ತೆಹಲ್ಕಾ ತರುಣ್ ಮಾಡಿದ್ದು ಅತ್ಯಾಚಾರವೇ: ಬಾಧಿತೆ
ನವದೆಹಲಿ, ನ.29- ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ತೆಹಲ್ಕಾ ಪತ್ರಿಕೆಯ ಸಂಸ್ಥಾಪಕ ಸಂಪಾದಕ ತರುಣ್ ತೇಜ್ ಪಾಲ್ ಅತ್ತ ಗೋವಾ ಟ್ರಿಪ್ ಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಇತ್ತ ದಿಲ್ಲಿಯಲ್ಲಿ ಬಾಧಿತ ಮಹಿಳಾ ಸಹೋದ್ಯೋಗಿ ಪ್ರಕರಣಕ್ಕೆ ಅಂತಿಮ ಮೊಳೆ ಹೊಡೆದಿದ್ದಾರೆ.
ಯಾವುದೇ ರಾಜಕೀಯ ಲಾಭಕ್ಕಾಗಿ ನಾನು ಆತನ ಮೇಲೆ ಆರೋಪ ಹೊರಿಸಿಲ್ಲ. ಕಾನೂನಿನ ಚೌಕಟ್ಟಿಗೆ ಒಳಪಡುವ ರೀತಿಯಲ್ಲೇ ಆತ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಕ್ಷರಶಃ ಆತ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ' ಎಂದು ದೃಢೀಕರಿಸಿದ್ದಾರೆ.

ಇದರಿಂದ ಅಂತಿಮ ಗಳಿಗೆಯಲ್ಲಿ ಬಾಧಿತಳು ತನಗೆ ಆಸರೆಯಾಗಬಹುದು. ನನ್ನ ಮೇಲಿನ ಆರೋಪವನ್ನು ಹಿಂತೆಗೆದುಕೊಳ್ಳಬಹುದು ಎಂಬ ಆಸರೆ ತೇಜಪಾಲ್ ಗೆ ಕಮರಿಹೋಗಿದೆ. ಹಾಗಾಗಿ ಅತ್ತ ತಾನು ಕುಕೃತ್ಯವೆಸಗಿದ ಗೋವಾ ನೆಲದಲ್ಲಿ ಕಾಲಿಡುತ್ತಿದ್ದಂತೆ ತೆಹಲ್ಕಾ ಪತ್ರಿಕೆಯ ಪ್ರಧಾನ ಸಂಪಾದಕ ತರುಣ್ ತೇಜಪಾಲ್ ಪೊಲೀಸ್ ಬಂಧನಕ್ಕೆ ಒಳಗಾಗುವುದು ದಿಟವಾಗಿದೆ.
'ಒಂದೆಡೆ ನನಗೆ ಭಾರಿ ಪ್ರೋತ್ಸಾಹ/ ನೆರವು ಲಭಿಸುತ್ತಿದೆ. ಇದೇ ವೇಳೆ ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಾನು ಇಂತಹ ಆರೋಪ ಮಾಡುತ್ತಿರುವುದಾಗಿ ಕೊಂಕು ತೆಗೆದಿರುವುದು ಬೇಸರ ಮೂಡಿಸಿದೆ' ಎಂದು 2 ಪುಟಗಳ ಹೇಳಿಕೆಯಲ್ಲಿ ಬಾಧಿತ ಪತ್ರಕರ್ತೆ ಹೇಳಿಕೊಂಡಿದ್ದಾರೆ.
'ನನ್ನ ಸ್ವಾಭಿಮಾನಕ್ಕಾಗಿ ನಾನು ಹೋರಾಡುತ್ತಿದ್ದೇನೆಯೇ ಹೊರತು, ಯಾವುದೇ ರಾಜಕೀಯ ದುರುದ್ದೇಶದಿಂದಲ್ಲ. ಕಾನೂನು ಎಂಬುದು ಎಲ್ಲರಿಗೂ ಒಂದೇ ಆಗಿರಬೇಕು. ನನ್ನ ವಿರುದ್ಧದ ಆರೋಪಗಳಿಂದ ನನಗೆ ತುಂಬಾ ದುಃಖವಾಗುತ್ತಿದೆ. ತೇಜಪಾಲ್ ಮತ್ತು ಅವರ ಬೆಂಬಲಕ್ಕೆ ನಿಂತಿರುವ ಕೆಲ ಪ್ರಭಾವಿಗಳು ನನ್ನ ಆರೋಪಗಳನ್ನು ರಾಜಕೀಯ ದುರುದ್ದೇಶ ಪೂರ್ವಕ ಎಂದು ಬಣ್ಣಿಸುತ್ತಿದ್ದಾರೆ. ಇದರಿಂದ ನಾನು ಮಾನಸಿಕವಾಗಿ ಜರ್ಜರಿತಳಾಗಿದ್ದೇನೆ' ಎಂದು ತೆಹಲ್ಕಾ ಮಾಜಿ ಪತ್ರಕರ್ತೆ ಹೇಳಿಕೊಂಡಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications