Senthil Balaji Arrest: ಬಿಜೆಪಿಗೆ 2024ರ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್
ಚೆನ್ನೈ, ಜೂನ್ 14: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಅಬಕಾರಿ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಧೈರ್ಯ ಹೇಳಿದರು.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಜಾರಿ ನಿರ್ದೇಶನಾಲಯದ ವಿಚಾರಣೆ ವೇಳೆ ಅಸ್ವಸ್ಥಗೊಂಡಿರುವ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಲು ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು.

ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಸೆಂಥಿಲ್ ಬಾಲಾಜಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಸೆಂಥಿಲ್ ಬಾಲಾಜಿ ತನಿಖಾ ಅಧಿಕಾರಿಗಳಿಗೆ ಸಹಕರಿಸುತ್ತಿದ್ದರು, ಆದರೂ ಎದೆನೋವು ಅನುಭವಿಸುವಷ್ಟು ಒತ್ತಡಕ್ಕೆ ಒಳಗಾಗಿದ್ದರು. ಸಿಎಂ ಸ್ಟಾಲಿನ್ 2024ರ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.
ತಮ್ಮ ಸಚಿವ ಸೆಂಥಿಲ್ ಬಾಲಾಜಿ ಅಧಿಕಾರಿಗಳಿಗೆ ಸಹಕಾರ ನೀಡುತ್ತಿರುವಾಗ ಇಷ್ಟು ಸುದೀರ್ಘ ತನಿಖೆಯ ಅಗತ್ಯ ಏನಿತ್ತು. ಇಡಿ ಅಧಿಕಾರಿಗಳ ಇಂತಹ ಅಮಾನವೀಯ ಕ್ರಮ ಸಮರ್ಥನೆಯೇ?. ಯಾವುದೇ ಪ್ರಕರಣವಿದ್ದರೂ ಸೆಂಥಿಲ್ ಬಾಲಾಜಿ ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತಾರೆ. ನಾವು ನಮ್ಮ ರಾಜಕೀಯ ನಿಲುವನ್ನು ದೃಢವಾಗಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಡಿಎಂಕೆ ಈ ಪ್ರಕರಣವನ್ನು ಸಂಕಲ್ಪದಿಂದ ಕಾನೂನಾತ್ಮಕವಾಗಿ ಎದುರಿಸಲಿದೆ. ಬಿಜೆಪಿಯ ಬೆದರಿಕೆಗೆ ಡಿಎಂಕೆ ಹೆದರುವುದಿಲ್ಲ, ಜನರು ಇಂತಹ ದಬ್ಬಾಳಿಕೆಯನ್ನು ನೋಡುತ್ತಿದ್ದಾರೆ. ಈ ನಿಟ್ಟಿನಲ್ಲಿ 2024 ರ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಸ್ಟಾಲಿನ್ ಹೇಳಿದರು.

2024ರ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಮೈತ್ರಿ ಮಾಡಿಕೊಳ್ಳುವಲ್ಲಿ ಎಂಕೆ ಸ್ಟಾಲಿನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಈಗಾಗಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿದ್ದು, ಜೂನ್ 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷದ ನಾಯಕರ ಮೆಗಾ ಸಭೆ ನಡೆಯಲಿದೆ.
ಇನ್ನು ತಮಿಳುನಾಡು ಕ್ರೀಡಾ ಸಚಿವ ಹಾಗೂ ಡಿಎಂಕೆ ಯುವ ವಿಭಾಗದ ಮುಖ್ಯಸ್ಥ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ, ಬಿಜೆಪಿಯ ಬೆದರಿಕೆಗೆ ಡಿಎಂಕೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.
விசாரணைக்கு முழு ஒத்துழைப்பு தருகிறேன் என்று சொன்ன பிறகும் அமைச்சர் செந்தில் பாலாஜிக்கு நெஞ்சு வலி ஏற்படும் வகையில் சித்ரவதை கொடுத்த அமலாக்கத்துறையின் நோக்கம் என்ன?
— M.K.Stalin (@mkstalin) June 14, 2023
வழக்கிற்குத் தேவையான சட்ட நடைமுறைகளை மீறி மனிதநேயமற்ற முறையில் அமலாக்கத்துறை அதிகாரிகள் நடந்து கொண்டிருப்பது… pic.twitter.com/D2EIs5vvWN
ತಮಿಳುನಾಡು ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ತಡರಾತ್ರಿ ಬಂಧಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಅವರ ಆರೋಗ್ಯ ಸ್ಥಿತಿಯ ಹೊರತಾಗಿಯೂ ಅವರನ್ನು ಬಂಧಿಸಿದ ರೀತಿ ಅಮಾನವೀಯವಾಗಿದೆ ಮತ್ತು ಜಾರಿ ನಿರ್ದೇಶನಾಲಯದ ಕಾರ್ಯ ವಿಧಾನಗಳ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡುತ್ತದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ಈ ಬಂಧನವು ಭಾರತದ ವಿರೋಧದ ಮೇಲಿನ ನಿರಂತರ ದಾಳಿಯ ಒಂದು ಭಾಗವಾಗಿದೆ ಮತ್ತು ಇದು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನು ಹಾಳುಮಾಡುತ್ತದೆ. ಬಿಜೆಪಿಯ ಅಪ್ರಜಾಸತ್ತಾತ್ಮಕ ಗುರಿಗೆ ಬಲಿಯಾದ ಬಾಲಾಜಿ ಮತ್ತು ಎಲ್ಲಾ ವಿರೋಧ ಪಕ್ಷದ ನಾಯಕರೊಂದಿಗೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಎಎಪಿ ಹೇಳಿದೆ.












Click it and Unblock the Notifications