ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತ & ಏರಿಕೆ!
2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಅಂತ್ಯವಾಗಿದೆ. ಬಹುತೇಕ ಶಾಂತಿಯುತವಾಗಿ ಮತದಾನ ಮುಗಿದಿದ್ದರೂ, ಷೇರು ಮಾರುಕಟ್ಟೆಯಲ್ಲಿ ಇಂದು ಸಂಚಲನ ಸೃಷ್ಟಿ ಆಗಿತ್ತು. ಅದರಲ್ಲೂ ಇಂದು ಬೆಳಗ್ಗೆ ಷೇರು ಮಾರುಕಟ್ಟೆ ಆರಂಭವಾದ ಸಮಯದಲ್ಲಿ, ಭಾರಿ ದೊಡ್ಡ ಎಡವಟ್ಟೇ ನಡೆದಿತ್ತು!
ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಭಯ ಆವರಿಸಿದೆ. ಇದೇ ಸಮಯದಲ್ಲಿ ಇಂದು ಭಾರತದಲ್ಲಿ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಆದರೆ ಹೀಗೆ ಇಸ್ರೇಲ್ & ಇರಾನ್ ನಡುವೆ ಯುದ್ಧ ಭೀತಿ ಆವರಿಸಿದ ಕಾರಣಕ್ಕೆ, ಭಾರತದ ಷೇರು ಮಾರುಕಟ್ಟೆ ನಲುಗಿ ಹೋಗಿತ್ತು. ಆರಂಭದಲ್ಲಿ ಭಾರಿ ಕುಸಿತ ಕಂಡ ಭಾರತದ ಷೇರು ಮಾರುಕಟ್ಟೆ, ಅಂತಿಮವಾಗಿ ಹೂಡಿಕೆದಾರರಿಗೆ ಕೊಟ್ಟಿದ್ದು ಏನು ಗೊತ್ತಾ? ಮುಂದೆ ಓದಿ.

ಯುದ್ಧಕ್ಕೆ ಕಾರಣ ಏನು ಗೊತ್ತೆ?
ಅಂದಹಾಗೆ ಡಮಾಸ್ಕಸ್ನ ಇರಾನ್ ರಾಯಭಾರ ಕಚೇರಿ ಮೇಲೆ ಏಪ್ರಿಲ್ 1 ರಂದು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್ ಅಟ್ಟಹಾಸ ಮೆರೆದಿದೆ ಎಂದು ಇರಾನ್ ಆರೋಪಿಸಿತ್ತು. ಡಮಾಸ್ಕಸ್ ಮೇಲೆ ಇಸ್ರೇಲ್ ದಾಳಿ ಮಾಡಿದಾಗ, ಇರಾನ್ ಸೇನಾಧಿಕಾರಿಗಳು ಸೇರಿ ಹಲವು ಇರಾನ್ ಅಧಿಕಾರಿ ವರ್ಗ ಜೀವ ಬಿಟ್ಟಿದೆ ಎಂದು ಮಾಹಿತಿ ನೀಡಿ ಆಕ್ರೋಶ ಹೊರಹಾಕಿತ್ತು ಇರಾನ್. ಆ ನಂತರವೇ ಯುದ್ಧ ಭೀತಿ ಆವರಿಸಿತ್ತು, ಇನ್ನು ಮತ್ತೊಂದು ಕಡೆ ಈಗಾಗಲೇ ಸುಮಾರು 200 ಮಿಸೈಲ್ ಹಾಗೂ ಡ್ರೋನ್ಗಳ ಮೂಲಕ ಇರಾನ್ ಸೇನೆ ದಾಳಿ ಮಾಡಿದೆ. ಆ ನಂತರ ಇಸ್ರೇಲ್ ಕೂಡ ಮರು ದಾಳಿ ನಡೆಸಿದೆ ಎಂಬ ಆರೋಪ ಇದೆ. ಇಷ್ಟೆಲ್ಲ ಬೆಳವಣಿಗೆಯಿಂದ ಇಂದು ಭಾರತದ ಷೇರು ಪೇಟೆ ನಲುಗಿತ್ತು, ಅದರಲ್ಲೂ ಲೋಕಸಭೆ ಚುನಾವಣೆ ಆರಂಭದ ದಿನವೇ ಹೀಗೆಲ್ಲಾ ಆತಂಕ ಮೂಡಿತ್ತು.
ಮೊದಲು ಕುಸಿತ, ನಂತರ ಏರಿಕೆ!
ಹೌದು, ಯುದ್ಧ ಭೀತಿ ಹಿನ್ನೆಲೆಯಲ್ಲಿ ಇಂದು ಭಾರತದ ಷೇರು ಮಾರುಕಟ್ಟೆ ತೀವ್ರ ಕುಸಿತ ಕಂಡಿತ್ತು. ಆರಂಭದಲ್ಲಿ ಭಾರಿ ಹಿನ್ನಡೆ ಕಂಡಿದ್ದ ಭಾರತೀಯ ಷೇರುಪೇಟೆ, ಅಂತಿಮವಾಗಿ ಒಂದಷ್ಟು ಚೇತರಿಕೆ ಕಾಣುತ್ತಾ ಬಂದು, ಕೊನೆಗೂ ಉತ್ತಮ ರೀತಿಯಲ್ಲಿ ತನ್ನ ವಹಿವಾಟು ಮುಂದುವರಿಸಿತು. ಆದರೆ ಇಂದು ಷೇರು ಮಾರುಕಟ್ಟೆ ಆರಂಭ ಆದ ಸಮಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಕೊನೆಗೂ ಅದನ್ನೆಲ್ಲಾ ನಿಭಾಯಿಸುವಲ್ಲಿ, ಭಾರತೀಯ ಷೇರು ಮಾರುಕಟ್ಟೆ ತನ್ನ ಬುದ್ಧಿ ಶಕ್ತಿ ಉಪಯೋಗಿಸಿತ್ತು. ಕೊನೆಗೂ ಹೂಡಿಕೆದಾರರಿಗೆ ಖುಷಿಯನ್ನ ಕೊಟ್ಟಿತ್ತು ಷೇರು ಮಾರುಕಟ್ಟೆ.
ಶೇಕಡಾ 60ರಷ್ಟು ಮತದಾನ
2024 ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ, ಇಂದು ಸಂಜೆ ಕೊನೆಯಾಗಿದೆ. ಭಾರತದ 21 ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟಾರೆ 102 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆದಿದೆ. ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ವಿವಿಧ ರಾಜ್ಯಗಳಲ್ಲಿ ಒಟ್ಟಾರೆ ಶೇ. 60ರಷ್ಟು ಮತದಾನ ಆಗಿದೆ. ಇನ್ನು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಶೇ. 77.57 ರಷ್ಟು ವೋಟಿಂಗ್ ಆಗಿದೆ. ತಮಿಳುನಾಡಿನಲ್ಲಿ ಶೇ. 63.2 ಮತದಾನ ನಡೆದಿದ್ದರೆ, ರಾಜಸ್ಥಾನದಲ್ಲಿ ಶೇ. 50.3, ಉತ್ತರ ಪ್ರದೇಶದಲ್ಲಿ ಶೇಕಡಾ 57.5ರಷ್ಟು & ಮಧ್ಯಪ್ರದೇಶದಲ್ಲಿ ಶೇ. 63.3ರಷ್ಟು ಮತದಾನ ನಡೆದಿದೆ. ಹಾಗೇ ಇನ್ನುಳಿದ ರಾಜ್ಯಗಳಲ್ಲೂ ಅದ್ಭುತವಾಗಿ ಮತದಾನ ನಡೆದಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications