ಮಾವೋವಾದಿ ಜತೆ ನಂಟು ಶಂಕೆ, ಹಲವು ವಿಚಾರವಾದಿಗಳ ಬಂಧನ, ಆಕ್ರೋಶ
ನವದೆಹಲಿ, ಆಗಸ್ಟ್ 28: ನಿಷೇಧಿತ ಮಾವೋವಾದಿಗಳ ನಂಟು ಶಂಕೆ ಮತ್ತು ಮೋದಿ ಹತ್ಯೆ ಯತ್ನ ಶಂಕೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಇಂದು ಹಲವು ವಿಚಾರವಾದಿಗಳನ್ನು ಬಂಧಿಸಲಾಗಿದೆ. ಬಂಧನದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ವಿಶೇಷ ಪೊಲೀಸರು ಬಂಧಿಸಿದ್ದಾರೆ.

ವಿಚಾರವಾದಿಗಳ ಬಂಧನಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅರುಂಧತಿ ರಾಯ್, ರಾಮಚಂದ್ರ ಗುಹಾ, ವಕೀಲ ಪ್ರಶಾಂತ್ ಭೂಷಣ್ ಸೇರಿದಂತೆ ಹಲವು ಚಿಂತಕರು ಈ ಬಂಧನವನ್ನು ಖಂಡಿಸಿದ್ದಾರೆ.

ಅಘೋಷಿತ ತುರ್ತು ಪರಿಸ್ಥಿತಿ ಇದೆ
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಲವು ವಿಚಾರವಾದಿಗಳು, ಲೇಖಕರು, ವಿಚಾರವಾದಿಗಳು ಈ ಘಟನೆಯನ್ನು ಟೀಕಿಸಿದ್ದಾರೆ.

ಅರುಂದತಿ ರಾಯ್ ಆಕ್ರೋಶ
'ಗಲಭೆಕೋರರು, ಕೊಲೆಗಾರರೇ ಸ್ವತಂತ್ರ್ಯವಾಗಿ ಓಡಾಡಿಕೊಂಡಿರುವಾಗ ವಕೀಲರು, ಲೇಖಕರು, ದಲಿತ ಹೋರಾಟಗಾರರನ್ನು ಬಂಧಿಸುತ್ತಿರುವುದು ನಗೆಪಾಟಲಿನ ಸಂಗತಿ, ಬಂಧನ ಸಂವಿಧಾನದ ಉಲ್ಲಂಘನೆ' ಎಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಅರುಂದತಿ ರಾಯ್ ಟೀಕಿಸಿದ್ದಾರೆ.

ರಾಮಚಂದ್ರ ಗುಹಾ ಟೀಕೆ
ಇದು ಅತ್ಯಂತ ಆಘಾತಕಾರಿ, ಸ್ವತಂತ್ರ್ಯ ದನಿಗಳ ಮೇಲಾಗುತ್ತಿರುವ ಕಿರುಕುಳ, ಈ ದೌರ್ಜನ್ಯವನ್ನು ತಡೆಯಲು ಸುಪ್ರೀಂಕೋರ್ಟ್ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ರಾಮಚಂದ್ರ ಗುಹಾ ಹೇಳಿದ್ದಾರೆ.

ಜೆಎನ್ಯು ವಿದ್ಯಾರ್ಥಿಗಳ ಟೀಕೆ
2019ರ ಚುನಾವಣೆ ಸಮೀಪದಲ್ಲಿರುವಾಗ ವಿರೋಧಿಗಳನ್ನು ಕಟ್ಟಿಹಾಕುವ ತಂತ್ರ ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಉಮರ್ ಖಾಲಿದ್ ಟ್ವೀಟ್ ಮಾಡಿದ್ದಾರೆ. ಜೆಎನ್ಯು ಮಹಿಳಾ ಸಂಘದ ಮಾಜಿ ಅಧ್ಯಕ್ಷೆ ಶೀಲಾ ರಶೀದ್ದ ಟ್ವೀಟ್ ಮಾಡಿ 'ವ್ಯವಸ್ಥೆಯನ್ನು ಪ್ರಶ್ನಿಸುವವರ ಬಾಯಿ ಮುಚ್ಚಿಸುವ ಪ್ರಯತ್ನ ಈ ದಾಳಿ' ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಘೋಷಣೆಯೇ ಇದು
ಯಾರು ಸರ್ಕಾರವನ್ನು ಪ್ರಶ್ನಿಸುತ್ತಾರೆಯೋ ಅವರ ಮೇಲೆ ದಾಳಿಗಳಾಗುತ್ತಿವೆ. ಇದು ತುರ್ತು ಪರಿಸ್ಥಿತಿಯ ಸ್ಪಷ್ಟ ಘೋಷಣೆ. ಫ್ಯಾಸಿಸ್ಟ್ ಶಕ್ತಿಯ ಕೋರೆಹಲ್ಲುಗಳು ಈಗ ಹೊರಚಾಚಿಕೊಂಡಿವೆ ಎಂದು ಅವರು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications