ಈ ಬಾರಿ ನೆತ್ತಿ ಸುಡಲು ಕಾದಿದೆ ರಣಬಿಸಿಲು, ತಪ್ಪಿಸಿಕೊಳ್ಳಲು ಆಗೋದೇ ಇಲ್ಲ...
ಈಗಾಗಲೇ ದೇಶದಲ್ಲಿ ಬಿಸಿಲ ಧಗೆ ಆರಂಭವಾಗಿದೆ. ಬೇಸಿಗೆ ಆರಂಭದಲ್ಲೇ ಬಿಸಿ ಗಾಳಿಗೆ ಜನರು ತತ್ತರಿಸುತ್ತಿದ್ದಾರೆ. ಈ ನಡುವೆ ಅಧ್ಯಯನವೊಂದು, ಭಾರತ ಒಳಗೊಂಡಂತೆ ದಕ್ಷಿಣ ಏಷ್ಯಾ ದೇಶಗಳಲ್ಲಿ ಬಿಸಿಲು ಮೂರು ಪಟ್ಟು ಹೆಚ್ಚಾಗುವುದೆಂದು ಹೇಳಿದೆ. ಈ ಬಾರಿ ರಣಬಿಸಿಲು ಉಂಟಾಗಲಿದ್ದು, ಜನರನ್ನು ಹೈರಾಣುಗೊಳಿಸಲಿದೆ. ಜಾಗತಿಕ ತಾಪಮಾನ 1.5 ಡಿಗ್ರಿ ಸೆಲ್ಸಿಯಸ್ ಇದ್ದು, ಭಾರೀ ಬಿಸಿಲು ನೆತ್ತಿ ಸುಡಲಿದೆ ಎಂದು ತಿಳಿಸಿದೆ.
ಅಮೆರಿಕದ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಜ್ಞಾನಿಗಳು ಈ ಅಧ್ಯಯನ ನಡೆಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಪ್ರದೇಶಗಳಲ್ಲಿ ವಿಪರೀತ ಶಾಖ ಉಂಟಾಗಲಿದೆ. ಪ್ರಮುಖ ನಗರಗಳಾದ ಕೋಲ್ಕತ್ತಾ, ಮುಂಬೈ ಹಾಗೂ ಹೈದರಾಬಾದ್ಗಳಲ್ಲಿ ಸೆಖೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ. ಮುಂದೆ ಓದಿ...

ಮುಂದಿನ ದಿನಗಳು ಕಠಿಣವಾಗಿರಲಿವೆ
ಜಿಯೋಫಿಸಿಕಲ್ ರಿಸರ್ಚ್ ಲೆಟರ್ಸ್ ನಿಯತಕಾಲಿಕೆಯಲ್ಲಿನ ಈ ಸಂಶೋಧನೆಯಲ್ಲಿ, ಈಚಿನ ವರ್ಷಗಳಿಗೆ ಹೋಲಿಸಿದರೆ, ತಾಪಮಾನ ಮೂರು ಪಟ್ಟು ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಏಷ್ಯಾ ದೇಶಗಳಲ್ಲಿ ಮುಂದಿನ ದಿನಗಳು ಕಠಿಣವಾಗಿರಲಿವೆ. ಆದರೆ ಜಾಗತಿಕ ತಾಪಮಾನ ನಿಯಂತ್ರಣದಿಂದ ಇದನ್ನು ಸ್ವಲ್ಪಮಟ್ಟಿಗಾದರೂ ತಪ್ಪಿಸಬಹುದು. ಇಂದೇ ಈ ವಿಷಯವನ್ನು ಆದ್ಯತೆಯಾಗಿ ತೆಗೆದುಕೊಳ್ಳದೇ ಬೇರೆ ಆಯ್ಕೆಯೇ ಇಲ್ಲ ಎಂದು ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿಯಲ್ಲಿನ ಸಹ ಲೇಖಕ ಮೊಯಟಾಸಿಂಗ್ ಆಶ್ಫಕ್ ತಿಳಿಸಿದ್ದಾರೆ.

2040ಕ್ಕೆ 1.5 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ
ಮಾನವನು ಶಾಖವನ್ನು ತಡೆದುಕೊಳ್ಳುವ ಮಿತಿ ಮೀರಲಿದೆ. ಕೈಗಾರಿಕಾ ಕ್ರಾಂತಿ ಪ್ರಾರಂಭವಾದಂದಿಲೂ ಭೂಮಿಯ ತಾಪಮಾನ 1ಡಿಗ್ರಿ ಸೆಲ್ಸಿಯಸ್ ಆಗಿದೆ. ಇದು 2040ರ ವೇಳೆಗೆ 1.5 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎನ್ನಲಾಗಿದೆ.

ಕೃಷಿ ಆಧಾರಿತ ದೇಶಗಳಿಗೆ ಕಷ್ಟ
ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದಕ್ಷಿಣ ಏಷ್ಯಾ ದೇಶಗಳಲ್ಲಿ ಈಗಾಗಲೇ ಬಿಸಿಗಾಳಿ ಎದುರಾಗಿದೆ. ಈ ದೇಶಗಳಲ್ಲಿನ ಸುಮಾರು 60% ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಹಾಗೂ ಹೊರಗೆ ಇರುವುದು ಅನಿವಾರ್ಯವಾದ್ದರಿಂದ ಈ ಉರಿ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ವಿಜ್ಞಾನಿಗಗಳು ಹೇಳಿದ್ದಾರೆ.

ಜನರ ಮುಂದಿದೆ ಸವಾಲು
ಈ ಭಾಗಗಳ ಜನರಿಗೆ ಶಾಖ ಅಭ್ಯಾಸವಾಗಿದ್ದರೂ, ಮೂರು ಪಟ್ಟು ಹೆಚ್ಚಾಗುವ ಶಾಖವು ಜನರಿಗೆ ಬೇರೆಯದೇ ಸವಾಲನ್ನು ಒಡ್ಡುತ್ತದೆ. ಇಂಥ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಜನರು ಹೆಣಗಾಡಬೇಕಾಗುತ್ತದೆ. ಮಾರಕ ಬಿಸಿ ಗಾಳಿಗೆ ಹೊಂದಿಕೊಳ್ಳಲೇಬೇಕಾದ ಅನಿವಾರ್ಯತೆಯೂ ಎದುರಾಗುತ್ತದೆ ಎಂದು ಅಧ್ಯಯನ ತಿಳಿಸಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications