Get Updates
Get notified of breaking news, exclusive insights, and must-see stories!

Shabarimala Yatra 2024: ಚಕ್ಕುಪಳ್ಳಂ, ಬೆಟ್ಟದ ತುದಿಯಲ್ಲಿ ಕಾರು ನಿಲುಗಡೆಗೆ ಹೈಕೋರ್ಟ್ ಅನುಮತಿ

ಕೊಚ್ಚಿ ನವೆಂಬರ್ 13: ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳಿಗೆ ಕೇರಳ ಹೈಕೋರ್ಟ್ ಸಿಹಿ ಸುದ್ದಿಯೊಂದನ್ನು ನೀಡಿದೆ. ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳ ವಾಹನಗಳನ್ನು ಚಕ್ಕುಪಳ್ಳಂ-II ಮತ್ತು ಬೆಟ್ಟದ ತುದಿಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಪಾರ್ಕಿಂಗ್ ಮಾಡಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಇದರಿಂದಾಗಿ ಯಾತ್ರಾರ್ಥಿಗಳು ಸಾಕಷ್ಟು ಸಂತೋಷ ವ್ಯಕ್ತಪಡಿಸಿದ್ದಾರೆ.

ಪ್ರತೀ ವರ್ಷ ಕಾರ್ತಿಕ ಮಾಸದಲ್ಲಿ ಅಯ್ಯಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸುತ್ತಾರೆ. ವಿಶೇಷವಾಗಿ ಮಂಡಲಂ-ಮಕರವಿಳಕ್ಕು ಉತ್ಸವದಲ್ಲಿ ಜನಸಂದಣಿ ನಿರ್ವಹಣೆ ಕಷ್ಟವಾಗುತ್ತದೆ. ಇದರಿಂದಾಗಿ ಚಕ್ಕುಪಳ್ಳಂ-II ಮತ್ತು ಬೆಟ್ಟದ ತುದಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿತ್ತು.

Shabarimala Yatra 2024 High Court given permission to Chakkupallam-II amp amp hilltop car parking

ಆದರೀಗ ಯಾತ್ರಾರ್ಥಿಗಳಿಗೆ ಅನಾನುಕೂಲವಾಗುವುದರಿಂದ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯಲ್ಲಿ, ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್ ನೇತೃತ್ವದ ವಿಭಾಗೀಯ ಪೀಠವು ತಿರುವಾಂಕೂರು ದೇವಸ್ವಂನ ನಿರ್ದೇಶನಗಳನ್ನು ಅನುಸರಿಸಿ, ದೇವಸ್ಥಾನ ಆಡಳಿತ ಮಂಡಳಿ ಮತ್ತು ಪೊಲೀಸ್ ನಿಗದಿಪಡಿಸಿದ ಸ್ಲಾಟ್‌ಗಳಲ್ಲಿ ಮಾತ್ರ ಕಾರುಗಳನ್ನು ನಿಲುಗಡೆ ಮಾಡಬೇಕೆಂದು ಹೇಳಿದೆ.

ಅಲ್ಲದೆ ಯಾತ್ರಾರ್ಥಿಗಳ ವಾಹನಗಳು ಸೇರಿದಂತೆ ಇತರ ಯಾವುದೇ ವಾಹನಗಳನ್ನು ಎರಡು ಪ್ರದೇಶಗಳಲ್ಲಿ ನಿಲುಗಡೆ ಮಾಡಬಾರದು ಎಂದು ನ್ಯಾಯಾಲಯ ಹೇಳಿದೆ. ನಿಲಕ್ಕಲ್‌ನಿಂದ ಪಂಪಾವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡದಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶ ನೀಡಿದೆ. ನಿಯಲ ಮೀರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಕೋರ್ಟ್ ಹೇಳಿದೆ.

ಇನ್ನೂ ಪ್ರತಿ ಇಲಾಖೆಗೆ ಗುರುತಿಸಲಾದ ಪ್ರದೇಶಗಳಲ್ಲಿ ಅಧಿಕಾರಿಗಳ ವಾಹನಗಳು ಮತ್ತು ತುರ್ತು ವಾಹನಗಳನ್ನು ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ. ಜೊತೆಗೆ ಶಬರಿಮಲೆ ವಿಶೇಷ ಆಯುಕ್ತರ ಸಮ್ಮುಖದಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲುಗಡೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.

ಕೆಎಸ್‌ಆರ್‌ಟಿಸಿ ಹೆಚ್ಚುವರಿ ಜಾಗವನ್ನು ಬಯಸಿದರೆ, ಆಯುಕ್ತರಿಗೆ ಮನವಿ ಮಾಡಬೇಕು, ಅವರು ಮುಖ್ಯ ಪೊಲೀಸ್ ಸಂಯೋಜಕರೊಂದಿಗೆ ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಹೇಳಿದೆ. ತೀರ್ಥಯಾತ್ರೆಯ ಸಮಯದಲ್ಲಿ ಸರಿಯಾದ ಜನಸಂದಣಿ ನಿರ್ವಹಣೆ, ಸುರಕ್ಷತೆ ಮತ್ತು ಆರಾಮದಾಯಕ ತೀರ್ಥಯಾತ್ರೆಗೆ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ.

ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಒಂದಾಗಿದೆ. ಈ ದೇವಸ್ಥಾನಕ್ಕೆ ದೇಶದ ಮೂಲೆ ಮೂಲೆಗಳಿಂದ ಜನ ಆಗಮಿಸುತ್ತಾರೆ. ಪ್ರತಿವರ್ಷ ನವೆಂಬರ್‌ನಿಂದ ಡೆಸೆಂಬರ್‌ ತನಕ ವಾರ್ಷಿಕ ಪೂಜೆಗಳು ನಡೆಯುತ್ತದೆ. ಈ ಸಮಯದಲ್ಲಿ ಭಕ್ತಾಧಿಗಳು ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಶಬರಿಮಲೆಗೆ ಆಗಮಿಸುತ್ತಾರೆ.

ಇಲ್ಲಿಗೆ ಆಗಮಿಸುವ ಭಕ್ತರು ಹದಿನಾಲ್ಕು ದಿನಗಳ ಕಾಲ ವ್ರತ ಆಚರಣೆ ಮಾಡಿ ಬರುತ್ತಾರೆ. ಅದನ್ನು ಮಾಲೆ ಹಾಕುವುದು ಎಂದು ಕರೆಯಲಾಗುತ್ತದೆ. ಕೇರಳದ ಪಥನಂತಿಟ್ಟ ಜೆಲ್ಲೆಯ ಅಯ್ಯಪ್ಪ ದೇವರಿಗೆ ಸಮರ್ಪಿತವಾಗಿರುವ ಶಬರಿಮಲೆ ದೇವಾಲಯ ನಾಲ್ಕು ಕಿಮೀಗಿಂತ ಹೆಚ್ಚು ದೂರದ ಬೆಟ್ಟದಲ್ಲಿದೆ. ಇದು ಅತ್ಯಂತ ಕಷ್ಟಕರ ಪ್ರಯಾಣವಾಗಿದ್ದು ಭಕ್ತರು ಕಾಲ್ನಡಿಗೆಯಲ್ಲಿ ಸಾಗುತ್ತಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+