ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಹಿರಿಯ ಐಎಎಸ್ ಅಧಿಕಾರಿ ಅಮಾನತು
ಪೋರ್ಟ್ ಬ್ಲೈರ್, ಅಕ್ಟೋಬರ್ 17: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಹಿಳೆ ಅತ್ಯಾಚಾರದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಹಿರಿಯ ಅಧಿಕಾರಿ ಜಿತೇಂದ್ರ ನರೇನ್ ಅನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮುಖ್ಯ ಕಾರ್ಯದರ್ಶಿಯಾಗಿದ್ದ ನರೇನ್ ಮತ್ತು ಇನ್ನೊಬ್ಬ ಅಧಿಕಾರಿ ಆರ್.ಎಲ್.ರಿಷಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು 21 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದರು.
"ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಹಾಗೂ ಇತರರ ಮೇಲೆ ಮಹಿಳೆಯು ಮಾಡಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರಂದು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಲಾಗಿತ್ತು," ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. AGMUT ಕೇಂದ್ರದ ನಾಗರಿಕ ಸೇವೆಗಳ ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶದ ಕೇಡರ್ ಅನ್ನು ಉಲ್ಲೇಖಿಸಿದೆ.

ಜೀತೇಂದ್ರ ನಾರಾಯಣ್ ವಿರುದ್ಧ ಅತ್ಯಾಚಾರದ ಆರೋಪ
ಈಗಾಗಲೇ ಸಲ್ಲಿಕೆ ಆಗಿರುವ ವರದಿಯಲ್ಲಿ ಹಿರಿಯ ಅಧಿಕಾರಿ ಜಿತೇಂದ್ರ ನಾರಾಯಣ್ ಘೋರ ದುರ್ನಡತೆ ಮತ್ತು ಅಧಿಕೃತ ಸ್ಥಾನದ ದುರುಪಯೋಗವನ್ನು ಮಾಡಿಕೊಂಡಿರುವ ಸಾಧ್ಯತೆ ಹೆಚ್ಚಾಗಿ ಕಂಡು ಬಂದಿರುವ ಕಾರಣ, ಕೇಂದ್ರ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಾನೂನು ಪ್ರಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಪರಿಣಾಮ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ,'' ಎಂದು ಸರ್ಕಾರ ತಿಳಿಸಿದೆ.

ಮಹಿಳೆಯರ ಮೇಲೆ ದೌರ್ಜನ್ಯವನ್ನು ಸಹಿಸುವುದಿಲ್ಲ
"ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವಂತಹ ಘಟನೆಗಳಲ್ಲಿ ಯಾವುದೇ ಅಧಿಕಾರಿ ಆಗಿದ್ದರೂ, ಅವರ ಶ್ರೇಣಿ ಮತ್ತು ಸ್ಥಾನಮಾನವನ್ನು ಲೆಕ್ಕಿಸದೇ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು," ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈ ತಿಂಗಳ ಆರಂಭದಲ್ಲಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದರು. ಇದೇ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತನ್ನ ಮೇಲೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದರು.

ಉದ್ಯೋಗದ ಹುಡುಕಾಟದಲ್ಲಿದ್ದ ಮಹಿಳೆ
21 ವರ್ಷದ ಮಹಿಳೆಯು ತಾನು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳುವ ಕನಸು ಕಾಣುತ್ತಿದ್ದರು. ಉದ್ಯೋಗದ ಹುಡುಕಾಟದಲ್ಲಿದ್ದ ಮಹಿಳೆಗೆ ಮೊದಲು ಪರಿಚಯವಾಗಿದ್ದೇ ಆರ್ಎಲ್ ರಿಷಿ. ಮಹಿಳೆಗೆ ಹೋಟೆಲ್ ಮಾಲೀಕರ ಮೂಲಕ ಆರ್ಎಲ್ ರಿಷಿಯ ಪರಿಚಯ ಆಯಿತು. ಅಲ್ಲಿಂದ ಮುಂದೆ ಜೀತೇಂದ್ರ ನರೇನ್ ಮನೆಗೆ ಆ ಮಹಿಳೆಯನ್ನು ಕರೆದುಕೊಂಡು ಹೋಗಲಾಗಿತ್ತು. ಆ ಮನೆಯಲ್ಲಿ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆಯು ಸ್ಪಷ್ಟವಾಗಿ ಉಲ್ಲೇಖಿಸಿದ್ದರು.

ಮಹಿಳೆ ಅತ್ಯಾಚಾರಕ್ಕೂ ಮೊದಲು ಎಣ್ಣೆ ಕುಡಿಸಿದ್ರು!
ಮಾಜಿ ಮುಖ್ಯ ಕಾರ್ಯದರ್ಶಿಯ ಮನೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಘಟನೆಗೂ ಮೊದಲು ಮಹಿಳೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಲಾಗಿತ್ತು, ಅದನ್ನು ಮಹಿಳೆ ನಿರಾಕರಿಸಿದರು. ಆದರೆ ತಮಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ಆಕೆಗೆ ಎಣ್ಣೆ ಕುಡಿಸಿ ನಂತರದಲ್ಲಿ ಅತ್ಯಾಚಾರ ನಡೆಸಿದರು ಎಂದು ಆರೋಪಿಸಲಾಗಿದೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications