ಸುನಂದಾ ಪುಷ್ಕರ್ ಸಾವಿನ ಸಾಕ್ಷ್ಯಾಧಾರ ನಾಶ: ಸುಬ್ರಮಣ್ಯಂ ಸ್ವಾಮಿ ಆರೋಪ
ಸುನಂದಾ ಪುಷ್ಕರ್ ಸಾವಿನ ಬಗ್ಗೆ ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಹೇಳಿಕೆ. ಮೂರು ವರ್ಷಗಳ ತನಿಖೆ ನಂತರ ಸಾವಿಗೆ ಕಾರಣರಾದವರನ್ನು ಹಿಡಿಯದ ದೆಹಲಿ ಪೊಲೀಸ್ ವಿರುದ್ಧ ವಾಗ್ದಾಳಿ.
ನವದೆಹಲಿ, ಜುಲೈ 22: ಮೂರು ವರ್ಷಗಳ ಹಿಂದೆ ನಡೆದಿದ್ದ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ತನಿಖೆಯನ್ನು ಸರಿಯಾಗಿ ನಡೆಸಲಾಗಿಲ್ಲ ಎಂದು ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಆರೋಪಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಸೂಕ್ತವಾಗಿ ಮಾಡಿಲ್ಲ. ಸುನಂದಾ ಅವರ ಪತಿ ಶಶಿ ತರೂರ್ ಅವರು ತಮ್ಮ ಪತ್ನಿಯ ಸಾವಿನ ವಿಚಾರದಲ್ಲಿ ತನಿಖಾಧಿಕಾರಿಗಳ ಮುಂದೆ ಸಾಕಷ್ಟು ಸುಳ್ಳು ಹೇಳಿದ್ದಾರೆ. ಅಲ್ಲದೆ, ಪ್ರಕರಣದ ಹಲವಾರು ಸಾಕ್ಷ್ಯಾಧಾರಗಳನ್ನು ನಾಶಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ದೆಹಲಿ ಪೊಲೀಸರ ವಿರುದ್ಧ ಹರಿಹಾಯ್ದ ಅವರು, ಕೊಲೆಗಡುಕ ಯಾರೆಂಬುದು ತಿಳಿದುಬಂದಿಲ್ಲ ಎಂದು ಹೇಳಲು ದೆಹಲಿ ಪೊಲೀಸರಿಗೆ ಮೂರು ವರ್ಷ ಬೇಕಾಯಿತೇ? ಎಂದು ಕಿಡಿಕಾರಿದರಲ್ಲದೆ, ಈ ಪ್ರಕರಣವನ್ನು ಬೇರೊಂದು ತನಿಖಾ ಸಂಸ್ಥೆಯ ಕಡೆಯಿಂದ ಮತ್ತೊಮ್ಮೆ ತನಿಖೆಗೆ ಒಳಪಡಿಸುವುದು ಸರಿ ಎಂದು ತಿಳಿಸಿದ್ದಾರೆ. ಮರು ತನಿಖೆಯನ್ನು ನಡೆಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸೂಕ್ತ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಏತನ್ಮಧ್ಯೆ, ಸುನಂದಾ ಅವರು ಸಾವನ್ನಪ್ಪಿದ ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನ 345ನೇ ಕೊಠಡಿಯನ್ನು ತೆರೆಯುವಂತೆ ದೆಹಲಿ ನ್ಯಾಯಾಲಯ, ದೆಹಲಿ ಪೊಲೀಸರಿಗೆ ಜುಲೈ 21ರಂದು ಸೂಚಿಸಿದೆ. 2013ರಲ್ಲಿ ಸುನಂದಾ ಅವರು ಸಾವನ್ನಪ್ಪಿದಾಗಿನಿಂದ ಆ ಕೊಠಡಿಗೆ ಬೀಗ ಮುದ್ರೆ ಜಡಿಯಲಾಗಿತ್ತು. ಆದರೆ, ಮೂರು ವರ್ಷಗಳಾದರೂ, ತನಿಖೆಯೂ ಮುಗಿಯದೇ, ಕೊಠಡಿಯನ್ನೂ ತೆರಯಲು ಅವಕಾಶವಿಲ್ಲದಿರುವುದರಿಂದ ತಮಗೆ ನಷ್ಟವಾಗುತ್ತಿದೆ ಎಂದು ಲೀಲಾ ಪ್ಯಾಲೇಸ್ ಹೋಟೆಲ್ ಸಂಸ್ಥೆಯು ನ್ಯಾಯಾಲಯದ ಕದ ತಟ್ಟಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಆದೇಶ ನೀಡಿದೆ.

ಏನಿದು ಸುನಂದಾ ಪುಷ್ಕರ್ ಸಾವು ಪ್ರಕರಣ?
2013ರ ಜನವರಿ 17ರಂದು ಸುನಂದಾ ಪುಷ್ಕರ್ ಅವರು, ತಾವು ವಾಸಿಸುತ್ತಿದ್ದ ದೆಹಲಿಯ ಚಾಣಕ್ಯಪುರಿಯಲ್ಲಿರುವ ಲೀಲಾ ಪ್ಯಾಲೇಸ್ ಹೋಟೆಲ್ ನ 345ನೇ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ತಮ್ಮ ಪತಿ ಶಶಿ ತರೂರ್ ಜತೆಗೆ ಬಂಗಲೆಯೊಂದರಲ್ಲಿ ಜೀವಿಸುತ್ತಿದ್ದ ಅವರು, ಬಂಗಲೆ ನವೀಕರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ವಸತಿಗಾಗಿ ಲೀಲಾ ಪ್ಯಾಲೇಸ್ ಗೆ ಸ್ಥಳಾಂತರಗೊಂಡಿದ್ದರು.
ಅವರ ಸಾವಿನ ಪ್ರಕರಣ ಬಹಿರಂಗೊಳ್ಳುತ್ತಿದ್ದಂತೆಯೇ ಎಲ್ಲರ ಅನುಮಾನಗಳು ಅವರ ಪತಿ ಶಶಿ ತರೂರ್ ಮೇಲೆಯೇ ಹರಿದಿತ್ತು. ಏಕೆಂದರೆ, ಶಶಿ ತರೂರ್ ಅವರು ಸುನಂದಾ ಅವರ 3ನೇ ಪತಿ. ಈ ಹಿಂದೆ ಅವರು, ಸಂಜಯ್ ರೈನಾ, ಸುಜಿತ್ ಮೆನನ್ ಎಂಬುವರನ್ನು ಮದುವೆಯಾಗಿದ್ದರು.
ಸುನಂದಾ ಅವರು ಸಾಯುವ ಕೆಲ ದಿನಗಳ ಮೊದಲು ಶಶಿ ತರೂರ್ ಅವರು ಪಾಕಿಸ್ತಾನದ ಪತ್ರಕರ್ತೆಯೊಬ್ಬರೊಂದಿಗೆ ಸ್ನೇಹ ಇದ್ದಿದ್ದರ ಬಗ್ಗೆ ಮಾಧ್ಯಮಗಳಲ್ಲಿ ಪ್ರಸ್ತಾಪವಾಗಿ, ಇದು ಶಶಿ ಹಾಗೂ ಸುನಂದಾ ಅವರ ನಡುವೆ ಮನಸ್ತಾಪಕ್ಕೆ ಕಾರಣವಾಗಿತ್ತೆಂದು ಹೇಳಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications