ಶಿವಸೇನೆ ವಿಚಾರದಲ್ಲಿ ಚುನಾವಣಾ ಆಯೋಗದ ನಿರ್ಧಾರ ನಿರಾಕರಿಸಿದ ಶರದ್ ಪಾವರ್!
ಶಿವಸೇನೆ ವಿಚಾರದಲ್ಲಿ ಚುನಾವಣಾ ಆಯೋಗದ ನಿರ್ಧಾರಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬೈ ಫೆಬ್ರವರಿ 22: ಶಿವಸೇನಾ ಪಕ್ಷದ ಉಸ್ತುವಾರಿಯನ್ನು ಉದ್ದವ್ ಠಾಕ್ರೆ ವಹಿಸಬೇಕೆಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗವು ಶಿವಸೇನೆ ಹೆಸರು ಮತ್ತು ಪಕ್ಷದ ಬಿಲ್ಲು-ಬಾಣದ ಚಿಹ್ನೆಯನ್ನು ಏಕನಾಥ್ ಶಿಂಧೆ ಬಣಕ್ಕೆ ಹಂಚಿಕೆ ಮಾಡಿದ್ದನ್ನು ಶರದ್ ಪವಾರ್ ನಿರಾಕರಿಸಿದ್ದಾರೆ. ಶಿವಸೇನೆ ಮತ್ತು ಚಿಹ್ನೆಯನ್ನು ಏಕನಾಥ್ ಶಿಂಧೆಗೆ ನೀಡಿದ ಕೆಲವು ದಿನಗಳ ನಂತರ ಹಿರಿಯ ರಾಜಕಾರಣಿ ಪವಾರ್ ಈ ಹೇಳಿಕೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಚುನಾವಣಾ ಆಯೋಗದ ನಿರ್ಧಾರವನ್ನು ಪವಾರ್ "ರಾಜಕೀಯ ಪಕ್ಷಗಳ ಮೇಲಿನ ದೊಡ್ಡ ದಾಳಿ" ಎಂದು ಕರೆದಿದ್ದಾರೆ. "ತಮ್ಮ ಕೊನೆಯ ದಿನಗಳಲ್ಲಿ, ಬಾಳಾಸಾಹೇಬ್ ಠಾಕ್ರೆ ಅವರು ಶಿವಸೇನೆಯ ಜವಾಬ್ದಾರಿಯನ್ನು ತಮ್ಮ ನಂತರ ಉದ್ಧವ್ ಠಾಕ್ರೆ ಅವರಿಗೆ ನೀಡಬೇಕು ಎಂದಿದ್ದರು" ಎಂದು ಪವಾರ್ ಹೇಳಿದರು.

ಕೇಂದ್ರದ ವಿರುದ್ಧ ಪಾವರ್ ವಾಗ್ದಾಳಿ
"ಆದರೆ ಚುನಾವಣಾ ಆಯೋಗ ತೀರ್ಪು ನೀಡಿ ಶಿವಸೇನೆ ಮತ್ತು ಅದರ ಚಿಹ್ನೆಯನ್ನು ಬೇರೆಯವರಿಗೆ ಹಂಚಿಕೆ ಮಾಡಿದೆ. ಇದು ರಾಜಕೀಯ ಪಕ್ಷಗಳ ಮೇಲೆ ದೊಡ್ಡ ದಾಳಿಯಾಗಿದೆ" ಎಂದು ಅವರು ಕಿಡಿ ಕಾರಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಪವಾರ್, 'ಇಂದು ಚುನಾವಣಾ ಆಯೋಗ ಮತ್ತು ಇತರ ಸಂಘಟನೆಗಳು ಆಡಳಿತಾರೂಢ ಸರ್ಕಾರಕ್ಕೆ ಬೇಕಾದ ನಿರ್ಧಾರಗಳನ್ನು ನೀಡುತ್ತಿವೆ, ಇಂದು ಮೋದಿ ನೇತೃತ್ವದಲ್ಲಿ ದೇಶದಲ್ಲಿ ಸಂಘಟನೆಗಳು ಕೆಲಸ ಮಾಡುತ್ತಿವೆ' ಎಂದು ಕಿಡಿ ಕಾರಿದರು.

ಹೊಸ ಚಿಹ್ನೆಯನ್ನು ಘೋಷಿಸಿ ಎಂದು ಪಾವರ್ ಸಲಹೆ
ಅವರು ಇಡಿಯನ್ನು ಬಿಜೆಪಿಯ ಏಜೆಂಟ್ ಎಂದು ಕರೆದರು. ಬಳಿಕ ಉದ್ಧವ್ ಠಾಕ್ರೆಗೆ ಶರದ್ ಪಾವರ್ ಸಲಹೆಯನ್ನು ನೀಡಿದ್ದಾರೆ. ಭಾರತದ ಚುನಾವಣಾ ಆಯೋಗ ಶಿವಸೇನೆ ಹೆಸರು ಮತ್ತು ಪಕ್ಷದ 'ಬಿಲ್ಲು ಮತ್ತು ಬಾಣ' ಚಿಹ್ನೆಯನ್ನು ಏಕನಾಥ್ ಶಿಂಧೆ ಅವರ ಬಣಕ್ಕೆ ಹಂಚಿಕೆ ಮಾಡಿದ ನಂತರ, ಶರದ್ ಪವಾರ್ ಚುನಾವಣಾ ಸಂಸ್ಥೆಯ ನಿರ್ಧಾರವನ್ನು ಅಂಗೀಕರಿಸಿ ಹೊಸ ಚಿಹ್ನೆಯನ್ನು ತೆಗೆದುಕೊಳ್ಳುವಂತೆ ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದರು.

ಚಿಹ್ನೆಯಿಂದ ಯಾವ ನಷ್ಟವಿಲ್ಲ
ಇದು ಚುನಾವಣಾ ಆಯೋಗದ ನಿರ್ಧಾರ. ಒಮ್ಮೆ ನಿರ್ಧಾರ ನೀಡಿದ ನಂತರ ಚರ್ಚೆ ನಡೆಸುವಂತಿಲ್ಲ. ಅದನ್ನು ಸ್ವೀಕರಿಸಿ ಮತ್ತು ಹೊಸ ಚಿಹ್ನೆಯನ್ನು ತೆಗೆದುಕೊಳ್ಳಿ. ಇದು [ಹಳೆಯ ಚಿಹ್ನೆಯ ನಷ್ಟ] ಯಾವುದೇ ಪ್ರಮುಖ ಪರಿಣಾಮವನ್ನು ಬೀರುವುದಿಲ್ಲ. ಏಕೆಂದರೆ ಜನರು ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ"ಎಂದು ಪವಾರ್ ಉದ್ಧವ್ ಠಾಕ್ರೆಗೆ ಸೂಚನೆ ನೀಡಿದರು.

ಜನರು ಉದ್ಧವ್ ಠಾಕ್ರೆಯ ಹೊಸ ಚಿಹ್ನೆ ಸ್ವೀಕರಿಸುತ್ತಾರೆ- ಪಾವರ್
ಪಕ್ಷದ ಚಿಹ್ನೆಯ ಬದಲಾವಣೆಯು ಜನರ ಮೇಲೆ ಹೇಗೆ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ನ ಉದಾಹರಣೆಯನ್ನು ಪವಾರ್ ಉಲ್ಲೇಖಿಸಿದ್ದರು. "ಕಾಂಗ್ರೆಸ್ ಹಿಂದೆ 'ಎರಡು ಎತ್ತುಗಳು' ಚಿಹ್ನೆಯನ್ನು ಹೊಂದಿತ್ತು, ನಂತರ ಅವರು 'ಕೈ' ಅನ್ನು ಹೊಸ ಚಿಹ್ನೆಯಾಗಿ ಸ್ವೀಕರಿಸಿದರು ಮತ್ತು ಜನರು ಅದನ್ನು ಒಪ್ಪಿಕೊಂಡರು. ಹಾಗೆಯೇ, ಜನರು ಹೊಸ ಚಿಹ್ನೆಯನ್ನು [ಉದ್ಧವ್ ಠಾಕ್ರೆ ಬಣದ] ಸ್ವೀಕರಿಸುತ್ತಾರೆ" ಎಂದು ಹಿರಿಯ ರಾಜಕಾರಣಿ ಹೇಳಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications