'ನಾಮ' ಕಂಡರೆ ಭಯವೆಂದ ಸಿದ್ದು ವಿರುದ್ಧ #SelfieWithTilak ಅಸ್ತ್ರ
Recommended Video

ಬೆಂಗಳೂರು, ಮಾರ್ಚ್ 07: 'ತಿಲಕ ಇಟ್ಟರೆ ಸ್ವರ್ಗ ಸಿಗದು, ವಿಭೂತಿ ಬಳಿದರೆ ಕೈಲಾಸ ಸಿಗದು' ಎಂಬ ಹಾಡಿನ ಸಾರವನ್ನು ಹೊತ್ತಿರುವ ನಾಡನಲ್ಲಿ 'ತಿಲಕ' ಇಟ್ಟವರ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ ಮಾತುಗಳು ಈಗ ಟ್ರೆಂಡಿಂಗ್ ನಲ್ಲಿವೆ.
ತಿಲಕ, ಉದ್ದ ನಾಮ ಇಟ್ಟವರನ್ನು ಕಂಡರೆ ನನಗೆ ಭಯವಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ ಮಾತನ್ನು ಇಟ್ಟುಕೊಂಡು ಬಿಜೆಪಿ #selfiewiththilak ಎಂಬ ಅಭಿಯಾನವನ್ನು ಟ್ವಿಟ್ಟರ್ ನಲ್ಲಿ ನಡೆಸಿತು. ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿಟಿ ರವಿ ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದರು. ದೆಹಲಿಯ ಬಿಜೆಪಿ ವಕ್ತಾರ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಟ್ವೀಟ್ ಮಾಡಿದ ಬಳಿಕ ಅಭಿಯಾನ ವೈರಲ್ ಆಗಲು ಶುರುವಾಯಿತು.
ಇತ್ತೀಚೆಗೆ ವರುಣಾ ವಿಧಾನಾಸಭಾ ಕ್ಷೇತ್ರದ ಗರ್ಗೇಶ್ವರಿ ಗ್ರಾಮದಲ್ಲಿ ನಡೆದ ಟಿ ನರಸೀಪುರ ತಾಲೂಕ್ ಪಂಚಾಯತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಡೆದುಕೊಂಡ ರೀತಿ ಭಾರಿ ಟೀಕೆಗೆ ಒಳಗಾಗಿತ್ತು. ತಮ್ಮ ಪುತ್ರನ ಬಗ್ಗೆ ಪ್ರಶ್ನಿಸಿದ ಮಾಜಿ ಜಿ.ಪಂ ಸದಸ್ಯೆ ಜಮಾಲರ್ ಎಂಬ ಮಹಿಳೆಯ ಬಾಯ್ಮಿಚ್ಚಿಸಲು ಹೋದಾಗ ನಡೆದ ಘಟನೆಯನ್ನು ವಿಪಕ್ಷದವರು ಸೇರಿದಂತೆ ಸಾರ್ವಜನಿಕರು ತಮಗಿಷ್ಟ ಬಂದ ಹಾಗೆ ಬಳಸಿಕೊಂಡು ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಯಾಗುವಂತೆ ಮಾಡಿದ್ದರು.
| Array |
ತೇಜಿಂದರ್ ಪಾಲ್ ಸಿಂಗ್ ಬಗ್ಗಾ
ದೆಹಲಿ ಬಿಜೆಪಿ ವಕ್ತಾರ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಟ್ವೀಟ್ ಮಾಡಿ, ನಾನು ನನ್ನ ತಿಲಕದೊಂದಿಗೆ ಚಿತ್ರ ಟ್ವೀಟ್ ಮಾಡುತ್ತಿದ್ದೇನೆ. ಇದು ಹಿಂದು ವಿರೋಧಿ/ ಭಾರತೀಯ ಸಂಸ್ಕೃತಿ ವಿರೋಧಿ ಸಿದ್ದರಾಮಯ್ಯ ವಿರುದ್ಧದ ಪ್ರತಿಭಟನೆ. ನೀವು ಸೂಕ್ತ ಹ್ಯಾಶ್ ಟ್ಯಾಗ್ ಬಳಸಿ ನಿಮ್ಮ ಸೆಲ್ಫಿ ವಿಥ್ ತಿಲಕ್ ಹಾಕಿ ಎಂದು ಕೋರಿದ್ದರು.
ತಿಲಕ ಇಡುವವರನ್ನು ಕಂಡ್ರೆ ಭಯ: ಸಿದ್ದರಾಮಯ್ಯ ವಿಡಿಯೋ ವೈರಲ್
|
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ
ಚಿಕ್ಕಮಗಳೂರಿನ ಶಾಸಕ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರಿಗೆ ತಿಲಕ ಇಟ್ಟವರನ್ನು ಕಂಡರೆ ಭಯವಂತೆ, ಹಾಗಾದರೆ, ಸಿದ್ದರಾಮಯ್ಯ ಅವರು ತಿಲಕ ಏಕೆ ಇಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರ ಫೋಟೋಗಳನ್ನು ಹಾಕಿದ್ದಾರೆ. ಹಿಂದುಗಳನ್ನು ಏಕೆ ಅಷ್ಟು ವಿರೋಧ ಎಂದು ಪ್ರಶ್ನಿಸಿದ್ದಾರೆ.
|
ನಿಖಿಲ್ ಎಂಬುವರಿಂದ ಟ್ವೀಟ್
ನಿಖಿಲ್ ಎಂಬುವರು ಟ್ವೀಟ್ ಮಾಡಿ, ನಿಮ್ಮಂಥ ಊಸರವಳ್ಳಿಗಳನ್ನು ನೋಡಿದರೆ ಭಯವಾಗುತ್ತದೆ ಎಂದಿದ್ದಾರೆ. ಟ್ವೀಟ್ ನಲ್ಲಿ ಸಿದ್ದರಾಮಯ್ಯ ಅವರು ಹಣೆಯಲ್ಲಿ ನಾಮ ಇಟ್ಟುಕೊಂಡಿರುವ ಚಿತ್ರವೊಂದನ್ನು ಹಾಕಿದ್ದಾರೆ.
|
ಪಾಕಿಸ್ತಾನದಿಂದ ಬಂದ ಸಂದೇಶ
ಲಾಹೋರ್ ಪೊಲೀಸ್ ಹೆಸರಿನಲ್ಲಿರುವ ಅನಧಿಕೃತ ಟ್ವಿಟ್ಟರ್ ಖಾತೆಯೊಂದರಲ್ಲಿ ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಅವರ ಚಿತ್ರವೊಂದನ್ನು ಹಾಕಲಾಗಿತ್ತು. ಇಮ್ರಾನ್ ಹಣೆಗೆ ತಿಲಕ ಇಟ್ಟು ಪಕ್ಕದಲ್ಲಿ ಜೈ ಶ್ರೀರಾಮ್ ಎಂಬ ಅಡಿಬರಹ ನೀಡಲಾಗಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications