'ಪೊಗೊನೋಟ್ರೋಫಿ': ಹೊಸ ಪದ ಕಲಿತು ಮೋದಿ ಕಾಲೆಳೆದ ಶಶಿ ತರೂರ್
ನವದೆಹಲಿ, ಜು. 03: ವಿರಳವಾಗಿ ಬಳಸುವ ಇಂಗ್ಲಿಷ್ ಪದಗಳ ಬಗ್ಗೆ ಹೆಚ್ಚು ಒಲವು ಹೊಂದಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್, ಶುಕ್ರವಾರ ತಮ್ಮ ನಿಘಂಟುಗಳಿಗೆ ಇನ್ನೊಂದು ಪದವನ್ನು ಸೇರಿಸಿದ್ದಾರೆ ಅದುವೇ, 'ಪೊಗೊನೋಟ್ರೋಫಿ' (Pogonotrophy).
''ಗಡ್ಡವನ್ನು ಬೆಳಸುವುದು'' ಎಂದು ಅರ್ಥ ಹೊಂದಿರುವ ''ಪೊಗೊನೋಟ್ರೋಫಿ'' ಎಂಬ ಹೊಸ ಪದವನ್ನು ತನ್ನ ಸ್ನೇಹಿತರಿಂದ ಕಲಿತಿರುವ ಶಶಿ ತರೂರ್, ಈ ಪದವನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿಯ ಕಾಲೆಳೆದಿದ್ದಾರೆ.
ಹೆಚ್ಚಾಗಿ ಟ್ವೀಟ್ಟರ್ನಲ್ಲಿ ಹೊಸ ಪದವನ್ನು ಬಳಸಿ ಅದನ್ನು ವಿವರಿಸುವ ಮೂಲಕವೇ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವ ಶಶಿ ತರೂರ್ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಟ್ವೀಟ್ಟರ್ನಲ್ಲಿ ಶಶಿ ತರೂರ್ನ ಅಭಿಮಾನಿಯೋರ್ವರು ತಾನು ಹೊಸ ಪದ ಕಲಿಯಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಡಾ.ಪ್ರಿಯಾ ಆನಂದ್ ಎಂಬವರು, ''ಸರ್, ನಿಮ್ಮ ಭಾಷಣಗಳನ್ನು ಹೊರತುಪಡಿಸಿ ನಾನು ಕೆಲವು ಹೊಸ ಪದಗಳನ್ನು ಕಲಿಯಲು ಕಾಯುತ್ತಿದ್ದೇನೆ. ಹೊಸ ಪದದ ಮೂಲಕ ಮನಸ್ಸನ್ನು ಕೆರಳಿಸುವುದು ಯಾವಾಗಲೂ ಅದ್ಭುತ,'' ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಶಿ ತರೂರ್, ''ಅರ್ಥಶಾಸ್ತ್ರಜ್ಞನಾದ ನನ್ನ ಸ್ನೇಹಿತ ರಾಥಿನ್ ರಾಯ್ ಇಂದು ನನಗೆ ಹೊಸ ಪದವನ್ನು ಕಲಿಸಿದರು. ಅದುವೇ ಪೊಗೊನೋಟ್ರೋಫಿ. ಇದರರ್ಥ 'ಗಡ್ಡವನ್ನು ಬೆಳೆಸುವುದು'. ಪ್ರಧಾನಮಂತ್ರಿಯವರ ಪೊಗೊನೋಟ್ರೋಫಿ ಸಾಂಕ್ರಾಮಿಕ ಮುನ್ಸೂಚನೆಯಾಗಿದೆ,'' ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಶಶಿ ತರೂರ್ನ ಈ ಹೊಸ ಪದ ಪರಿಚಯದ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಕೆಲವರು, "ಪ್ರಪಂಚವು ಆಕ್ಸ್ಫರ್ಡ್ ನಿಘಂಟನ್ನು ಹೊಂದಿದ್ದರೆ ಭಾರತಕ್ಕೆ ಏಕೆ ತಾರೂರು ನಿಘಂಟು ಇಲ್ಲ," ಎಂದು ಹೇಳಿದ್ದಾರೆ. ಹಾಗೆಯೇ ಇನ್ನೋರ್ವ ವ್ಯಕ್ತಿ, "ಥಾರೂರಿಕ್ಷನರಿ ಮೂಲಕ ಈ ಪದ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು" ಎಂದಿದ್ದಾರೆ. ಇನ್ನು ಮತ್ತೋರ್ವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಕಾಲೆಳೆದಿದ್ದು, ಮುಂದಿನ ರ್ಯಾಲಿಯಲ್ಲಿ ನನ್ನನ್ನು ಪಾಗಲೋಟ್ರೋಫಿ ಅಥವಾ ಪಕೋಡಾಟ್ರೋಫಿ ಎಂದು ಕರೆದರು ಎನ್ನಬಹುದು ಎಂದು ಲೇವಡಿ ಮಾಡಿದ್ದಾರೆ.
ಶಶಿ ತರೂರ್, ಹೊಸ ಪದ ಬಳಕೆ ಮಾಡುವುದು ಇದೇ ಮೊದಲೇನಲ್ಲ. ಈ ಹಿಂದೆ ಫ್ಲೋಕಿನೌಸಿನಿಹಿಲಿಪಿಲಿಫಿಕೇಷನ್ (floccinaucinihilipilification) ಎಂಬ ಪದವನ್ನು ಟ್ವೀಟ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಪದವು ಈಗಲೂ ಚರ್ಚೆಯ ವಿಷಯವಾಗಿದೆ. ಹಲವಾರು ಮಂದಿ ಈ ಪದವನ್ನು ಉಚ್ಛಾರ ಮಾಡುವುದೇ ದೊಡ್ಡ ಸಾಹಸ ಎಂದಿದ್ದಾರೆ. ಈ ಪದದ ಅರ್ಥ ಯಾವುದನ್ನಾದರೂ ನಿಷ್ಪ್ರಯೋಜಕವೆಂದು ಅಂದಾಜು ಮಾಡುವ ಕ್ರಿಯೆ ಅಥವಾ ಅಭ್ಯಾಸವಾಗಿದೆ. ಇನ್ನೂ ಹಲವು ಪದಗಳನ್ನು ಶಶಿ ತರೂರ್ ಬಳಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications