ಅದೆಷ್ಟು ಮುಖಭಂಗ ಪಾಕ್ ಅನುಭವಿಸುತ್ತೋ, ವಿಶ್ವಸಂಸ್ಥೆಯಲ್ಲಿ ಮತ್ತೊಂದು
ನವದೆಹಲಿ, ಆ 23: ಭಾರತವನ್ನು ಕೆಣಕಲು ಹೋಗಿ, ಒಂದರ ಮೇಲೊಂದು ಅವಮಾನವನ್ನು ಎದುರಿಸುತ್ತಿರುವ ಪಾಕಿಸ್ತಾನಕ್ಕೆ, ವಿಶ್ವಸಂಸ್ಥೆಯಲ್ಲಿ ಮತ್ತೊಂದು ಹಿನ್ನಡೆಯಾಗಿದೆ.
ಭಾರತೀಯ ಮಿಲಿಟರಿ ಪಡೆಗಳನ್ನು ಹುರಿದುಂಬಿಸುವ ಟ್ವೀಟ್ ಗಾಗಿ ಪಾಕಿಸ್ತಾನದಿಂದ, ತೀವ್ರ ಟೀಕೆಗೆ ಗುರಿಯಾಗಿರುವ, ಯುನಿಸೆಫ್ ಸೌಹಾರ್ದಯುತ ರಾಯಭಾರಿ ಪ್ರಿಯಾಂಕಾ ಚೋಪ್ರಾ, "ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮಾತನಾಡುವ ಹಕ್ಕನ್ನು ಹೊಂದಿದ್ದಾರೆ" ಎಂದು ಯುನಿಸೆಫ್ ಅಧಿಕಾರಿಗಳು ಹೇಳಿದ್ದಾರೆ.
Recommended Video
"ಯುನಿಸೆಫ್ ರಾಯಭಾರಿಗಳು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮಾತನಾಡ ಬೇಕಾದರೆ, ಅವರು, ಮಾತನಾಡುವ ಹಕ್ಕನ್ನು ಹೊಂದಿರುತ್ತಾರೆ"ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದರು.

"ರಾಯಭಾರಿಗಳು ವೈಯಕ್ತಿಕ ದೃಷ್ಟಿಕೋನದಿಂದ ಮಾತನಾಡಿದಾಗ ಅದು ಯುನಿಸೆಫ್ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ" ಎಂದು ಯುನಿಸೆಫ್ ಅಧಿಕಾರಿಗಳು ಹೇಳುವ ಮೂಲಕ, ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.
"ನಾನು ದೇಶಪ್ರೇಮಿ" ಎಂದು ಪ್ರಿಯಾಂಕಾ ಚೋಪ್ರಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನಿ ಮಹಿಳೆಗೆ ನೀಡಿದ ಉತ್ತರಕ್ಕೆ ಪ್ರತಿಯಾಗಿ, ಅವರನ್ನು ಯುನಿಸೆಫ್ ರಾಯಭಾರಿ ಸ್ಥಾನದಿಂದ ಕೆಳಗಿಳಿಸುವಂತೆ ಪಾಕಿಸ್ತಾನ, ವಿಶ್ವಸಂಸ್ಥೆಗೆ ಪತ್ರ ಬರೆದಿತ್ತು.
ಯುನಿಸೆಫ್ ನ (United Nations International Children's Emergency Fund) ಗುಡ್ ವಿಲ್ ರಾಯಭಾರಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರನ್ನು ಆ ಸ್ಥಾನದಿಂದ ಕಿತ್ತುಹಾಕಬೇಕೆಂದು ಪಾಕಿಸ್ತಾನದ ನಟಿ ಅರ್ಮೀನಾ ಖಾನ್ ಮತ್ತು ಆಕೆಯ ಪ್ರಿಯಕರ ಫೆಸಾಲ್ ಖಾನ್ ಯುನಿಸೆಫ್ ಗೆ ಪತ್ರ ಬರೆದಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications