ಜಲವಿವಾದಗಳ ವಕೀಲ ಅನಿಲ್ ದಿವಾನ್ ಸಾವಿಗೆ ಸಿಎಂ ಸಂತಾಪ
ಕಾವೇರಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದಗಳಲ್ಲಿ ಕರ್ನಾಟಕ ಪರ ಸುಪ್ರೀಂ ಕೋರ್ಟಿನಲ್ಲಿ ವಕಾಲತ್ತು ವಹಿಸಿದ್ದ ಅನಿಲ್ ಬಿ ದಿವಾನ್ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಮಾರ್ಚ್ 20: ಹಿರಿಯ ವಕೀಲ ಹಾಗೂ ಖ್ಯಾತ ಸಂವಿಧಾನ ತಜ್ಞ ಅನಿಲ್ ಬಿ ದಿವಾನ್ ಇಂದು ನವದೆಹಲಿಯಲ್ಲಿ ಅಸುನೀಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಕಾವೇರಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ವಿವಾದಗಳಲ್ಲಿ ದಿವಾನ್ ಕರ್ನಾಟಕ ಪರ ಸುಪ್ರೀಂ ಕೋರ್ಟಿನಲ್ಲಿ ವಕಾಲತ್ತು ವಹಿಸಿದ್ದರು. ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.[ಸರಕಾರಕ್ಕೆ 39 ಕೋಟಿ ಉಂಡೆನಾಮ ತಿಕ್ಕಿ ಸಿಕ್ಕಿಬಿದ್ದ ಸಪ್ತ ಭ್ರಷ್ಟರು]

"ಜಲ ವಿವಾದಗಳ ರಾಜ್ಯವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಅನಿಲ್ ದಿವಾನ್ ಸಾವು ದುಃಖ ತಂದಿದೆ. ರಾಜ್ಯಕ್ಕೆ ಅವರು ನೀಡಿದ ಸೇವೆ ಅವಿಸ್ಮರಣೀಯ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Sad that Shri Anil Divan our sr. counsel on water disputes passed away today. Gratefully remember the services rendered by him to the state.
— CM of Karnataka (@CMofKarnataka) March 20, 2017
1930ರ ಮೇ 15ರಂದು ಜನಿಸಿದ್ದ ಅನಿಲ್ ದಿವಾನ್ ಅವರದ್ದು ವಕೀಲ ವೃತ್ತಿಯಲ್ಲಿ ದೊಡ್ಡ ಹೆಸರು. ಬಾರ್ ಅಸೋಸಿಯೇಷನ್ ಆಫ್ ಇಂಡಿಯಾದ ಸಹ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಹಲವು ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಪರ ಸುಪ್ರೀಂ ಕೋರ್ಟಿನಲ್ಲಿ ಸಮರ್ಥವಾಗಿ ವಾದ ಮಂಡಿಸುತ್ತಿದ್ದರು. ಈ ಮೂಲಕ ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದರು.[ನಮಸ್ಕಾರ, ದಿಗ್ವಿಜಯ್ ಸಿಂಗ್ ಸರ್, ಹೋಗಿ ಬನ್ನಿ!]
ಅನಿಲ್ ದಿವಾನ್ ಪುತ್ರ ಶ್ಯಾಮ್ ದಿವಾನ್ ಸುಪ್ರೀಂ ಕೊರ್ಟ್ ವಕೀಲರಾಗಿದ್ದು ಅವರ ಸೊಸೆ ಮಾಧವಿಯೂ ನ್ಯಾಯಾಂಗ ವೃತ್ತಿಯಲ್ಲಿದ್ದಾರೆ.
(ಚಿತ್ರ ಕೃಪೆ: ಫೇಸ್ಬುಕ್, ಬ್ರಿಜೇಶ್ ಕಾಳಪ್ಪ)
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications