ತೆಲಂಗಾಣ ಶಾಸಕರ ಖರೀದಿ ಪ್ರಕರಣ: ಸಿಬಿಐಗೆ ವರ್ಗಾಯಿಸಿದ ಹೈಕೋರ್ಟ್
ಹೈದರಾಬಾದ್, ಡಿಸೆಂಬರ್ 26: ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ತೆಲಂಗಾಣ ಶಾಸಕರ ಖರೀದಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಹೈಕೋರ್ಟ್ ಆದೇಶಿಸಿದೆ.
ಭಾರತೀಯ ಜನತಾ ಪಕ್ಷದ(BJP) ತೆಲಂಗಾಣ ರಾಜ್ಯ ಘಟಕದ ಮನವಿಯ ನಂತರ ಈ ಆದೇಶ ಬಂದಿದೆ.
ಇದುವರೆಗಿನ ತನಿಖೆಯನ್ನು ರಾಜ್ಯದ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಿದ್ದು, ಬಿಜೆಪಿಯು ಬಿಆರ್ಎಸ್ (ಹಿಂದಿನ ಟಿಆರ್ಎಸ್) ಶಾಸಕರನ್ನು ಖರೀದಿ ಮಾಡಲು ಪ್ರಯತ್ನಿಸಿದೆ ಎಂದು ಹೇಳಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡವನ್ನೂ ಹೈಕೋರ್ಟ್ ರದ್ದುಗೊಳಿಸಿದೆ.
ಈ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ರಾಮ್ ಚಂದರ್ ರಾವ್ ಹೇಳಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ನಾಲ್ವರು ಶಾಸಕರಿಗೆ ಪಕ್ಷ ಬದಲಿಸಲು ಹಣದ ಆಮಿಷವನ್ನು ಬಿಜೆಪಿ ಒಡ್ಡಿದೆ ಎಂದು ಆರೋಪಿಸಲಾಗಿತ್ತು. ಇದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದರು.
ತೆಲಂಗಾಣದಲ್ಲಿ ಆಪರೇಷನ್ ಕಮಲದ ಭಾಗವಾಗಿ ಫಾರ್ಮ್ಹೌಸ್ ಒಂದರಲ್ಲಿ ರಹಸ್ಯ ಮಾತುಕತೆ ನಡೆಸಲಾಗಿದೆ. ಈ ವೇಳೆ, ಟಿಆರ್ಎಸ್ನ ಪ್ರಮುಖ ನಾಯಕರೊಬ್ಬರಿಗೆ ₹ 100 ಕೋಟಿ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಶಾಸಕರಲ್ಲಿ ಒಬ್ಬರಾದ ಪೈಲಟ್ ರೋಹಿತ್ ರೆಡ್ಡಿ ಅವರು ಫಾರ್ಮ್ ಹೌಸ್ನ ಮಾಲೀಕರಾಗಿದ್ದಾರೆ. ಇಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.
ಪೋಲಿಸರು ಹಾಕಿರುವ ಎಫ್ಐಆರ್ನಲ್ಲಿ ಪೈಲಟ್ ರೋಹಿತ್ ರೆಡ್ಡಿ ದೂರುದಾರರಾಗಿದ್ದರು. ನಾಲ್ವರು ಶಾಸಕರ ಆಪರೇಷನ್ ಕಮಲ ನಡೆಸಲು ₹ 250 ಕೋಟಿ ಮೇಜಿನ ಮೇಲಿತ್ತು ಎಂದು ರೆಡ್ಡಿ ಆರೋಪಿಸಿದ್ದರು.

ಬೇಡಿಕೆಗೆ ಒಪ್ಪದೇ ಹೋದಲ್ಲಿ, ತಮ್ಮ ಮೇಲೆ ತನಿಖೆ ನಡೆಸುವುದಾಗಿ ಬಿಜೆಪಿ ಬೆದರಿಗೆ ಹಾಕಿದೆ ಎಂದೂ ರೆಡ್ಡಿ ಆರೋಪಿಸಿದ್ದರು.
ಈ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿತ್ತು. ಹರಿಯಾಣದ ಫರಿದಾಬಾದ್ನ ಅರ್ಚಕ ಸತೀಶ್ ಶರ್ಮಾ, ಅಲಿಯಾಸ್ ರಾಮ್ ಚಂದ್ರ ಭಾರತಿ, ತಿರುಪತಿಯ ಧರ್ಮದರ್ಶಿ ಡಿ. ಸಿಂಹಯಾಜಿ ಮತ್ತು ಹೈದರಾಬಾದ್ ಮೂಲದ ಉದ್ಯಮಿ ನಂದಕುಮಾರ್ ಬಂಧಿತರು. ಅವರಿಗೆ ಬಿಜೆಪಿ ಜೊತೆ ನಂಟು ಇದೆ ಎಂದು ಪೊಲೀಸರು ಹೇಳಿದ್ದರು.
ಇದೇ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಅವರಿಗೂ ತೆಲಂಗಾಣ ಎಸ್ಐಟಿ ನೋಟಿಸ್ ನೀಡಿತ್ತು. ತೆಲಂಗಾಣ ಸರ್ಕಾರದ 'ಆಪರೇಶನ್ ಕಮಲ' ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications