ಶಾರುಖ್ ವಿರುದ್ಧ ಇನ್ನೂ ಆರದ ಅಸಹಿಷ್ಣುತೆ ಉರಿ!
ಅಹಮದಾಬಾದ್, ಫೆ. 15: ಕಿಂಗ್ ಖಾನ್ ಶಾರೂಖ್ ಅವರ ಕಾರಿನ ಮೇಲೆ ದಾಳಿ ನಡೆದಿದೆ. ರಯೀಸ್ ಚಿತ್ರದ ಚಿತ್ರೀಕರಣಕ್ಕಾಗಿ ಬಂದಿದ್ದ ಖಾನ್ ಅವರು ಬಂದಿದ್ದಾರೆ. ಶಾರುಖ್ ಅವರ ಕಾರಿನ ಮೇಲೆ ಗುಂಪೊಂದು ದಾಳಿ ಮಾಡಿದೆ. ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಬಗ್ಗೆ ಶಾರುಖ್ ನೀಡಿದ್ದ ಹೇಳಿಕೆ ಖಂಡಿಸಿ ಪ್ರತಿಭಟಿಸುತ್ತಿರುವುದಾಗಿ ದಾಳಿ ಮಾಡಿದವರು ಹೇಳಿದ್ದಾರೆ.
ಅಹಮದಾಬಾದಿನ ಆಶ್ರಮ ರಸ್ತೆಯಲ್ಲಿರುವ ಹಯಾತ್ ರಿಜೆನ್ಸಿ ಹೋಟೆಲ್ ಆವರಣದಲ್ಲಿ ಶಾರೂಖ್ ಅವರು ಕಾರು ನಿಲ್ಲಿಸಿದ್ದರು. ಸುಮಾರು 8 ರಿಂದ 10 ಮಂದಿ ಕಾರಿನ ಮೇಲೆ ಕಲ್ಲು ಎಸೆದಿದ್ದಾರೆ. ರಯೀಸ್ ಚಿತ್ರತಂಡದ ವಿರುದ್ಧ 15 ದಿನ ಮುನ್ನ ಭುಜ್ ಪ್ರದೇಶದಲ್ಲಿ ಚಿತ್ರೀಕರಣದ ವೇಳೆ ಪ್ರತಿಭಟನೆ ನಡೆಸಲಾಗಿತ್ತು.

ನಂತರ ಹೇಳಿಕೆ ಬಗ್ಗೆ ಸಮರ್ಥನೆ ನೀಡಿ, "ಭಾರತ ಅಸಹಿಷ್ಣುತೆ ಹೊಂದಿದೆ ಎಂದು ನಾನೆಂದೂ ಹೇಳಿಲ್ಲ. ನನ್ನನ್ನು ಆ ಬಗ್ಗೆ ಕೇಳಿದಾಗ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದ್ದೆ. ಆದರೆ ಅಭಿಪ್ರಾಯ ಹೇಳಲೇಬೇಕು ಎಂದು ಒತ್ತಾಯಿಸಿದಾಗ, ಯುವಕರು ಈ ದೇಶವನ್ನು ಜಾತ್ಯತೀತ ಹಾಗೂ ಪ್ರಗತಿಪರ ದೇಶವಾಗಿ ಮಾಡಲು ಗಮನ ಹರಿಸಬೇಕು ಎಂದು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದರು.
ಖಾನ್ ಅವರ ಹಿಂದಿನ ಚಿತ್ರ ದಿಲ್ವಾಲೆಗೆ ಕೂಡಾ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಬಾಕ್ಸ್ ಆಫೀಸ್ನಲ್ಲಿ ನೀರಸ ಪ್ರತಿಕ್ರಿಯೆ ದೊರಕಿತ್ತು. ರಯೀಸ್ ಚಿತ್ರ ಜುಲೈ ಮಧ್ಯಭಾಗದಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಈ ಚಿತ್ರದ ಬಿಡುಗಡೆಗೆ ನಿಷೇಧ ಹೇರುವಂತೆ ಆಗ್ರಹಿಸಿ ದಾಳಿ ಮಾಡಿದ ವಿಶ್ವ ಹಿಂದೂಪರಿಷತ್ ನ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಎಸಿಪಿ ಬಿಯು ಜಡೇಜ ಹೇಳಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications