Covid Wave In India: ಸರ್ಕಾರಕ್ಕೆ 20 ಮಿಲಿಯನ್ ಕೋವಿಶೀಲ್ಡ್ ಡೋಸ್ ನೀಡಿದ ಸಿರಮ್ ಇನ್ಸ್ಟಿಟ್ಯೂಟ್
ನವದೆಹಲಿ, ಡಿಸೆಂಬರ್ 30: ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಕೇಂದ್ರ ಸರ್ಕಾರಕ್ಕೆ 20 ಮಿಲಿಯನ್ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಚಿತವಾಗಿ ನೀಡಿದೆ.
ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್ ಫಾರ್ಮಾ ಕಂಪನಿ ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಮತ್ತು ಎಸ್ಐಐ ಉತ್ಪಾದನೆಗೆ ಪರವಾನಗಿ ಪಡೆದ ಲಸಿಕೆಯ ಉಚಿತ ಡೋಸ್ಗಳನ್ನು ನೀಡುವುದಾಗಿ ಕಂಪನಿಯ ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಭಾರತದಲ್ಲಿ ಕೊರೊನಾ ಓಮ್ರಿಕ್ರಾನ್ ಉಪತಳಿ ಬಿಎಫ್7 ಸೋಂಕಿನ ಭೀತಿ ಹೆಚ್ಚಾಗಿದ್ದರಿಂದ ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಬೇಡಿಕೆ ಹೆಚ್ಚಳದ ಹಿನ್ನೆಲೆಯಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಈ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಉಚಿತವಾಗಿ ನೀಡಲಾಗುತ್ತಿರುವ ಲಸಿಕೆ ಪರಿಮಾಣದ ವೆಚ್ಚ ಸುಮಾರು ರೂ.410 ಕೋಟಿ ಎಂದು ಹೇಳಲಾಗುತ್ತಿದೆ. ರಾಷ್ಟ್ರೀಯ ಕೋವಿಡ್ ನಿಯಂತ್ರಣ ಇಲ್ಲವೆ ತಡೆಯುವ ನಿಟ್ಟಿನ ಕಾರ್ಯಕ್ರಮಗಳಲ್ಲಿ ಎಸ್ಐಐ ಈವರೆಗೆ ಕನಿಷ್ಠ 1.7 ಬಿಲಿಯನ್ ಡೋಸ್ ಕೋವಿಶೀಲ್ಡ್ ಅನ್ನು ಕೇಂದ್ರಕ್ಕೆ ಒದಗಿಸಿದೆ. ಈ ಕೋವಿಶೀಲ್ಡ್ ಅನ್ನು ದೇಶದಲ್ಲಿ ಹೆಚ್ಚು ಬಳಕೆ ಆಗಿದೆ.
ಈಗಾಗಲೇ ಕೆಲವು ರಾಜ್ಯಗಳು ಕೋವಿಡ್ ಲಸಿಕೆಗಳ ಅಗತ್ಯ ದಾಸ್ತಾನು ಇಲ್ಲ ಎನ್ನಲಾಗಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಬುಧವಾರ ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೋಸ್ಗಳಿಗೆ ಲಭ್ಯತೆ ಇರಲಿಲ್ಲ ಎಂದು ತಿಳಿದು ಬಂದಿದೆ.
ಫಾರ್ಮಾ ಕಂಪನಿ ಮುಖ್ಯಸ್ಥರ ಭೇಟಿ, ಔಷಧ ಪರಿಶೀಲನೆ
ಕೊರೊನಾ ಲಸಿಕೆ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಪ್ರತ್ಯೇಕವಾಗಿ ಫಾರ್ಮಾ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿದ್ದಾರೆ. ಚೀನಾದಲ್ಲಿ ಪ್ರಕರಣಗಳ ಹೆಚ್ಚಳದಿಂದ ಉಂಟಾಗುವ ಕಳವಳಗಳ ನಡುವೆ ದೇಶದಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಅವರು ಖುದ್ದು ಪರಿಶೀಲಿಸಿದ್ದಾರೆ.

ಫಾರ್ಮಾ ಕಂಪನಿಗಳ ಪ್ರತಿನಿಧಿಗಳೊಂದಿಗೆ ಕೋವಿಡ್ ನಿರ್ವಹಣಾ ಔಷಧಿಗಳ ಸ್ಥಿತಿ, ಸಮರ್ಪಕತೆ ಮತ್ತು ಉತ್ಪಾದನಾ ಸಾಮರ್ಥ್ಯ ಹಾಗೂ ಪೂರೈಕೆ ಬಗ್ಗೆ ಮಾಹಿತಿ ಪಡೆದರು. ಇದರಿಂದಾಗಿ ಭಾರತವು ಯಾವುದೇ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಜ್ಜಾಗಿದೆ ಎಂಬುದನ್ನು ಖಾತರಿಪಡಿಸಿಕೊಂಡರು. ವಿಶ್ವಾದ್ಯಂತ ಕೆಲವು ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚುತ್ತಲೇ ಇದ್ದು, ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಭಾರತದಲ್ಲಿ ಔಷಧೀಯ ಉದ್ಯಮವು ದೃಢವಾದ, ಚೇತರಿಸಿಕೊಂಡಿದೆ. ಆದರೆ ಸಾಂಕ್ರಾಮಿಕ ಸಮಯದಲ್ಲಿ ಬೇಡಿಕೆಯಷ್ಟು ಲಸಿಕೆ ಪೂರೈಸಲು ಆಗಿರಲಿಲ್ಲ. ಆದರೆ ಈಗ 150 ದೇಶಗಳಿಗೆ ಔಷಧಿ ಪೂರೈಸುವ ಸ್ಥಿತಿಯಲ್ಲಿ ಭಾರತವಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications