Bengaluru Highway: ಪುಣೆ-ಬೆಂಗಳೂರು ಹೈವೇ ಉದ್ದಕ್ಕೂ ಹೊಸ ಯೋಜನೆ
ಪುಣೆ, ಫೆಬ್ರವರಿ 11: ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂದಲ್ಲಾ ಒಂದು ರಸ್ತೆ ಯೋಜನೆಗಳು ಜಾರಿಯಾಗುತ್ತಲೇ ಇವೆ. ಇದೀಗ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ (NH-04) ಹೊಸ ಯೋಜನೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದೆ. ಇದರಿಂದ ಸವಾರರಿಗೆ, ನಿವಾಸಿಗಳಿಗೆ ದಟ್ಟಣೆ ಕಿರಿ ಕಿರಿ ತಪ್ಪುತ್ತದೆ. ಈ ಯೋಜನೆಗಾಗಿ 604 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ.
ಹೌದು, ಮುಂಬೈ-ಬೆಂಗಳೂರು ಹೆದ್ದಾರಿಯ 32.4 ಕಿಲೋಮೀಟರ್ ಉದ್ದಕ್ಕೂ ಸೇವಾ ರಸ್ತೆ (Service Road-NH 4) ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಪುಣೆ ತನ್ನ ಸಂಚಾರ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ತರುವ ನಿಟ್ಟಿನಲ್ಲಿ ಈ ಯೋಜನೆಗೆ ಕೈ ಹಾಕಿದೆ. ಈ ಮೂಲಕ ಪುಣೆ ನಿವಾಸಿಗಳಿಗೆ ಒಳ್ಳೆಯ ಸುದ್ದಿ ನೀಡಿದೆ. ನಗರದ ದಟ್ಟಣೆ ನಿಯಂತ್ರಿಸುವ ಜೊತೆಗೆ ರಸ್ತೆ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ. ಈ ಯೋಜನೆಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ.

ಎಲ್ಲಿಂದ ಎಲ್ಲಿಯವರೆಗೆ ನಿರ್ಮಾಣ
ಈ ಸರ್ವೀಸ್ ರಸ್ತೆಯು ಖೇಡ್-ಶಿವಪುರದಿಂದ ರಾವೆಟ್ವರೆಗೆ ವಿಸ್ತರಣೆ ಆಗಲಿದೆ ಎಂದು ಮೂಲಗಳು ತಿಳಿಸಿದವೆ. ಸುಮಾರು ₹604 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಎರಡು ಪಥದ ಹೆದ್ದಾರಿ ರಸ್ತೆಯ ಎರಡೂ ಕಡೆಗಳಲ್ಲೂ ಒಟ್ಟು 3.5 ಮೀಟರ್ ಅಗಲದಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸುವ ಯೋಜನೆ ಇದಾಗಿದೆ. ಮುಂದಿನ ತಿಂಗಳು ಮಾರ್ಚ್ 2025 ನಲ್ಲಿ ಕಾಮಗಾರಿ ಆರಂಭವಾಗಿ ಎರಡು ವರ್ಷಗಳಲ್ಲಿ ಮುಗಿಸಲು ಗಡುವ ನೀಡಲಾಗಿದೆ.
ಸರ್ವೀಸ್ ರಸ್ತೆಯ ಪ್ರಯೋಜನ
ಪುಣೆಯಿಂದ ಬೆಂಗಳೂರಿನ ಕಡೆಗೆ ಬರುವ ಮಂಬೈ-ಬೆಂಗಳೂರು ಮಾರ್ಗ ಮಧ್ಯ ಇರುವ ನರಹೆ, ನವಲೆ ಸೇತುವೆ, ವಾರ್ಜೆ, ಚಂದಾನಿ ಚೌಕ್ ಮತ್ತು ರಾವೆಟ್ನಂತಹ ಪ್ರಮುಖ ಪ್ರದೇಶಗಳಲ್ಲಿ ದಟ್ಟಣೆ ಇಳಿಕೆ ಆಗುತ್ತದೆ. ಸವಾರರಿಗೆ, ಪ್ರಯಾಣಿಕರಿಗೆ ಸಂಚಾರ ಸುರಕ್ಷತೆ ದೊರೆಯಲಿದೆ. ಅದೇ ನಿಟ್ಟಿನಲ್ಲಿ ವಿನ್ಯಾಸಗೊಳಿಸಾಗಿದೆ.
ಈ ಸರ್ವೀಸ್ ರಸ್ತೆಯಿಂದ ರಸ್ತೆ ಪ್ರಯಾಣದ ಸಮಯ ಸುಮಾರು 20 ನಿಮಿಷಕ್ಕೆ ಕಡಿತಗೊಳ್ಳಲಿದೆ. ನಿತ್ಯ ಸುಮಾರು ಒಂದು ಲಕ್ಷ ವಾಹನ ಸವಾರರು ಇದರ ಪ್ರಯೋಜನ ಪಡೆಯಲಿದ್ದಾರೆ. ಅದಷ್ಟೇ ಅಲ್ಲದೇ ಯೋಜನೆಯಿಂದ ರಸ್ತೆ ಅಪಘಾತಗಳು ನಿಯಂತ್ರಣಕ್ಕೆ ಬರಲಿವೆ. ಸುಗಮ ಸಂಚಾರ ಸಾಧ್ಯವಾಗುತ್ತದೆ ಎಂದು ಅಲ್ಲಿನ ಸರ್ಕಾರ, ಅಧಿಕಾರಿಗಳು ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಭೂಸ್ವಾಧೀನ ಬಹುತೇಕ ಪೂರ್ಣ
ಈ ಸರ್ವೀಸ್ ರಸ್ತೆ ಯೋಜನೆಗೆ ಪಿಂಪ್ರಿ-ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಷನ್ (PCMC) ಶೇಕಡಾ 90ರಷ್ಟು ಭೂಮಿ ಸ್ವಾಧೀನ ಪಡಿಸಿಕೊಂಡಿದೆ. ಆದರೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ (PMC) ಉಳಿದ ಶೇಕಡಾ 10ರಷ್ಟು ಭೂಮಿ ಪಡೆಯಲಿದೆ. ಇವೆರು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಯೋಜನೆಗೆ ಅಸ್ತಿತ್ವಕ್ಕೆ ಬರಲಿದೆ. ರಸ್ತೆ ಮೂಲಸೌಕರ್ಯ ಸುಧಾರಣೆ ಆಗಲಿದ್ದು, ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ.
ದೇಶದ ಪ್ರಮುಖ ವಾಣಿಜ್ಯ ನಗರಿ ಮುಂಬೈಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ. ಪುಣೆ ಬೆಳ್ಳೆಯುತ್ತಿರುವ ಪ್ರಮುಖ ನಗರವಾಗಿದೆ. ಹೀಗಾಗಿ ಹೊಸ ವಾಹನಗಳು ನಿತ್ಯ ರಸ್ತೆಗೆ ಇಳಿಯುತ್ತಿವೆ. ದಿನೇ ದಿನೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ. ಇದರಿಂದ ಸಮಯ ಹಾಳಾಗುವ ಜೊತೆಗೆ ಅಪಘಾತಗಳು ಹೆಚ್ಚಾಗುತ್ತಿದ್ದವು. ಸ್ಥಳೀಯ ಸಂಚಾರವು ದುಸ್ತರವಾಗಿತ್ತು. ಈ ಕಾರಣದಿಂದಲೇ ಹೆದ್ದಾರಿ ಪಕ್ಕದಲ್ಲಿ ಹತ್ತಾರು ಕಿಲೋ ಮೀಟರ್ ಸರ್ವೀಸ್ ರಸ್ತೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಇದರ ಅನುಕೂಲತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಪುಣಾ-ಬೆಂಗಳೂರು ಉದ್ದಕ್ಕೂ ಎಲ್ಲೆಲ್ಲಿ ಅಗತ್ಯತೆ ಇದೆಯೋ ಅಲ್ಲಿಯವರೆಗೆ ಹೆದ್ದಾರಿ ಪಕ್ಕ ಎರಡು ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವ ಚಿಂತನೆಯೂ ಇದೆ ಎನ್ನಲಾಗುತ್ತಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications