Shame On You Stalin: ತಮಿಳುನಾಡಿನ ಸಿ.ಎಂ ಸ್ಟಾಲಿನ್, ಪುತ್ರ ಉದಯನಿಧಿ ಸ್ಟಾಲಿನ್ ಮೇಲೆ ಹೆಚ್ಚಾಯ್ತು ಜನಾಕ್ರೋಶ, ಕಾರಣವೇನು ?
ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಘಟನೆ ಇದೀಗ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. #ShameOnYouStalin ಎನ್ನುವ ಹ್ಯಾಷ್ ಟ್ಯಾಗ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಅಲ್ಲದೆ ಸ್ಟಾಲಿನ್ ಪುತ್ರ ಹಾಗೂ ಡಿಸಿಎಂ ಉದಯನಿಧಿ ಸ್ಟಾಲಿನ್ ಮೇಲೂ ಆಕ್ರೋಶ ವ್ಯಕ್ತವಾಗಿದೆ. ಚೆನ್ನೈನ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಈ ವಿಶ್ವ ವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಡಿಸೆಂಬರ್ 23ಕ್ಕೆ ಈ ಘಟನೆ ನಡೆದಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯು ಆಕೆಯ ಗೆಳಯನೊಂದಿಗೆ ಮಾತನಾಡುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಸಂತ್ರಸ್ತೆ ಹಾಗೂ ಆಕೆಯ ಗೆಳಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಇವರನ್ನು ಹೆದರಿಸಿದ್ದಾರೆ. ಸಂತ್ರಸ್ತೆಯ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಮುಂದುವರಿದು ದುಷ್ಕರ್ಮಿಗಳು ಬಲವಂತವಾಗಿ ಆಕೆಯ ಬಟ್ಟೆ ಬಿಚ್ಚಿಸಿ, ವೀಡಿಯೊ ಮಾಡಿಕೊಂಡು ಬೆದರಿಕೆ ಹಾಕಿದ್ದಾರೆ. ಆ ಮೇಲೆ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯಿಂದ ಆಘಾತಕ್ಕೆ ಒಳಗಾದ ಸಂತ್ರಸ್ತೆ ತಮಿಳುನಾಡಿನ ಕೊಟ್ಟೂರುಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಡಿಎಂಕೆಯೊಂದಿಗೆ ಸಂಬಂಧ ಆರೋಪ: ಇನ್ನು ಆರೋಪಿಯನ್ನು ಇಲ್ಲಿನ ಕೊಟ್ಟೂರುಪುರಂನ ರಸ್ತೆ ಬದಿಯಲ್ಲಿ ಬಿರಿಯಾನಿ ಮಾರಾಟ ಮಾಡುವ ಜ್ಞಾನಶೇಖರನ್ 37 ಎಂದು ಗುರುತಿಸಲಾಗಿದ್ದು. ಈ ಕೇಸ್ಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇನ್ನು ಆರೋಪಿಯ ಮೇಲೆ ಈಗಾಗಲೇ ಹಲವು ಪ್ರಕರಣಗಳು ಬಾಕಿ ಇವೆ ಎಂದು ಹೇಳಲಾಗಿದೆ. ಈ ನಡುವೆ ಆರೋಪಿಯು ತಮಿಳುನಾಡಿನ ಆಡಳಿತರೂಢ ಡಿಎಂಕೆ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗುತ್ತಿದ್ದೆ. ಇದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಸಚಿವ ಮಾ. ಸುಬ್ರಮಣಿಯನ್ ಸೇರಿದಂತೆ ಪ್ರಮುಖ ಡಿಎಂಕೆ ನಾಯಕರೊಂದಿಗೆ ಆರೋಪಿ ಇರುವ ಚಿತ್ರಗಳು ವೈರಲ್ ಆಗುತ್ತಿವೆ.
ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಈ ವಿಚಾರವಾಗಿ ಡಿಎಂಕೆ ಸರ್ಕಾರವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇವುಗಳನ್ನು ತಡೆಯುವಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿಫಲರಾಗಿದ್ದಾರೆ ಎಂದಿದ್ದಾರೆ.
#ShameOnYouStalin ಟ್ರೆಂಡ್
ಸೋಷಿಯಲ್ ಮೀಡಿಯಾದಲ್ಲಿ #ShameOnYouStalin ಸ್ಟಾಲಿನ್ ಅವರೇ ನಿಮಗೆ ನಾಚಿಕೆಯಾಗಬೇಕು ಎನ್ನುವ ಪದ ಟ್ರೆಂಡ್ ಸೃಷ್ಟಿ ಮಾಡಿದೆ. ಚೆನ್ನೈನ ಹೃದಯಭಾಗದಲ್ಲಿರುವ ಅಣ್ಣಾ ವಿಶ್ವವಿದ್ಯಾಲಯದಂತಹ ಪ್ರಮುಖ ಸಂಸ್ಥೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದಾದರೆ ಹೇಗೆ ಎಂದು ಪ್ರಶ್ನೆ ಮಾಡಲಾಗುತ್ತಿದೆ. ಆರೋಪಿ ಜ್ಞಾನಶೇಖರನ್ ರಕ್ಷಣೆ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಡಿಎಂಕೆ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತೀವ್ರ ಪ್ರತಿಭಟನೆ: ಈ ಘಟನೆಗೆ ತಮಿಳುನಾಡಿನಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ವಿದ್ಯಾರ್ಥಿಪರ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ. ಅಣ್ಣಾ ವಿಶ್ವವಿದ್ಯಾಲಯದಲ್ಲಿ ಇರುವ ಇನ್ನುಳಿದ ವಿದ್ಯಾರ್ಥಿನಿಯರ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಸ್ಟಾಲಿನ್ ವಿರುದ್ಧವೂ ಆಕ್ರೋಶ: ಇನ್ನು ಈ ಕೇಸ್ ವಿಚಾರವಾಗಿ ಡಿಸಿಎಂ ಉದಯನಿಧಿ ಸ್ಟಾಲಿನ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯರಿಗೆ ಉದಯನಿಧಿ ಸ್ಟಾಲಿನ್ ಗೌರವ ನೀಡುತ್ತಿಲ್ಲ ಎನ್ನಲಾಗಿದೆ. ಮಹಿಳೆಯರ ಬಗ್ಗೆ ಮಾತನಾಡಿರುವ ವಿಡಿಯೋ ಸಹ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications