ಲೈಂಗಿಕ ಕಿರುಕುಳ ಆರೋಪ: ಕುಸ್ತಿಪಟುಗಳ ಪ್ರತಿಭಟನೆ- ಜಂತರ್ ಮಂತರ್ಗೆ ಭೇಟಿ ನೀಡಿದ ಪಿಟಿ ಉಷಾ
ನವದೆಹಲಿ ಮೇ 3: ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ MeToo ಪ್ರತಿಭಟನೆಯನ್ನು ಟೀಕಿಸಿದ ಕೆಲವು ದಿನಗಳ ನಂತರ, ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಅಧ್ಯಕ್ಷೆ ಪಿಟಿ ಉಷಾ ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿದರು.
ಮಾಜಿ ಒಲಿಂಪಿಯನ್ ಆಗಿರುವ ಪಿಟಿ ಉಷಾ, ಅಲ್ಲಿ ನೆರೆದಿದ್ದ ಮಾಧ್ಯಮದವರೊಂದಿಗೆ ಮಾತನಾಡದೆ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಿದರು. ಆದಾಗ್ಯೂ ಪಿಟಿ ಉಷಾ ಆಗಮನದ ಬಗ್ಗೆ ಮಾತನಾಡಿದ ಕುಸ್ತಿಪಟು ಬಜರಂಗ್ ಪುನಿಯಾ, ಪಿಟಿ ಉಷಾ ಅವರು ಆಟಗಾರರಿಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

"ಪಿಟಿ ಉಷಾ ಅವರ ಕಾಮೆಂಟ್ಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದರು. ಅವರು ನಮ್ಮೊಂದಿಗಿರುವುದಾಗಿ ಹೇಳಿದ್ದಾರೆ" ಎಂದು ಪುನಿಯಾ ಹೇಳಿದರು. ''ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನಮಗೆ ನ್ಯಾಯ ಸಿಗಲು ಅವರು ಸಹಾಯ ಮಾಡಲು ಅವರು ಪ್ರಯತ್ನಿಸುತ್ತಿದ್ದಾರೆ" ಎಂದು ಪುನಿಯಾ ಅವರು ಹೇಳಿದರು.
ಹಾಗಾದರೆ ಪಿಟಿ ಉಷಾ ಹೇಳಿದ್ದೇನು?
ಕುಸ್ತಿಪಟುಗಳು ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮೊದಲು ತಮ್ಮ ಆರೋಪಗಳನ್ನು ಪರಿಶೀಲಿಸಲು ನಿಯೋಜಿಸಲಾದ ಸಮಿತಿಯ ವರದಿಗಾಗಿ ಕಾಯುತ್ತಿಲ್ಲ ಎಂದು ಶ್ರೀಮತಿ ಉಷಾ ಕಳೆದ ತಿಂಗಳು ಟೀಕಿಸಿದ್ದರು. 'ಪ್ರತಿಭಟನೆಯು ಅಶಿಸ್ತಿಗೆ ಸಮಾನವಾಗಿದೆ' ಎಂದು ಅವರು ಹೇಳಿದ್ದಾರೆ.
"ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಅವರು ಮಾಡಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ" ಎಂದು ಶ್ರೀಮತಿ ಉಷಾ ಹೇಳಿದ್ದರು.

ಉಷಾ ಹೇಳಿಕೆಗೆ ಕುಸ್ತಿಪಟುಗಳು ಬೇಸರ
ಉಷಾ ಹೇಳಿಕೆಗೆ ಕುಸ್ತಿಪಟುಗಳು ಬೇಸರ ವ್ಯಕ್ತಪಡಿಸಿದ್ದರು. ಶ್ರೀಮತಿ ಉಷಾ ಅವರ ಬೆಂಬಲಕ್ಕಾಗಿ ಎದುರು ನೋಡುತ್ತಿರುವಾಗ ಅವರ ಕಾಮೆಂಟ್ಗಳಿಂದ ತಮಗೆ ನೋವಾಗಿದೆ ಎಂದು ಕುಸ್ತಿಪಟುಗಳು ಹೇಳಿದ್ದರು.
"ಪಿಟಿ ಉಷಾ ಅವರ ಕಾಮೆಂಟ್ನಿಂದ ನಮಗೆ ನೋವಾಗಿದೆ. ಸ್ವತಃ ಮಹಿಳೆಯಾಗಿದ್ದರೂ ಅವರು ನಮಗೆ ಬೆಂಬಲ ನೀಡುತ್ತಿಲ್ಲ. ನಾವು ಏನು ಅಶಿಸ್ತು ಮಾಡಿದ್ದೇವೆ? ನಾವು ಇಲ್ಲಿ ಶಾಂತಿಯುತವಾಗಿ ಕುಳಿತಿದ್ದೇವೆ. ನಮಗೆ ನ್ಯಾಯ ಸಿಕ್ಕಿದ್ದರೆ ನಾವು ಇದನ್ನು ಮಾಡುತ್ತಿರಲಿಲ್ಲ" ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹೇಳಿದ್ದರು. ಉಷಾ ಈ ರೀತಿಯ ಒತ್ತಡಕ್ಕೆ ಒಳಗಾಗಿದ್ದಾರೋ ಇಲ್ಲವೋ ನಮಗೆ ಗೊತ್ತಿಲ್ಲ ಎಂದು ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದರು. ಈ ರೀತಿಯ ಮಾತುಗಳ ಬಳಿಕ ಉಷಾ ಖುದ್ದು ಜಂತರ್ ಮಂತರ್ಗೆ ಆಗಮಿಸಿ ಕುಸ್ತಿಪಟುಗಳ ಸಹಕಾರಕ್ಕೆ ನಾನಿದ್ದೇನೆ ಎನ್ನುವ ಭರವಸೆಯನ್ನು ನೀಡಿದ್ದಾರೆ.
ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳ ಪ್ರತಿಭಟನೆ
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಭಾರತದ ಪ್ರಮುಖ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿ ಪೊಲೀಸರು ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಫ್ಐಆರ್ಗಳಲ್ಲಿ ಒಂದು ಅಪ್ರಾಪ್ತ ವಯಸ್ಕರ ದೂರನ್ನು ಆಧರಿಸಿದೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ದಾಖಲಿಸಲಾಗಿದೆ.
ಪೊಲೀಸ್ ಕ್ರಮದ ಭರವಸೆಯ ಹೊರತಾಗಿಯೂ, ಕುಸ್ತಿಪಟುಗಳು WFI ಮುಖ್ಯಸ್ಥರನ್ನು ತಕ್ಷಣದ ಬಂಧನಕ್ಕೆ ಒತ್ತಾಯಿಸಿ ತಮ್ಮ ಧರಣಿ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದರು.
"ನಾವು ಸುಪ್ರೀಂ ಕೋರ್ಟ್ನ ಆದೇಶವನ್ನು ಗೌರವಿಸುತ್ತೇವೆ, ಆದರೆ ನಮಗೆ ದೆಹಲಿ ಪೊಲೀಸರ ಮೇಲೆ ನಂಬಿಕೆ ಇಲ್ಲ. ಈ ಹೋರಾಟ ಎಫ್ಐಆರ್ಗಾಗಿ ಅಲ್ಲ. ಈ ಹೋರಾಟ ಅವರಂತಹವರನ್ನು ಶಿಕ್ಷಿಸಲು. ಅವರು ಜೈಲಿನಲ್ಲಿರಬೇಕು ಮತ್ತು ಅವರ ಖಾತೆಗಳನ್ನು ಕಸಿದುಕೊಳ್ಳಬೇಕು" ಎಂದು ಕುಸ್ತಿಪಟುಗಳು ಒತ್ತಾಯಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications