ಈ ಬಾರಿ ನೆತ್ತಿ ಸುಡಲು ಕಾದಿದೆ ರಣಬಿಸಿಲು, ತಪ್ಪಿಸಿಕೊಳ್ಳಲು ಆಗೋದೇ ಇಲ್ಲ...
ಈಗಾಗಲೇ ದೇಶದಲ್ಲಿ ಬಿಸಿಲ ಧಗೆ ಆರಂಭವಾಗಿದೆ. ಬೇಸಿಗೆ ಆರಂಭದಲ್ಲೇ ಬಿಸಿ ಗಾಳಿಗೆ ಜನರು ತತ್ತರಿಸುತ್ತಿದ್ದಾರೆ. ಈ ನಡುವೆ ಅಧ್ಯಯನವೊಂದು, ಭಾರತ ಒಳಗೊಂಡಂತೆ ದಕ್ಷಿಣ ಏಷ್ಯಾ ದೇಶಗಳಲ್ಲಿ ಬಿಸಿಲು ಮೂರು ಪಟ್ಟು ಹೆಚ್ಚಾಗುವುದೆಂದು ಹೇಳಿದೆ. ಈ ಬಾರಿ ರಣಬಿಸಿಲು ಉಂಟಾಗಲಿದ್ದು, ಜನರನ್ನು ಹೈರಾಣುಗೊಳಿಸಲಿದೆ. ಜಾಗತಿಕ ತಾಪಮಾನ 1.5 ಡಿಗ್ರಿ ಸೆಲ್ಸಿಯಸ್ ಇದ್ದು, ಭಾರೀ ಬಿಸಿಲು ನೆತ್ತಿ ಸುಡಲಿದೆ ಎಂದು ತಿಳಿಸಿದೆ.
ಅಮೆರಿಕದ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಜ್ಞಾನಿಗಳು ಈ ಅಧ್ಯಯನ ನಡೆಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಭಾರತದಲ್ಲಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಪ್ರದೇಶಗಳಲ್ಲಿ ವಿಪರೀತ ಶಾಖ ಉಂಟಾಗಲಿದೆ. ಪ್ರಮುಖ ನಗರಗಳಾದ ಕೋಲ್ಕತ್ತಾ, ಮುಂಬೈ ಹಾಗೂ ಹೈದರಾಬಾದ್ಗಳಲ್ಲಿ ಸೆಖೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ. ಮುಂದೆ ಓದಿ...

ಮುಂದಿನ ದಿನಗಳು ಕಠಿಣವಾಗಿರಲಿವೆ
ಜಿಯೋಫಿಸಿಕಲ್ ರಿಸರ್ಚ್ ಲೆಟರ್ಸ್ ನಿಯತಕಾಲಿಕೆಯಲ್ಲಿನ ಈ ಸಂಶೋಧನೆಯಲ್ಲಿ, ಈಚಿನ ವರ್ಷಗಳಿಗೆ ಹೋಲಿಸಿದರೆ, ತಾಪಮಾನ ಮೂರು ಪಟ್ಟು ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಏಷ್ಯಾ ದೇಶಗಳಲ್ಲಿ ಮುಂದಿನ ದಿನಗಳು ಕಠಿಣವಾಗಿರಲಿವೆ. ಆದರೆ ಜಾಗತಿಕ ತಾಪಮಾನ ನಿಯಂತ್ರಣದಿಂದ ಇದನ್ನು ಸ್ವಲ್ಪಮಟ್ಟಿಗಾದರೂ ತಪ್ಪಿಸಬಹುದು. ಇಂದೇ ಈ ವಿಷಯವನ್ನು ಆದ್ಯತೆಯಾಗಿ ತೆಗೆದುಕೊಳ್ಳದೇ ಬೇರೆ ಆಯ್ಕೆಯೇ ಇಲ್ಲ ಎಂದು ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿಯಲ್ಲಿನ ಸಹ ಲೇಖಕ ಮೊಯಟಾಸಿಂಗ್ ಆಶ್ಫಕ್ ತಿಳಿಸಿದ್ದಾರೆ.

2040ಕ್ಕೆ 1.5 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ
ಮಾನವನು ಶಾಖವನ್ನು ತಡೆದುಕೊಳ್ಳುವ ಮಿತಿ ಮೀರಲಿದೆ. ಕೈಗಾರಿಕಾ ಕ್ರಾಂತಿ ಪ್ರಾರಂಭವಾದಂದಿಲೂ ಭೂಮಿಯ ತಾಪಮಾನ 1ಡಿಗ್ರಿ ಸೆಲ್ಸಿಯಸ್ ಆಗಿದೆ. ಇದು 2040ರ ವೇಳೆಗೆ 1.5 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎನ್ನಲಾಗಿದೆ.

ಕೃಷಿ ಆಧಾರಿತ ದೇಶಗಳಿಗೆ ಕಷ್ಟ
ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದಕ್ಷಿಣ ಏಷ್ಯಾ ದೇಶಗಳಲ್ಲಿ ಈಗಾಗಲೇ ಬಿಸಿಗಾಳಿ ಎದುರಾಗಿದೆ. ಈ ದೇಶಗಳಲ್ಲಿನ ಸುಮಾರು 60% ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಹಾಗೂ ಹೊರಗೆ ಇರುವುದು ಅನಿವಾರ್ಯವಾದ್ದರಿಂದ ಈ ಉರಿ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ವಿಜ್ಞಾನಿಗಗಳು ಹೇಳಿದ್ದಾರೆ.

ಜನರ ಮುಂದಿದೆ ಸವಾಲು
ಈ ಭಾಗಗಳ ಜನರಿಗೆ ಶಾಖ ಅಭ್ಯಾಸವಾಗಿದ್ದರೂ, ಮೂರು ಪಟ್ಟು ಹೆಚ್ಚಾಗುವ ಶಾಖವು ಜನರಿಗೆ ಬೇರೆಯದೇ ಸವಾಲನ್ನು ಒಡ್ಡುತ್ತದೆ. ಇಂಥ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಜನರು ಹೆಣಗಾಡಬೇಕಾಗುತ್ತದೆ. ಮಾರಕ ಬಿಸಿ ಗಾಳಿಗೆ ಹೊಂದಿಕೊಳ್ಳಲೇಬೇಕಾದ ಅನಿವಾರ್ಯತೆಯೂ ಎದುರಾಗುತ್ತದೆ ಎಂದು ಅಧ್ಯಯನ ತಿಳಿಸಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications