ಮಣಿಪುರ: ಉಗ್ರರ ದಾಳಿಯಲ್ಲಿ ಐವರು ಯೋಧರು ಸೇರಿ ಏಳು ಜನರ ಸಾವು
ಮಣಿಪುರ, ನವೆಂಬರ್ 13: ಉಗ್ರರು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು, ಅಸ್ಸಾಂ 46 ರೈಫಲ್ನ ಕಮಾಂಡಿಂಗ್ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ.
ಮಣಿಪುರದ ಸಿಂಘಾತ್ನಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಯೋಧರನ್ನೆಲ್ಲ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಮಣಿಪುರ ಮೂಲದ ಬಂಡುಕೋರರ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದ್ದಾಗಿ ಮಾಹಿತಿ ಸಿಕ್ಕಿದೆ. ಹುತಾತ್ಮರಾದ ಕಮಾಂಡಿಂಗ್ ಆಫೀಸರ್ನ್ನು ಕರ್ನಲ್ ವಿಪ್ಲವ್ ತ್ರಿಪಾಠಿ ಎಂದು ಗುರುತಿಸಲಾಗಿದೆ. ಇವರು ಮಯನ್ಮಾರ್ ಗಡಿಯಲ್ಲಿ ಇದ್ದರು, ದಾಳಿ ನಡೆಯುವ ಸಂದರ್ಭದಲ್ಲಿ ಅಲ್ಲಿಂದ ತಮ್ಮ ಕುಟುಂಬದೊಂದಿಗೆ ಹಿಂತಿರುಗುತ್ತಿದ್ದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಉಗ್ರರ ಈ ಹೇಡಿತನದ ದಾಳಿ ನಿಜಕ್ಕೂ ನೋವು ತಂದಿದೆ ಮತ್ತು ಖಂಡನೀಯವಾಗಿದೆ. ಐವರು ವೀರ ಯೋಧರನ್ನು ಈ ದೇಶ ಇಂದು ಕಳೆದುಕೊಂಡಿದೆ. ಅದರಲ್ಲೂ ಕಮಾಂಡಿಂಗ್ ಅಧಿಕಾರಿಯ ಕುಟುಂಬವನ್ನು ಟಾರ್ಗೆಟ್ ಮಾಡಿದ್ದು ನಿಜಕ್ಕೂ ದುರಂತ. ಈ ಸಾವಿಗೆ ನ್ಯಾಯ ಒದಗಿಸದೆ ಸುಮ್ಮನಾಗುವುದಿಲ್ಲ ಎಂದಿದ್ದಾರೆ.
ಮಣಿಪುರ ಮುಖ್ಯಮಂತ್ರಿ ಖಂಡನೆ
ಈ ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ. ಸಿಸಿಪುರ ಎಂಬಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ವಿಪ್ಲವ್ ತ್ರಿಪಾಠಿ ಮತ್ತವರ ಕುಟುಂಬವೂ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದಾರೆ.

ಉಗ್ರರನ್ನು ಸೆರೆ ಹಿಡಿಯಲು ರಾಜ್ಯದ ಭದ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ ಆಗುತ್ತದೆ ಎಂದು ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications