Get Updates
Get notified of breaking news, exclusive insights, and must-see stories!

ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗುತ್ತಿದೆ, ರಾಮ ಮಂದಿರ ಉದ್ಘಾಟನೆಗೆ ಬರಲ್ಲ ಎಂದ ನಾಯಕಿ

ನವದೆಹಲಿ, ಡಿಸೆಂಬರ್‌ 26: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಪ್ರಾಣಪತ್ರಿಷ್ಠೆ ಸಮಾರಂಭಕ್ಕೆ ಸಿಪಿಐ(ಎಂ)ನ ಹಿರಿಯ ನಾಯಕಿ ಬೃಂದಾ ಕಾರಟ್ ತಮ್ಮ ಪಕ್ಷದಿಂದ ಯಾರೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಮುಂದಿನ ವರ್ಷ ಕಾರ್ಯಕ್ರಮಕ್ಕೆ ಆಹ್ವಾನಿತ ವಿರೋಧ ಪಕ್ಷದ ನಾಯಕರ ಪಟ್ಟಿಯಲ್ಲಿ ಇದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ಪ್ರಾಣಪತ್ರಿಷ್ಠೆ ಸಮಾರಂಭಕ್ಕೆ ಹೋಗದಿರುವ ನಿರ್ಧಾರವನ್ನು ಸಮರ್ಥಿಸಿಕೊಂಡ ಹಿರಿಯ ನಾಯಕಿ, ತಮ್ಮ ಪಕ್ಷವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಲು ಮುಂದಾಗಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಹೇಳಿದರು.

Senior leader of CPI(M) Brinda Karat said that she will not attend the inauguration of Ram Mandir.

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ನಮ್ಮ ಪಕ್ಷ ಭಾಗವಹಿಸುವುದಿಲ್ಲ, ನಾವು ಜನರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ. ಆದರೆ ಬಿಜೆಪಿ ಧರ್ಮವನ್ನು ರಾಜಕೀಯದೊಂದಿಗೆ ಬೆರೆಸುತ್ತಿದ್ದಾರೆ. ಇದು ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯಗೊಳಿಸುವ ಪ್ರಯತ್ನವಾಗಿದೆ. ಇದು ಸರಿಯಲ್ಲ ಎಂದು ಬೃಂದಾ ಕಾರಟ್ ತಿಳಿಸಿದರು.

ಧರ್ಮವನ್ನು ರಾಜಕೀಯ ಅಸ್ತ್ರವಾಗಿ ಬಳಸುವುದು ಅಥವಾ ರಾಜಕೀಯ ಕಾರ್ಯಸೂಚಿಯನ್ನು ಮುಂದುವರಿಸುವುದು ಸರಿಯಲ್ಲ. ಈ ಜನರು ಮಾಡುತ್ತಿರುವುದು ಸರಿಯಲ್ಲ, ಇದು ಸಂಪೂರ್ಣವಾಗಿ ರಾಜಕೀಯವಾಗಿದೆ. ರಾಜಕೀಯ ಮತ್ತು ಧರ್ಮವನ್ನು ಬೇರ್ಪಡಿಸಬೇಕು ಮತ್ತು ದೂರದಲ್ಲಿ ಇಡಬೇಕು. ಧರ್ಮವನ್ನು ರಾಜಕೀಯಗೊಳಿಸುವುದು ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಮಾತ್ರ ಮುನ್ನಡೆಸುತ್ತದೆ. ಧರ್ಮವನ್ನು ರಾಜಕೀಯ ಅಸ್ತ್ರ ಅಥವಾ ಕಲ್ಪನೆ ಅಥವಾ ಅಜೆಂಡಾವನ್ನು ಮುಂದಿಡುವ ಸಾಧನವಾಗಿ ಬಳಸಿದಾಗ ಅದು ಗೌರವವನ್ನು ಕಳೆದುಕೊಳ್ಳುತ್ತದೆ ಎಂದು ಕಾರಟ್ ಹೇಳಿದರು.

ಸೀತಾರಂ ಯೆಚೂರಿ ಅವರು ಇತ್ತೀಚೆಗೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರಿಂದ ಔಪಚಾರಿಕ ಆಹ್ವಾನವನ್ನು ಸ್ವೀಕರಿಸಿದರು. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವಾರು ಪ್ರಮುಖ ವಿರೋಧ ಪಕ್ಷದ ನಾಯಕರು ಭವ್ಯವಾದ ದೇವಾಲಯದ ಉದ್ಘಾಟನೆಗೆ ಹಾಜರಾಗಲು ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕರ ಸಮಾರಂಭಕ್ಕೆ ಹೋಗುತ್ತಾರಾ ಎಂಬುದು ಇನ್ನು ದೃಢಪಟ್ಟಿಲ್ಲ. ಜನವರಿ 22 ರಂದು ನಡೆಯಲಿರುವ ಸಮಾರಂಭವು ಭವ್ಯ ದೇವಾಲಯದಲ್ಲಿ ರಾಮ ಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ಇದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನೂರಾರು ಅಧಿಕಾರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮಾರಂಭಕ್ಕೆ ಎಲ್ಲಾ ಪಂಗಡಗಳ 4,000 ಸಂತರನ್ನು ಟ್ರಸ್ಟ್ ಆಹ್ವಾನಿಸಿದೆ.

ಸಮಾರಂಭದ ಮೊದಲು ಜನವರಿ ಮೊದಲ ವಾರದಲ್ಲಿ ಜಾನಕಿ ದೇವಸ್ಥಾನದ ಉತ್ತರಾಧಿಕಾರಿಯು ಸ್ಥಳೀಯವಾಗಿ "ಭಾರ್" ಎಂದು ಕರೆಯಲ್ಪಡುವ ಅರ್ಪಣೆಗಳನ್ನು ಅಯೋಧ್ಯೆಗೆ ಧಾರ್ಮಿಕತೆಯ ಭಾಗವಾಗಿ ತೆಗೆದುಕೊಳ್ಳುತ್ತಾರೆ. ಜನವರಿ 22 ರಂದು ಕರ್ನಾಟಕ ಮತ್ತು ರಾಜಸ್ಥಾನದಿಂದ ತಂದ ಎರಡು ಕಲ್ಲುಗಳಿಂದ ಮೂರು ವಿಗ್ರಹಗಳಲ್ಲಿ ಒಂದನ್ನು ಭವ್ಯ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ಮೂರು ಶಿಲೆಗಳಿಂದ ಉತ್ತಮವಾದ ಮೂರ್ತಿಯನ್ನು ಜನವರಿ ಮೊದಲ ವಾರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗುತ್ತದೆ.

ಜನವರಿ 22 ರಂದು ಮಧ್ಯಾಹ್ನ ಮತ್ತು 12.45 ರ ನಡುವೆ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ಟ್ರಸ್ಟ್ ನಿರ್ಧರಿಸಿದೆ. ವೈದಿಕ ಅರ್ಚಕರಾದ ಲಕ್ಷ್ಮೀಕಾಂತ ದೀಕ್ಷಿತ್ ಅವರು ಆ ದಿನದಂದು ಮಹಾಮಸ್ತಕಾಭಿಷೇಕದ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದೊಂದಿಗೆ ಜನಕ್‌ಪುರ ಮತ್ತು ಅಯೋಧ್ಯೆ ನಡುವಿನ ಸಂಬಂಧವನ್ನು ಬಲಪಡಿಸುವುದು ಅಯೋಧ್ಯೆ ಮತ್ತು ಜನಕಪುರ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಜಾನಕಿ ದೇವಸ್ಥಾನದ ಉತ್ತರಾಧಿಕಾರಿ ರಾಮ್ ರೋಷನ್ ದಾಸ್ ಈ ಹಿಂದೆ ಅಭಿಪ್ರಾಯಪಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+