ರಾಜ್ಯಪಾಲ ಹುದ್ದೆಗೆ ಶಂಕರಮೂರ್ತಿ, ಆನಂದಿ ಬೆನ್ ಹೆಸರು?
ಬೆಂಗಳೂರು, ಆಗಸ್ಟ್ 18 : ತಮಿಳುನಾಡಿನ ಮುಂದಿನ ರಾಜ್ಯಪಾಲರು ಯಾರು? ಎಂಬ ಪ್ರಶ್ನೆ ಕುತೂಹಲ ಮೂಡಿಸಿದೆ. ಸದ್ಯ, ರಾಜ್ಯಪಾಲರಾಗಿರುವ ಕೆ.ರೋಸಯ್ಯ ಅವರ ಅವಧಿ ಆಗಸ್ಟ್ 31ರಂದು ಮುಕ್ತಾಯಗೊಳ್ಳಲಿದ್ದು, ನೂತನ ರಾಜ್ಯಪಾಲರ ನೇಮಕವಾಗಬೇಕಿದೆ.
ತಮಿಳುನಾಡು ರಾಜ್ಯಪಾಲರ ಹುದ್ದೆಗೆ ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಡಿ.ಎಚ್.ಶಂಕರಮೂರ್ತಿ ಅವರ ಹೆಸರು ಬಹುತೇಕ ಅಂತಿಮವಾಗಿತ್ತು. ಆದರೆ, ಈಗ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಹೆಸರು ಕೇಳಿಬರುತ್ತಿದೆ.[ತಮಿಳುನಾಡು ರಾಜ್ಯಪಾಲರಾಗಿ ಡಿ.ಎಚ್.ಶಂಕರಮೂರ್ತಿ ಆಯ್ಕೆ?]

ಕೆ.ರೋಸಯ್ಯ ಅವರ ಅವಧಿ ಆಗಸ್ಟ್ 31ಕ್ಕೆ ಮುಕ್ತಾಯಗೊಳ್ಳಲಿದೆ. ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ನೇಮಕವಾದ ರಾಜ್ಯಪಾಲರಲ್ಲಿ ತಮ್ಮ ಅವಧಿಯನ್ನು ಪೂರ್ಣಗೊಳಿಸಿರುವುದು ರೋಸಯ್ಯ ಅವರು ಮಾತ್ರ. ರೋಸಯ್ಯ ಅವರ ನಂತರ ಡಿ.ಎಚ್.ಶಂಕರಮೂರ್ತಿ ಅವರು ರಾಜ್ಯಪಾಲರಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.[ಗುಜರಾತಿಗೆ ವಿಜಯ್ ರೂಪಾನಿ ಸಿಎಂ, ನಿತಿನ್ ಪಟೇಲ್ ಡಿಸಿಎಂ]
ಹೆಸರು ಅಂತಿಮವಾಗಿತ್ತು : ಕರ್ನಾಟಕ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಹೆಸರು ರಾಜ್ಯಪಾಲ ಹುದ್ದೆಗೆ ಬಹುತೇಕ ಅಂತಿಮವಾಗಿತ್ತು. ಕೆಲವು ದಿನಗಳ ಹಿಂದೆ ಅವರು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಹೊಸ ಜವಾಬ್ದಾರಿ ವಹಿಸಿಕೊಳ್ಳುಲು ಸಿದ್ಧರಾಗುವಂತೆ ಸೂಚನೆ ನೀಡಿದ್ದರು.[ಕರ್ನಾಟಕದ ಪ್ರಥಮ ಪ್ರಜೆಗಳ ಪಟ್ಟಿ 1956-2014]
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮೊದಲಿನಿಂದಲೂ ಕಾವೇರಿ ನದಿ ನೀರು ಹಂಚಿಕೆ ವಿವಾದವಿದೆ. ಆದ್ದರಿಂದ, ಕರ್ನಾಟಕದ ಡಿ.ಎಚ್.ಶಂಕರಮೂರ್ತಿ ಅವರ ಬದಲಾಗಿ ಆನಂದಿಬೆನ್ ಪಟೇಲ್ ಅವರ ಹೆಸರನ್ನು ಪರಿಗಣಿಸಲಾಯಿತು.

ಕರ್ನಾಟಕದವರನ್ನು ರಾಜ್ಯಪಾಲರಾಗಿ ನೇಮಕ ಮಾಡುವ ಬಗ್ಗೆ ಬಿಜೆಪಿ ರಾಷ್ಟ್ರೀ ನಾಯಕರ ಜೊತೆ ತಮಿಳುನಾಡಿನವರು ಮಾತುಕತೆ ನಡೆಸಿದ್ದಾರೆ ಎಂಬುದು ಸದ್ಯದ ಸುದ್ದಿ. ಮುಖ್ಯಮಂತ್ರಿ ಜಯಲಲಿತಾ ಅವರು ಮಹಿಳೆಯರನ್ನು ನೇಮಕ ಮಾಡುವ ಕುರಿತು ಆಸಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಒನ್ ಇಂಡಿಯಾ ಜೊತೆ ಮಾತನಾಡಿರುವ ಬಿಜೆಪಿಯ ಹಿರಿಯ ನಾಯಕರೊಬ್ಬರು ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. ಹಲವು ಹೊಸ ಹೆಸರುಗಳು ಪರಿಶೀಲನೆಯಲ್ಲಿದ್ದು, ಈ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications