ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮ ಜನ್ಮಭೂಮಿ ವಿವಾದ, ಕೋರ್ಟ್ ಹೊರಗೆ ಬಗೆಹರಿಸಿಕೊಳ್ಳಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿದ್ದು, ಕೋರ್ಟ್ ಹೊರಗಡೆ ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಚಿಸಿದೆ.

By Mahesh
|
Google Oneindia Kannada News

ನವದೆಹಲಿ, ಮಾರ್ಚ್ 21: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರದಂದು ಮಹತ್ವದ ತೀರ್ಪು ನೀಡಿದ್ದು, ಕೋರ್ಟ್ ಹೊರಗಡೆ ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಚಿಸಿದೆ. ರಾಮಜನ್ಮಭೂಮಿ ವಿವಾದದ ವಿಚಾರಣೆಯನ್ನು ಮುಂದೂಡಲಾಗಿದೆ.[ಮುಸ್ಲಿಮರಿಗೆ ಸ್ವಾಮಿ ನೀಡಿದ ಸಂಡೇ ಪ್ಯಾಕೇಜ್: 'ಲಾರ್ಡ್ ಕೃಷ್ಣ']

ಇದು ಸೂಕ್ಷ್ಮ ವಿಚಾರ, ಎರಡು ಕಡೆ ಅರ್ಜಿದಾರರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು ಎಂದು ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಅಭಿಪ್ರಾಯಪಟ್ಟಿದ್ದಾರೆ.ಮುಂದಿನ ವಿಚಾರಣೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ.[ಅಯೋಧ್ಯಾ ದೇಗುಲಕ್ಕಾಗಿ ಸುಪ್ರೀಂಗೆ ಮೊರೆ ಹೊಕ್ಕ 'ಸ್ವಾಮಿ']

Settle Ram temple matter through negotiations: SC

ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು, ಈ ಬಗ್ಗೆ ಪ್ರತಿಕ್ರಿಯಿಸಿ ಹಲವಾರು ಬಾರಿ ಮಾತುಕತೆ ನಡೆಸಲಾಯಿತು. ಆದರೆ, ಮಾತುಕತೆ ವಿಫಲವಾಗಿದೆ. ಮಾತುಕತೆ ನಡೆಸಲು ಮಧ್ಯಸ್ಥಿಕೆ ವಹಿಸಿಕೊಳ್ಳುವವರು ಬೇಕಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿರುವುದನ್ನು ಸ್ವಾಮಿ ಸ್ವಾಗತಿಸಿದ್ದಾರೆ.

English summary
The Supreme Court on Tuesday observed that fresh attempts for an out of court settlement of the Ram Janm Bhoomi issue should be made. The SC said that both parties part of the dispute must make fresh attempts for a negotiated settlement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X