ಕೇರಳದ ಕಾಲೇಜಿನಲ್ಲಿ ಎಸ್ಎಫ್ಐ ವಿದ್ಯಾರ್ಥಿ ನಾಯಕನ ಕೊಲೆ
ಕೊಚ್ಚಿ, ಜುಲೈ 2: ಕೇರಳದಲ್ಲಿ ಆರ್.ಎಸ್.ಎಸ್ ಮತ್ತು ಸಿಪಿಎಂ ನಡುವಿನ ರಾಜಕೀಯ ಸಂಘರ್ಷ ಹಿಂಸೆಗೆ ತಿರುಗಿದ್ದು ಹಳೆ ವಿಚಾರ. ಇದೀಗ ಸಿಪಿಐಎಂ ಮತ್ತು ಪಿಎಫ್ಐ ಸಂಘಟನೆಗಳ ನಡುವಿನ ಹಿಂಸಾಚಾರ ಕಾಲೇಜಿಗೂ ಕಾಲಿಟ್ಟಿದೆ.
ಭಾನುವಾರ ನಡೆದ ಘಟನೆಯಲ್ಲಿ ಎಸ್ಎಫ್ಐ ವಿದ್ಯಾರ್ಥಿ ನಾಯಕನ ಅಭಿಮನ್ಯು ಎಂಬವನನ್ನು ಎರ್ನಾಕುಲಂನ ಕಾಲೇಜೊಂದರಲ್ಲಿ ಕೊಲೆ ಮಾಡಲಾಗಿದೆ.
ಎಸ್ಎಫ್ಐ ಕಾಲೇಜು ನಾಯಕರ ಮೇಲೆ ಇಸ್ಲಾಂ ಪರವಾದ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿ ಸಂಘಟನೆ 'ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ' ಈ ಕೊಲೆ ನಡೆಸಿದೆ ಎನ್ನಲಾಗಿದೆ. ಎರ್ನಾಕುಲಂನ ಮಹಾರಾಜ ಕಾಲೇಜಿಲ್ಲಿ ಈ ಘಟನೆ ನಡೆದಿದೆ.
ಗಾಯಗೊಂಡಿರುವ ಓರ್ವ ವಿದ್ಯಾರ್ಥಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಘಟನೆ ಖಂಡಿಸಿ ಸಿಪಿಐಎಂನ ವಿದ್ಯಾರ್ಥಿ ಸಂಘಟನೆ ಸ್ಟುಡೆಂಟ್ ಫೆಡರೇಷನ್ ಆಫ್ ಇಂಡಿಯಾ ಇಂದು ಕೇರಳ ರಾಜ್ಯ ಬಂದ್ ಗೆ ಕರೆ ನೀಡಿದೆ.
ಸಾವಿಗೀಡಾದ ಅಭಿಮನ್ಯು ಇಡುಕ್ಕಿ ಜಿಲ್ಲೆಯ ವಟ್ಟವಡ ನಿವಾಸಿಯಾಗಿದ್ದಾನೆ. ಈತ ಕಾಲೇಜನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ.
ಕಾಲೇಜಿನ ಗೋಡೆಯನ್ನು ಬಳಸಿಕೊಳ್ಳುವ ವಿಚಾರವಾಗಿ ಎರಡೂ ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿ ಇದು ಕೊಲೆಗೆ ತಿರುಗಿದೆ ಎನ್ನಲಾಗಿದೆ.
ಘಟನೆಯನ್ನು ರಾಜ್ಯಸಭಾ ಸದಸ್ಯ ಪಿ. ರಾಜೀವ್ ಖಂಡಿಸಿದ್ದಾರೆ. "ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ಕಾರ್ಯಕರ್ತರ ಮೇಲೆ ಇಂಥಹ ಘೋರ ದಾಳಿಯನ್ನು ನಾವು ನೋಡಿಲ್ಲ. ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿರುವ ಇಂಥಹ ಸಂಘಟನೆಗಳ ವಿರುದ್ಧ ಹೋರಾಡಲು ಎಲ್ಲಾ ಪ್ರಗತಿಪರ ಶಕ್ತಿಗಳು ಮುಂದೆ ಬರಬೇಕು," ಎಂದು ಎರ್ನಾಕುಲಂ ಜಿಲ್ಲೆಯವರೇ ಆದ ಎಸ್ಎಫ್ಐನ ಮಾಜಿ ರಾಜ್ಯ ನಾಯಕರಾದ ಪಿ. ರಾಜೀವ್ ಕರೆ ನೀಡಿದ್ದಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications