಚಿತ್ರಗಳಿವೆ. ಅವರು ಸೈಫ್ ಅಲಿ ಖಾನ್ ಜೊತೆ ವಿಕ್ರಮ್ ವೇದಾ ಚಿತ್ರದಲ್ಲಿ ನಟಿಸಲಿದ್ದಾರೆ. ದೀಪಿಕಾ ಪಡುಕೋಣೆ ಅವರೊಂದಿಗೆ ಫೈಟರ್ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.
-
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications