ಕೇರಳದ ಕಾಲೇಜಿನಲ್ಲಿ ಎಸ್ಎಫ್ಐ ವಿದ್ಯಾರ್ಥಿ ನಾಯಕನ ಕೊಲೆ
ಕೊಚ್ಚಿ, ಜುಲೈ 2: ಕೇರಳದಲ್ಲಿ ಆರ್.ಎಸ್.ಎಸ್ ಮತ್ತು ಸಿಪಿಎಂ ನಡುವಿನ ರಾಜಕೀಯ ಸಂಘರ್ಷ ಹಿಂಸೆಗೆ ತಿರುಗಿದ್ದು ಹಳೆ ವಿಚಾರ. ಇದೀಗ ಸಿಪಿಐಎಂ ಮತ್ತು ಪಿಎಫ್ಐ ಸಂಘಟನೆಗಳ ನಡುವಿನ ಹಿಂಸಾಚಾರ ಕಾಲೇಜಿಗೂ ಕಾಲಿಟ್ಟಿದೆ.
ಭಾನುವಾರ ನಡೆದ ಘಟನೆಯಲ್ಲಿ ಎಸ್ಎಫ್ಐ ವಿದ್ಯಾರ್ಥಿ ನಾಯಕನ ಅಭಿಮನ್ಯು ಎಂಬವನನ್ನು ಎರ್ನಾಕುಲಂನ ಕಾಲೇಜೊಂದರಲ್ಲಿ ಕೊಲೆ ಮಾಡಲಾಗಿದೆ.
ಎಸ್ಎಫ್ಐ ಕಾಲೇಜು ನಾಯಕರ ಮೇಲೆ ಇಸ್ಲಾಂ ಪರವಾದ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿ ಸಂಘಟನೆ 'ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ' ಈ ಕೊಲೆ ನಡೆಸಿದೆ ಎನ್ನಲಾಗಿದೆ. ಎರ್ನಾಕುಲಂನ ಮಹಾರಾಜ ಕಾಲೇಜಿಲ್ಲಿ ಈ ಘಟನೆ ನಡೆದಿದೆ.
ಗಾಯಗೊಂಡಿರುವ ಓರ್ವ ವಿದ್ಯಾರ್ಥಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಘಟನೆ ಖಂಡಿಸಿ ಸಿಪಿಐಎಂನ ವಿದ್ಯಾರ್ಥಿ ಸಂಘಟನೆ ಸ್ಟುಡೆಂಟ್ ಫೆಡರೇಷನ್ ಆಫ್ ಇಂಡಿಯಾ ಇಂದು ಕೇರಳ ರಾಜ್ಯ ಬಂದ್ ಗೆ ಕರೆ ನೀಡಿದೆ.
ಸಾವಿಗೀಡಾದ ಅಭಿಮನ್ಯು ಇಡುಕ್ಕಿ ಜಿಲ್ಲೆಯ ವಟ್ಟವಡ ನಿವಾಸಿಯಾಗಿದ್ದಾನೆ. ಈತ ಕಾಲೇಜನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ.
ಕಾಲೇಜಿನ ಗೋಡೆಯನ್ನು ಬಳಸಿಕೊಳ್ಳುವ ವಿಚಾರವಾಗಿ ಎರಡೂ ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿ ಇದು ಕೊಲೆಗೆ ತಿರುಗಿದೆ ಎನ್ನಲಾಗಿದೆ.
ಘಟನೆಯನ್ನು ರಾಜ್ಯಸಭಾ ಸದಸ್ಯ ಪಿ. ರಾಜೀವ್ ಖಂಡಿಸಿದ್ದಾರೆ. "ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ ಕಾರ್ಯಕರ್ತರ ಮೇಲೆ ಇಂಥಹ ಘೋರ ದಾಳಿಯನ್ನು ನಾವು ನೋಡಿಲ್ಲ. ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿರುವ ಇಂಥಹ ಸಂಘಟನೆಗಳ ವಿರುದ್ಧ ಹೋರಾಡಲು ಎಲ್ಲಾ ಪ್ರಗತಿಪರ ಶಕ್ತಿಗಳು ಮುಂದೆ ಬರಬೇಕು," ಎಂದು ಎರ್ನಾಕುಲಂ ಜಿಲ್ಲೆಯವರೇ ಆದ ಎಸ್ಎಫ್ಐನ ಮಾಜಿ ರಾಜ್ಯ ನಾಯಕರಾದ ಪಿ. ರಾಜೀವ್ ಕರೆ ನೀಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications