ಭಟ್ಕಳ ಮೂಲದ ಶಫಿ ಭಾರತದಲ್ಲಿ ಐಎಸ್ಐಎಸ್ಗೆ ಮುಖ್ಯಸ್ಥ
ಬೆಂಗಳೂರು, ಫೆಬ್ರವರಿ 04 : ದೇಶದ ವಿವಿಧ ನಗರಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯ (ಐಎಸ್ಐಎಸ್) ಶಂಕಿತ ಉಗ್ರರನ್ನು ಬಂಧಿಸಿದ ಎನ್ಐಎ ಮೊಹಮದ್ ಶಫಿ ಅರ್ಮರ್ ಉಗ್ರರು ಮತ್ತು ಭಾರತದ ನಡುವಿನ ಕೊಂಡಿಯಾಗಿದ್ದಾನೆ ಎಂದು ಪತ್ತೆ ಹಚ್ಚಿದೆ.
26 ವರ್ಷದ ಮೊಹಮದ್ ಶಫಿ ಅರ್ಮರ್ ಬಂಧನಕ್ಕೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಐಎಸ್ಐಎಸ್ಗೆ ನೇಮಕಾತಿ, ಉಗ್ರ ಸಂಘಟನೆಗೆ ಹಣ ಸಂಗ್ರಹಣೆ, ಉಗ್ರ ಸಂಘಟನೆ ಸೇರಿರುವುದು ಸೇರಿದಂತೆ ಶಫಿ ವಿರುದ್ಧ ಹಲವಾರು ಆರೋಪಗಳಿವೆ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]

ಭಟ್ಕಳ ಮೂಲದ ಮೊಹಮದ್ ಶಫಿಯ ಕುಟುಂಬದ ಹೆಸರು ಅರ್ಮರ್. ಕನ್ನಡ, ಇಂಗ್ಲಿಷ್, ಉರ್ದು, ಹಿಂದಿ ಭಾಷೆಯನ್ನು ಶಫಿ ಚೆನ್ನಾಗಿ ಬಲ್ಲ. ಭಾರತದಲ್ಲಿ ಐಎಸ್ಐಎಸ್ಗೆ ಉಗ್ರರನ್ನು ನೇಮಕ ಮಾಡಿಕೊಳ್ಳಲು ಅನ್ಸರ್-ಉಲ್-ತವಾಹಿದ್ ಸಂಘಟನೆ ಸ್ಥಾಪನೆ ಮಾಡಿದ್ದ ಸುಲ್ತಾನ್ ಅರ್ಮರ್ ಶಫಿಯ ಸಹೋದರ. [ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ]
ಸುಲ್ತಾನ್ ಅರ್ಮರ್ ಜೊತೆಗಿದ್ದ ಶಫಿ ಉಗ್ರರನ್ನು ನೇಮಕ ಮಾಡಿಕೊಳ್ಳುತ್ತಿದ್ದ. ಸಿರಿಯಾದಲ್ಲಿ ಸುಲ್ತಾನ್ ಹತ್ಯೆಯಾದ ಬಳಿಕ ಶಫಿ ಅರ್ಮರ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದಾನೆ. ಗಣರಾಜ್ಯೋತ್ಸವದ ವೇಳೆಯಲ್ಲಿ ಮುಂಬೈನಲ್ಲಿ ಬಂಧಿಸಲಾದ ಶಂಕಿತ ಉಗ್ರ ಮುದಬ್ಬೀರ್ ಮುಷ್ತಾಖ್ ಸಹ ಶಫಿ ಜೊತೆ ಸಂಪರ್ಕ ಹೊಂದಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದ.
ಭಾರತದಲ್ಲಿದ್ದ ಉಗ್ರರಿಗೆ ಶಫಿ ಹಣವನ್ನು ಕಳಿಸುತ್ತಿದ್ದ ಎಂದು ಗುಪ್ತಚರ ಇಲಾಖೆ ಹೇಳಿದೆ. ಕಳೆದ ವರ್ಷ ಸುಮಾರು 6 ಲಕ್ಷ ರೂ. ಹಣವನ್ನು ಭಾರತದಲ್ಲಿದ್ದ ತನ್ನ ಸಹಚರರಿಗೆ ಶಫಿ ಕಳಿಸಿದ್ದ. ಈ ಹಣವನ್ನು ಇಟ್ಟುಕೊಂಡು ಉಗ್ರರು ಭಾರತದಲ್ಲಿ ತಮ್ಮ ಕಾರ್ಯಾಚರಣೆ ನಡೆಸುತ್ತಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications