ಶಶಿ ತರೂರ್, ಜೈರಾಮ್ ರಮೇಶ್ ವಿರುದ್ಧ ಹುಲಿಯಂತೆ ಅಬ್ಬರಿಸಿದ ಮೊಯಿಲಿ
ಯುಪಿಎ ಸರಕಾರದ ಎರಡನೇ ಅವಧಿಯಲ್ಲಿ 'ನೀತಿ ಅಸ್ತವ್ಯಸ್ತ' ಆಗುವುದಕ್ಕೆ ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಕಾರಣ ಎಂದು ಕೇಂದ್ರದ ಮಾಜಿ ಸಚಿವ- ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಆರೋಪ ಮಾಡಿದ್ದಾರೆ. ಹಲವು ವಿಚಾರಗಳಲ್ಲಿ ಕಾಂಗ್ರೆಸ್ ನಿಂದ ಮೋದಿಯನ್ನು ಕೆಟ್ಟದಾಗಿ ಬಿಂಬಿಸುತ್ತಿದ್ದರೂ ಮೊಯಿಲಿ ಅವರು ಜೈರಾಂ ರಮೇಶ್ ಮೇಲೆ ಆರೋಪಗಳನ್ನು ಮಾಡಿದ್ದಾರೆ.
ಯುಪಿಎ ಸರಕಾರದ ಎರಡನೇ ಅವಧಿಯಲ್ಲಿ ಸರಕಾರದ ನೀತಿ ದಿಕ್ಕು ತಪ್ಪಲು ಜೈರಾಂ ರಮೇಶ್ ಜವಾಬ್ದಾರಿ. ಮತ್ತು ಹಲವು ಬಾರಿ ಸರಕಾರದ ಆಡಳಿತದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗಲು ಸಹ ಅವರೇ ಕಾರಣ ಎಂದು ಮೊಯಿಲಿ ಆರೋಪ ಮಾಡಿದ್ದಾರೆ.
ಆಡಳಿತಾರೂಢ ಬಿಜೆಪಿ ಪರವಾಗಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಪ್ರತಿಕ್ರಿಯೆ ನೀಡುವಂತೆ, ಇದು ದುರದೃಷ್ಟಕರ. ಈ ನಾಯಕರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಅದರಲ್ಲೂ ಜೈರಾಮ್ ರಮೇಶ್ ಅವರ ಹೇಳಿಕೆ ಬಹಳ 'ಕೆಟ್ಟ ಅಭಿರುಚಿ'ಯದು. ಅವರು ಇಂಥ ಹೇಳಿಕೆ ನೀಡುವ ಮೂಲಕ ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ ಮೊಯಿಲಿ.

ಯಾವುದೇ ನಾಯಕರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಅಂದರೆ, ನನಗನ್ನಿಸುತ್ತದೆ ಅವರು ಕಾಂಗ್ರೆಸ್ ಪಕ್ಷಕ್ಕಾಗಲೀ ನಾಯಕತ್ವಕ್ಕಾಗಲೀ ಏನೂ ಸೇವೆ ನೀಡುತ್ತಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಶಶಿ ತರೂರ್ ಆಗಾಗ ತಮಗೆ ಬೇಕಾದಂತೆ ಹೇಳಿಕೆ ನೀಡಿ ಮಾಧ್ಯಮಗಳಲ್ಲಿ ಸ್ಥಾನ ಗಿಟ್ಟಿಸಲು ಪ್ರಯತ್ನಿಸುತ್ತಾರೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಅಂತ ನನಗೆ ಅನಿಸಲ್ಲ. ಅವರು ಗಂಭೀರವಾದ ರಾಜಕಾರಣಿ ಆಗಬೇಕು. ಅದು ನಮ್ಮ ಮನವಿ ಎಂದು ವೀರಪ್ಪ ಮೊಯಿಲಿ ಹೇಳಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications