ಮಾವೋವಾದಿ ಜತೆ ನಂಟು ಶಂಕೆ, ಹಲವು ವಿಚಾರವಾದಿಗಳ ಬಂಧನ, ಆಕ್ರೋಶ
ನವದೆಹಲಿ, ಆಗಸ್ಟ್ 28: ನಿಷೇಧಿತ ಮಾವೋವಾದಿಗಳ ನಂಟು ಶಂಕೆ ಮತ್ತು ಮೋದಿ ಹತ್ಯೆ ಯತ್ನ ಶಂಕೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಇಂದು ಹಲವು ವಿಚಾರವಾದಿಗಳನ್ನು ಬಂಧಿಸಲಾಗಿದೆ. ಬಂಧನದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ವಿಶೇಷ ಪೊಲೀಸರು ಬಂಧಿಸಿದ್ದಾರೆ.

ವಿಚಾರವಾದಿಗಳ ಬಂಧನಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅರುಂಧತಿ ರಾಯ್, ರಾಮಚಂದ್ರ ಗುಹಾ, ವಕೀಲ ಪ್ರಶಾಂತ್ ಭೂಷಣ್ ಸೇರಿದಂತೆ ಹಲವು ಚಿಂತಕರು ಈ ಬಂಧನವನ್ನು ಖಂಡಿಸಿದ್ದಾರೆ.

ಅಘೋಷಿತ ತುರ್ತು ಪರಿಸ್ಥಿತಿ ಇದೆ
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಲವು ವಿಚಾರವಾದಿಗಳು, ಲೇಖಕರು, ವಿಚಾರವಾದಿಗಳು ಈ ಘಟನೆಯನ್ನು ಟೀಕಿಸಿದ್ದಾರೆ.

ಅರುಂದತಿ ರಾಯ್ ಆಕ್ರೋಶ
'ಗಲಭೆಕೋರರು, ಕೊಲೆಗಾರರೇ ಸ್ವತಂತ್ರ್ಯವಾಗಿ ಓಡಾಡಿಕೊಂಡಿರುವಾಗ ವಕೀಲರು, ಲೇಖಕರು, ದಲಿತ ಹೋರಾಟಗಾರರನ್ನು ಬಂಧಿಸುತ್ತಿರುವುದು ನಗೆಪಾಟಲಿನ ಸಂಗತಿ, ಬಂಧನ ಸಂವಿಧಾನದ ಉಲ್ಲಂಘನೆ' ಎಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂದತಿ ರಾಯ್ ಟೀಕಿಸಿದ್ದಾರೆ.

ರಾಮಚಂದ್ರ ಗುಹಾ ಟೀಕೆ
ಇದು ಅತ್ಯಂತ ಆಘಾತಕಾರಿ, ಸ್ವತಂತ್ರ್ಯ ದನಿಗಳ ಮೇಲಾಗುತ್ತಿರುವ ಕಿರುಕುಳ, ಈ ದೌರ್ಜನ್ಯವನ್ನು ತಡೆಯಲು ಸುಪ್ರೀಂಕೋರ್ಟ್ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ರಾಮಚಂದ್ರ ಗುಹಾ ಹೇಳಿದ್ದಾರೆ.

ಜೆಎನ್ಯು ವಿದ್ಯಾರ್ಥಿಗಳ ಟೀಕೆ
2019ರ ಚುನಾವಣೆ ಸಮೀಪದಲ್ಲಿರುವಾಗ ವಿರೋಧಿಗಳನ್ನು ಕಟ್ಟಿಹಾಕುವ ತಂತ್ರ ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಉಮರ್ ಖಾಲಿದ್ ಟ್ವೀಟ್ ಮಾಡಿದ್ದಾರೆ. ಜೆಎನ್ಯು ಮಹಿಳಾ ಸಂಘದ ಮಾಜಿ ಅಧ್ಯಕ್ಷೆ ಶೀಲಾ ರಶೀದ್ದ ಟ್ವೀಟ್ ಮಾಡಿ 'ವ್ಯವಸ್ಥೆಯನ್ನು ಪ್ರಶ್ನಿಸುವವರ ಬಾಯಿ ಮುಚ್ಚಿಸುವ ಪ್ರಯತ್ನ ಈ ದಾಳಿ' ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಘೋಷಣೆಯೇ ಇದು
ಯಾರು ಸರ್ಕಾರವನ್ನು ಪ್ರಶ್ನಿಸುತ್ತಾರೆಯೋ ಅವರ ಮೇಲೆ ದಾಳಿಗಳಾಗುತ್ತಿವೆ. ಇದು ತುರ್ತು ಪರಿಸ್ಥಿತಿಯ ಸ್ಪಷ್ಟ ಘೋಷಣೆ. ಫ್ಯಾಸಿಸ್ಟ್ ಶಕ್ತಿಯ ಕೋರೆಹಲ್ಲುಗಳು ಈಗ ಹೊರಚಾಚಿಕೊಂಡಿವೆ ಎಂದು ಅವರು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications