ಲೈಂಗಿಕ ಕಿರುಕುಳ ಆರೋಪ: TERI ಅಧ್ಯಕ್ಷ ಪಚೌರಿ ರಾಜೀನಾಮೆ
ನವದೆಹಲಿ, ಫೆ.24: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಐಪಿಸಿಸಿ ಅಧ್ಯಕ್ಷ ರಾಜೇಂದ್ರ ಕೆ ಪಚೌರಿ ಅವರು ರಾಜೀನಾಮೆ ನೀಡಿದ್ದಾರೆ.
Intergovernmental Panel on Climate Change (IPCC) ಮುಖ್ಯಸ್ಥರಾಗಿರುವ ರಾಜೇಂದ್ರ ಪಚೌರಿ ಅವರು ತಮ್ಮ ಕಚೇರಿಯಲ್ಲಿ ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ. ಇಂಧನ ಮತ್ತು ಸಂಪನ್ಮೂಲ ಸಂಸ್ಥೆ TERIಗೆ ಫೆ.24ರಂದು ರಾಜೀನಾಮೆ ನೀಡಿದ್ದಾರೆ.
ನಾನು ಯಾರಿಗೂ ಲೈಂಗಿಕ ಕಿರುಕುಳ ನೀಡಿಲ್ಲ. ಯಾವುದೇ ತನಿಖೆಗೂ ಸಿದ್ಧ. ಆರೋಪ ಹೊತ್ತು ಮುಖ್ಯಸ್ಥನ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ಪಚೌರಿ ಅವರು ಹೇಳಿದ್ದಾರೆ.

ಆದರೆ, ಪಚೌರಿ ಅವರು ಬಂಧನ ಭೀತಿ ಯಿಂದ ಬಚಾವ್ ಆಗಿದ್ದು, ಫೆ.26ರ ತನಕ ಅವರನ್ನು ಬಂಧಿಸದಂತೆ ದೆಹಲಿ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ನೈರೋಬಿಯಲ್ಲಿ ನಡೆಯುವ ಐಪಿಸಿಸಿ ಸೆಮಿನಾರ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಕೊರಗಿದೆ. ಪೊಲೀಸ್ ತನಿಖೆಗೆ ಸಹಕಾರ ನೀಡುವುದಾಗಿ ಪಚೌರಿ ಹೇಳಿದ್ದಾರೆ.
ನೊಬೆಲ್ ಪ್ರಶಸ್ತಿ ಪುರಸ್ಕೃತ ಹವಾಮಾನ ಬದಲಾವಣೆ ಕುರಿತ ಅಂತರ್ ಸರಕಾರಿ ಮಂಡಳಿ (ಐಪಿಸಿಸಿ)ಯ ಅಧ್ಯಕ್ಷರಾಗಿರುವ ಪಚೌರಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಉಪಾಧ್ಯಕ್ಷರಾದ ಇಸ್ಮಾಯಿಲ್ ಎಲ್ ಗುಜೌಲಿ ಅವರು ಹಂಗಾಮಿ ಐಪಿಸಿಸಿ ಚೇರ್ಮನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಐಪಿಸಿಸಿ ಪ್ರಕಟಿಸಿದೆ.
ತನಿಖೆ ಜಾರಿಯಲ್ಲಿದೆ: 29 ವರ್ಷ ವಯಸ್ಸಿನ ಸಂಶೋಧನಾ ಸಹಾಯಕಿಯಾಗಿ ಮೇಲೆ 2013ರ ಅಕ್ಟೋಬರ್ನಿಂದ 2015ರ ಜನವರಿ ತನಕದ ಅವಧಿಯಲ್ಲಿ ಪಚೌರಿ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇಬ್ಬರ ನಡುವೆ ಇ-ಮೇಲ್ಗಳು, ವಾಟ್ಸಪ್ ಸಂದೇಶಗಳು ರವಾನೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಏಪ್ರಿಲ್ 2002 ರಿಂದ ಐಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿದ್ದ ಪಚೌರಿ ಅವರು ನೊಬೆಲ್ 2007 ರಲ್ಲಿ ಶಾಂತಿ ಪಾರಿತೋಷಕ ಪ್ರಶಸ್ತಿ ಲಭಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications