ಭಟ್ಕಳ ಮೂಲದ ಶಫಿ ಭಾರತದಲ್ಲಿ ಐಎಸ್ಐಎಸ್ಗೆ ಮುಖ್ಯಸ್ಥ
ಬೆಂಗಳೂರು, ಫೆಬ್ರವರಿ 04 : ದೇಶದ ವಿವಿಧ ನಗರಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯ (ಐಎಸ್ಐಎಸ್) ಶಂಕಿತ ಉಗ್ರರನ್ನು ಬಂಧಿಸಿದ ಎನ್ಐಎ ಮೊಹಮದ್ ಶಫಿ ಅರ್ಮರ್ ಉಗ್ರರು ಮತ್ತು ಭಾರತದ ನಡುವಿನ ಕೊಂಡಿಯಾಗಿದ್ದಾನೆ ಎಂದು ಪತ್ತೆ ಹಚ್ಚಿದೆ.
26 ವರ್ಷದ ಮೊಹಮದ್ ಶಫಿ ಅರ್ಮರ್ ಬಂಧನಕ್ಕೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಐಎಸ್ಐಎಸ್ಗೆ ನೇಮಕಾತಿ, ಉಗ್ರ ಸಂಘಟನೆಗೆ ಹಣ ಸಂಗ್ರಹಣೆ, ಉಗ್ರ ಸಂಘಟನೆ ಸೇರಿರುವುದು ಸೇರಿದಂತೆ ಶಫಿ ವಿರುದ್ಧ ಹಲವಾರು ಆರೋಪಗಳಿವೆ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]

ಭಟ್ಕಳ ಮೂಲದ ಮೊಹಮದ್ ಶಫಿಯ ಕುಟುಂಬದ ಹೆಸರು ಅರ್ಮರ್. ಕನ್ನಡ, ಇಂಗ್ಲಿಷ್, ಉರ್ದು, ಹಿಂದಿ ಭಾಷೆಯನ್ನು ಶಫಿ ಚೆನ್ನಾಗಿ ಬಲ್ಲ. ಭಾರತದಲ್ಲಿ ಐಎಸ್ಐಎಸ್ಗೆ ಉಗ್ರರನ್ನು ನೇಮಕ ಮಾಡಿಕೊಳ್ಳಲು ಅನ್ಸರ್-ಉಲ್-ತವಾಹಿದ್ ಸಂಘಟನೆ ಸ್ಥಾಪನೆ ಮಾಡಿದ್ದ ಸುಲ್ತಾನ್ ಅರ್ಮರ್ ಶಫಿಯ ಸಹೋದರ. [ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ]
ಸುಲ್ತಾನ್ ಅರ್ಮರ್ ಜೊತೆಗಿದ್ದ ಶಫಿ ಉಗ್ರರನ್ನು ನೇಮಕ ಮಾಡಿಕೊಳ್ಳುತ್ತಿದ್ದ. ಸಿರಿಯಾದಲ್ಲಿ ಸುಲ್ತಾನ್ ಹತ್ಯೆಯಾದ ಬಳಿಕ ಶಫಿ ಅರ್ಮರ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದಾನೆ. ಗಣರಾಜ್ಯೋತ್ಸವದ ವೇಳೆಯಲ್ಲಿ ಮುಂಬೈನಲ್ಲಿ ಬಂಧಿಸಲಾದ ಶಂಕಿತ ಉಗ್ರ ಮುದಬ್ಬೀರ್ ಮುಷ್ತಾಖ್ ಸಹ ಶಫಿ ಜೊತೆ ಸಂಪರ್ಕ ಹೊಂದಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದ.
ಭಾರತದಲ್ಲಿದ್ದ ಉಗ್ರರಿಗೆ ಶಫಿ ಹಣವನ್ನು ಕಳಿಸುತ್ತಿದ್ದ ಎಂದು ಗುಪ್ತಚರ ಇಲಾಖೆ ಹೇಳಿದೆ. ಕಳೆದ ವರ್ಷ ಸುಮಾರು 6 ಲಕ್ಷ ರೂ. ಹಣವನ್ನು ಭಾರತದಲ್ಲಿದ್ದ ತನ್ನ ಸಹಚರರಿಗೆ ಶಫಿ ಕಳಿಸಿದ್ದ. ಈ ಹಣವನ್ನು ಇಟ್ಟುಕೊಂಡು ಉಗ್ರರು ಭಾರತದಲ್ಲಿ ತಮ್ಮ ಕಾರ್ಯಾಚರಣೆ ನಡೆಸುತ್ತಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications